ಭದ್ರಾವತಿ ತಾಲೂಕಿನ ಕಡದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಳೇ ಭಂಡಾರಹಳ್ಳಿ ನಿವಾಸಿ ಬಿ.ಎಸ್ ಹನುಮಂತಪ್ಪ ಮತ್ತು ಉಪಾಧ್ಯಕ್ಷರಾಗಿ ವೀರಾಪುರ ಗ್ರಾಮದ ನಿವಾಸಿ ಇಂದ್ರೇಗೌಡ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ : ತಾಲೂಕಿನ ಕಡದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಳೇ ಭಂಡಾರಹಳ್ಳಿ ನಿವಾಸಿ ಬಿ.ಎಸ್ ಹನುಮಂತಪ್ಪ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಳಿದಂತೆ ವೀರಾಪುರ ಗ್ರಾಮದ ನಿವಾಸಿ ಇಂದ್ರೇಗೌಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕರಾದ ಬಿ. ಆನಂದ, ಸುರೇಶ್, ಉಮೇಶ್, ಕೆ.ಜಿ ರವಿಕುಮಾರ್, ಎ. ಭಾಗ್ಯಲಕ್ಷ್ಮೀ, ಪಾರ್ವತಮ್ಮ, ಡಿ. ಶಿವಶಂಕರ್, ನಾಗರಾಜನಾಯ್ಕ, ಹನುಮಂತಪ್ಪ ಮತ್ತು ವೆಂಕಟೇಶ್ ಪಾಲ್ಗೊಂಡಿದ್ದರು.
ಪ್ರಸ್ತುತ ನೂತನ ಅಧ್ಯಕ್ಷರಾಗಿರುವ ಬಿ.ಎಸ್ ಹನುಮಂತಪ್ಪ ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿದ್ದು, ಅವಿರೋಧವಾಗಿ ಆಯ್ಕೆಯಾಗಿರುವ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.