ಭದ್ರಾವತಿ ನಗರದ ಯುವ ಮುಖಂಡ, ಕಾರ್ಮಿಕ ಹೋರಾಟಗಾರ ಎಚ್. ರವಿಕುಮಾರ್ರವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ
ಭದ್ರಾವತಿ : ನಗರದ ಯುವ ಮುಖಂಡ, ಕಾರ್ಮಿಕ ಹೋರಾಟಗಾರ ಎಚ್. ರವಿಕುಮಾರ್ರವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಹಿಂದೆ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು, ಹಲವಾರು ಕಾರ್ಮಿಕ ಹೋರಾಟಗಳ ನೇತೃತ್ವ ವಹಿಸಿದ್ದರು. ನಂತರ ರಾಜಕೀಯವಾಗಿ ಗುರುತಿಸಿಕೊಂಡು ಹಲವಾರು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದು, ಇವರ ಸೇವೆಯನ್ನು ಗುರುತಿಸಿ ಹಳೇನಗರದ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನ ವತಿಯಿಂದ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.