ಡಾ. ಮಧುಕರ್‌ಶೆಟ್ಟಿ ೭ನೇ ವರ್ಷದ ಪುಣ್ಯಸ್ಮರಣೆ : ರಕ್ತದಾನ ಶಿಬಿರ

ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು. 
    ಭದ್ರಾವತಿ : ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು. 
    ಡಾ. ಮಧುಕರ್ ಶೆಟ್ಟಿ ಅಭಿಮಾನಿ ಬಳಗ ವತಿಯಿಂದ ಶ್ರೀ ತಿರುಮಲ ಚಾರಿಟಬಲ್ ಫೌಂಡೇಶನ್ ಹಾಗು ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಆರಂಭದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಮತ್ತು ಡಾ. ಮಧುಕರ್ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು. 


ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು. ಉಚಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖರಾದ ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ, ಪ್ರಮುಖರಾದ ಮುಕುಂದ, ಚೌಡಪ್ಪ, ಖದೀರ್, ಕೆಆರ್‌ಎಸ್ ಪಕ್ಷದ ಸಿ. ತೀರ್ಥೇಶ್, ಶ್ರೀ ತಿರುಮಲ ಚಾರಿಟಬಲ್ ಫೌಂಡೇಶನ್  ಪ್ರಶಾಂತ್, ಪತ್ರಕರ್ತರಾದ ಕೆ.ಎನ್ ರವೀಂದ್ರನಾಥ್(ಬ್ರದರ್), ಅನಂತಕುಮಾರ್ ಮತ್ತು ಕೆ.ಆರ್ ಶಂಕರ್  ಸೇರಿದಂತೆ ಇನ್ನಿತರರು ಮಾತನಾಡಿ, ಯಾವುದೇ ಫಲಾಫೇಕ್ಷೆ ಇಲ್ಲದೆ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿರುವುದು ಶ್ಲಾಘನೀಯವಾಗಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ ಎಂದರು.