Sunday, January 12, 2025

ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಓಂ ಕ್ರಿಕೆಟರ್‍ಸ್ ತಂಡಕ್ಕೆ ಮೊದಲ ಬಹುಮಾನ, ಟ್ರೋಫಿ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭಾನುವಾರ ಜರುಗಿದ ಅಂತಿಮ ಪಂದ್ಯಾದಲ್ಲಿ ಬೆಂಗಳೂರಿನ ಜೈ ಕರ್ನಾಟಕ ತಂಡ ವಿರುದ್ಧ ಓಂ ಕ್ರಿಕೆಟರ್‍ಸ್ ತಂಡ ಜಯಭೇರಿ ಭಾರಿಸಿತು. ಮೊದಲನೇ ಬಹುಮಾನ ೨.೫೦ ಲಕ್ಷ ರು. ನಗದು ಮತ್ತು ಟ್ರೋಫಿ ಪಡೆದುಕೊಂಡಿತು. ಎರಡನೇ ಬಹುಮಾನ ಜೈ ಕರ್ನಾಟಕ ತಂಡ ಎರಡನೇ ಬಹುಮಾನ ೧.೨೫ ಲಕ್ಷ ರು. ನಗದು ಮತ್ತು ಟ್ರೋಫಿ ತನ್ನದಾಗಿಸಿಕೊಂಡಿತು. ಮೂರನೇ ಬಹುಮಾನ ಸಚಿನ್ ಇಲೆವೆನ್ ಬೆಂಗಳೂರು ಮತ್ತು ಪ್ರಕೃತಿ ನ್ಯಾಶ್ ತಂಡಗಳು ಹಂಚಿಕೊಂಡಿವೆ. 
    ಚಲನಚಿತ್ರ ನಟ ವಸಿಷ್ಠ ಸಿಂಹ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು. ಓಂ ಕ್ರಿಕೆಟರ್‍ಸ್ ಕ್ಲಬ್ ಅಧ್ಯಕ್ಷ ಗಿರೀಶ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ಪ್ರಮುಖರಾದ ಕುಮಾರ್(ಮಾಸ್ಟರ್), ಅಭಿಲಾಷ್, ಚಂದ್ರಶೇಖರ್, ಶಿವು ಪಾಟೀಲ್, ಕೇಶವ, ಮಂಜುನಾಥ್ ಕೊಯ್ಲಿ ಮತ್ತು  ವೈ. ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕೊಲೆ ಪ್ರಕರಣದಲ್ಲಿ ೨೬ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

೨೬ ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ. 
    ಭದ್ರಾವತಿ: ೨೬ ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ. 
    ೧೯೯೯ನೇ ಸಾಲಿನ ಹಳೇನಗರ ಪೊಲೀಸ್ ಠಾಣೆಯ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವ ಮೂಲಕ ಬಂಧಿಸಲಾಗಿದ್ದು, ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದರಿಂದ ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
    ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಚಂದ್ರಶೇಖರ್ ನಾಯ್ಕ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. 
 

ನಮಿತಾ ಆರ್ ಶೆಟ್ಟಿಗೆ ಪಿಎಚ್‌ಡಿ ಪದವಿ


ನಮಿತಾ ಆರ್ ಶೆಟ್ಟಿ 
ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.
    "ಡೆವಲಪ್‌ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್ನಿಕ್ವೆಸ್ ಫಾರ್ ಡಿಜಿಟಲ್ ಇಮೇಜಸ್"  ವಿಷಯದ ಕುರಿತು ಅಧ್ಯಯನ ನಡೆಸಿದ್ದರು. ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ  ಪ್ರಾಧ್ಯಾಪಕರಾದ ಡಾ.ಯೋಗೀಶ್ ನಾಯ್ಕ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.
    ಶಂಕರಘಟ್ಟದ ರೂಪ ರಮೇಶ್ ಶೆಟ್ಟಿ ದಂಪತಿ ಪುತ್ರಿಯಾಗಿದ್ದು, ಶಿವಮೊಗ್ಗ ಕ್ಲಿಫ್ ಎಂಬೆಸ್ಸಿ ಮಾಲೀಕರಾದ ಆರ್. ರೋಹಿತ್‌ರವರ ಪತ್ನಿಯಾಗಿದ್ದಾರೆ. ಜ. ೨೨ ರಂದು ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪ್ರಮಾಣ ಪತ್ರ ನೀಡಲಿದ್ದಾರೆ.

ಗ್ರಾಮಾಂತರ ಠಾಣೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಬೈಕ್ ಜಾಥಾ

ಭದ್ರಾವತಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಭಾನುವಾರ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. 
    ಭದ್ರಾವತಿ : ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಭಾನುವಾರ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. 
    ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ, ಗೋಣಿಬೀಡು ಮತ್ತು ಶಂಕರಘಟ್ಟ ಗ್ರಾಮಗಳಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ವಿದ್ಯಾರ್ಥಿಗಳು, ಗ್ರಾಮಸ್ಥರು, ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸಂಚಾರ ನಿಯಮಗಳ ಪಾಲನೆ, ಅಪಘಾತ ನಿಯಂತ್ರಣ ಕುರಿತು ಮತ್ತು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು.
    ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳರವರ ನೇತೃತ್ವದಲ್ಲಿ ನಡೆದ ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆ ಉಪ ನಿರೀಕ್ಷಕರಾದ ಶಿಲ್ಪ ನಾಯನೇಗಲಿ, ಮಹೇಶ್ ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.