ಎಂ.ಎಸ್ ರೇವಣ್ಣ ನಿಧನ
ಎಂ.ಎಸ್ ರೇವಣ್ಣ
ಭದ್ರಾವತಿ : ತಾಲೂಕು ಕುರುಬರ ಸಂಘದ ಮಾಜಿ ಕಾರ್ಯದರ್ಶಿ, ಹಳೇನಗರ ದೊಡ್ಡ ಕುರುಬರ ಬೀದಿ, ಶ್ರೀ ಕೋಟೆ ಬಸವಣ್ಣ ದೇವಸ್ಥಾನ ಸಮೀಪದ ನಿವಾಸಿ ಎಂ.ಎಸ್ ರೇವಣ್ಣ(೭೪) ಶುಕ್ರವಾರ ನಿಧನ ಹೊಂದಿದರು.
ಪತ್ನಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ, ನಗರಸಭೆ ಮಾಜಿ ಅಧ್ಯಕ್ಷೆ ವೈ. ರೇಣುಮ್ಮ, ವೈದ್ಯ ಡಾ. ರಕ್ಷಿತ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ, ಅಳಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿ ಡಾ. ಮಲ್ಲಪ್ಪ ಇದ್ದಾರೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್, ಹಿರಿಯ ಪತ್ರಕರ್ತ ಕಣ್ಣಪ್ಪ, ತಾಲೂಕು ಕುರುಬ ಸಮಾಜದ ಪ್ರಮುಖರು, ಗಣ್ಯರು ರೇವಣ್ಣರವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.