Monday, January 13, 2025

ತಳ್ಳಿಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಧರ್ಮೇಗೌಡ, ಉಪಾಧ್ಯಕ್ಷರಾಗಿ ರವೀಂದ್ರನಾಯ್ಡು

ಭದ್ರಾವತಿ ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಧರ್ಮೇಗೌಡ(ಕುಮ್ರಿ ಚಂದ್ರಣ್ಣ) ಹಾಗು ಉಪಾಧ್ಯಕ್ಷರಾಗಿ ರವೀಂದ್ರನಾಯ್ಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ : ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಧರ್ಮೇಗೌಡ(ಕುಮ್ರಿ ಚಂದ್ರಣ್ಣ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭಾನುವಾರ ನಡೆದ ಚುನಾವಣೆಯಲ್ಲಿ ೧೨ ನಿರ್ದೇಶಕರನ್ನು ಹೊಂದಿರುವ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಧರ್ಮೇಗೌಡ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರನಾಯ್ಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಡಿ.೨೮ರಂದು ಸಹಕಾರ ಸಂಘಕ್ಕೆ ನೂತನ ನಿರ್ದೇಶಕರು ಆಯ್ಕೆಯಾಗಿದ್ದರು. 
    ನೂತನ ಅಧ್ಯಕ್ಷ ಧರ್ಮೇಗೌಡ ಹಾಗು ಉಪಾಧ್ಯಕ್ಷ ರವೀಂದ್ರನಾಯ್ಡು ಅವರನ್ನು ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಧರ್ಮಮೂರ್ತಿ ಸೇರಿದಂತೆ ಪಕ್ಷದ ಮುಖಂಡರು ಅಭಿನಂದಿಸಿದ್ದಾರೆ. 

ಮಾಜಿ ಸೈನಿಕ, ಪಿಡಿಓ ಜಿ. ವೆಂಕಟೇಶ್ ನಿಧನ

ಜಿ. ವೆಂಕಟೇಶ್ 
    ಭದ್ರಾವತಿ: ತಾಲೂಕಿನ ಅತ್ತಿಗುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಓ), ಮಾಜಿ ಸೈನಿಕ ಜಿ. ವೆಂಕಟೇಶ್(೫೨) ಭಾನುವಾರ ನಿಧನ ಹೊಂದಿದರು. 
    ಪತ್ನಿ, ಪುತ್ರಿ, ತಾಯಿ, ಸಹೋದರ ಹಾಗು ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ತಾಲೂಕಿನ ಬಾರಂದೂರು ಗ್ರಾಮದ ಇವರ ತೋಟದಲ್ಲಿ ನೆರವೇರಿತು. ವೆಂಕಟೇಶ್‌ರವರು ಕಾರೇಹಳ್ಳಿ-ಬಾರಂದೂರು ಗ್ರಾಮದಲ್ಲಿ ವಾಸವಾಗಿದ್ದರು. 
    ವೆಂಕಟೇಶ್‌ರವರು ತಾಲೂಕು ಮಾಜಿ ಸೈನಿಕರ ಸಂಘದ ನಿರ್ದೇಶಕರಾಗಿದ್ದು, ತಾಲೂಕಿನ ವಿವಿಧೆಡೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.  ಇವರ ನಿಧನಕ್ಕೆ ತಾಲೂಕು ಮಾಜಿ ಸೈನಿಕರ ಸಂಘ ಸಂತಾಪ ಸೂಚಿಸಿದೆ.  

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ ಶಿವಕುಮಾರ್, ಉಪಾಧ್ಯಕ್ಷರಾಗಿ ಮೀರಾಬಾಯಿ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್ ಭದ್ರಾವತಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ಮೀರಾಬಾಯಿ ಉಪಾಧ್ಯಕ್ಷರಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
    ಸೋಮವಾರ ನಡೆದ ಚುನಾವಣೆಯಲ್ಲಿ ಸಾಲ ಪಡೆಯದ ಕ್ಷೇತ್ರದ ನಿರ್ದೇಶಕ ಸ್ಥಾನದಿಂದ ಆಯ್ಕೆಯಾಗಿದ್ದ ಬಿ.ಕೆ ಶಿವಕುಮಾರ್ ಅಧ್ಯಕ್ಷರಾಗಿ ಮತ್ತು ತಾಲೂಕಿನ ವೀರಾಪುರ ಕ್ಷೇತ್ರದ ನಿರ್ದೇಶಕ ಸ್ಥಾನದಿಂದ ಆಯ್ಕೆಯಾಗಿದ್ದ ಮೀರಾಬಾಯಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ನಿರ್ದೇಶಕರಾದ ಎಸ್. ವಿರುಪಾಕ್ಷಪ್ಪ, ಎಸ್. ಕೃಷ್ಣಪ್ಪ, ಜಿ.ಎಂ ಚನ್ನಬಸಪ್ಪ, ಬಿ. ನಾಗೇಶ್, ಎಚ್.ಎಲ್ ಏಕಾಂತ, ಕೆ. ಶ್ರೀನಿವಾಸ್, ಎನ್.ಟಿ ಸಂಗನಾಥ, ಟಿ.ಎಸ್ ಮೌನೇಶ್ವರ, ಕೆ. ಕೇಶವಚಾರ್, ಬಿ. ಶಶಿಕಲಾ ಮತ್ತು ಸುಲೋಚನ ಸೇರಿದಂತೆ ಇನ್ನಿತರರು ಚುನಾವಣಾ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು. 
    ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಎನ್‌ಟಿಸಿ ನಾಗೇಶ್, ಬಸವಂತಪ್ಪ, ವೈ. ನಟರಾಜ್, ಎಂ.ಎಸ್ ರವಿ,  ಸೂಡಾ ಸದಸ್ಯ ಎಚ್. ರವಿಕುಮಾರ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಬಿ.ಕೆ ಶಿವಕುಮಾರ್ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ರವರ ಬೀಗರಾಗಿದ್ದು, ಸಹೋದರ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದಿಸಿದ್ದಾರೆ. 
 
ನಾನು ರೈತರ ಸಂಕಷ್ಟಗಳನ್ನು ಅರಿತುಕೊಂಡಿದ್ದೇನೆ. ಜಿಲ್ಲೆಯಲ್ಲಿರುವ ಲೋಕಸಭೆ ಹಾಗು ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸಹಕಾರ ಪಡೆದುಕೊಂಡು ಸರ್ಕಾರದ ಅನುದಾನ ಬಳಸಿಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಅಲ್ಲದೆ ಬ್ಯಾಂಕ್ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತೇನೆ. ಶಾಸಕ ಬಿ.ಕೆ ಸಂಗಮೇಶ್ವರ್, ಸಹಕಾರ ಸಚಿವ ಕೆ.ಎನ್ ರಾಜಣ್ಣ ಹಾಗು ಬ್ಯಾಂಕ್ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 
                                                               - ಬಿ.ಕೆ ಶಿವಕುಮಾರ್, ಅಧ್ಯಕ್ಷರು, ಪಿಎಲ್‌ಡಿ ಬ್ಯಾಂಕ್, ಭದ್ರಾವತಿ