ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಇದರ ಅಂಗವಾಗಿ ಭಕ್ತರಿಗೆ ಕಲ್ಪಿಸಲಾಗಿದ್ದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಭಕ್ತರ ಕಣ್ಮನ ಸೆಳೆಯಿತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. 
    ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.  ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥನ ವಿಶೇಷ ದರ್ಶನ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆಯಿಂದಲೇ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆದರು. ಸಂಜೆ ೬.೩೦ರಿಂದ ಸರಸ್ವತಿ ಕಲಾ ಸಂಗೀತ ಮತ್ತು ನೃತ್ಯ ಶಾಲೆ ವತಿಯಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. 


ಭದ್ರಾವತಿ ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.