ಭದ್ರಾವತಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ನ ಅಂತರಾಷ್ಟ್ರೀಯ ಯೋಗ ಗುರು ಡಿ. ನಾಗರಾಜ್ರವರು ಯೋಗ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕುವೆಂಪು ವಿಶ್ವ ವಿದ್ಯಾನಿಲಯ ಜ.೨೨ರಂದು ಆಯೋಜಿಸಿರುವ ೩೪ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಕುಲಸಚಿವ ಎಸ್.ಎಂ ಗೋಪಿನಾಥ್ರವರು ನಾಗರಾಜ್ರವರ ನಿವಾಸಕ್ಕೆ ತೆರಳಿ ಪದವಿ ಸ್ವೀಕಾರಕ್ಕೆ ಆಹ್ವಾನಿಸಿದ್ದಾರೆ.
ಭದ್ರಾವತಿ : ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ನ ಅಂತರಾಷ್ಟ್ರೀಯ ಯೋಗ ಗುರು ಡಿ. ನಾಗರಾಜ್ರವರು ಯೋಗ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕುವೆಂಪು ವಿಶ್ವ ವಿದ್ಯಾನಿಲಯ ಜ.೨೨ರಂದು ಆಯೋಜಿಸಿರುವ ೩೪ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.
ನಾಗರಾಜ್ರವರು ಯೋಗ ಕಲಿಕೆಯೊಂದಿಗೆ ಉತ್ತಮ ಸಾಧನೆ ಮಾಡುವ ಜೊತೆಗೆ ನಗರದಲ್ಲಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಆರಂಭಿಸುವ ಮೂಲಕ ಯೋಗಪಟುಗಳನ್ನು ಪೋತ್ಸಾಹಿಸುವ ಜೊತೆಗೆ ಅವರು ಸಮಾಜದಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾಗಿದ್ದಾರೆ. ಅಲ್ಲದೆ ಉಚಿತ ಯೋಗ ತರಬೇತಿಗಳನ್ನು ಆಯೋಜಿಸಿ ಯೋಗದ ಮಹತ್ವ ತಿಳಿಸಿಕೊಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ನಾಗರಾಜ್ರವರು ರಾಜ್ಯಮಟ್ಟ, ರಾಷ್ಟ್ರಮಟ್ಟ ಹಾಗು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗು ವಿವಿಧ ಸಂಘ-ಸಂಸ್ಥೆಗಳು ಪ್ರಶಸ್ತಿ, ಬಿರುದುಗಳನ್ನು ನೀಡಿ ಗೌರವಿಸಿವೆ.
ಇದೀಗ ಕುವೆಂಪು ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದ್ದು, ಕುಲಸಚಿವ ಎಸ್.ಎಂ ಗೋಪಿನಾಥ್ರವರು ನಾಗರಾಜ್ರವರ ನಿವಾಸಕ್ಕೆ ತೆರಳಿ ಪದವಿ ಸ್ವೀಕಾರಕ್ಕೆ ಆಹ್ವಾನಿಸಿದ್ದಾರೆ. ಘಟಿಕೋತ್ಸವದಲ್ಲಿ ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ರವರು ಪದವಿ ಪ್ರಧಾನ ಮಾಡಲಿದ್ದಾರೆ.