Thursday, January 30, 2025

ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಲ್.ಕೆ ಲತಾ, ಉಪಾಧ್ಯಕ್ಷರಾಗಿ ಎಸ್. ಪ್ರಕಾಶ್

ಭದ್ರಾವತಿ ಹಳೇನಗರದ ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಾ ಶಿಕ್ಷಣ ಇಲಾಖೆಯ ಎಲ್.ಕೆ ಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಯನ್ನು ತಾಲೂಕು ಸರ್ಕಾರಿ ನೌಕರರ ಸಂಘದ  ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಭದ್ರಾವತಿ : ಹಳೇನಗರದ ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಾ ಶಿಕ್ಷಣ ಇಲಾಖೆಯ ಎಲ್.ಕೆ ಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ೧೩ ನಿರ್ದೇಶಕರನ್ನು ಒಳಗೊಂಡಿರುವ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಎಲ್.ಕೆ ಲತಾ, ಉಪಾಧ್ಯಕ್ಷರಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್. ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಇಮ್ತಿಯಾಜ್ ಅಹಮದ್ ತಿಳಿಸಿದ್ದಾರೆ. 
    ನಿರ್ದೇಶಕರಾದ ಡಿ. ಮುರಳೀಧರ, ಎಂ. ಪುಟ್ಟುಲಿಂಗಮೂರ್ತಿ, ಎಸ್.ಟಿ ಸುಧೀಂದ್ರ ರೆಡ್ಡಿ, ಶಹತಾಜ್ ಪರ್ವೀನ್, ಎಂ. ಹನುಮಂತಪ್ಪ, ಆರ್. ಜಯಸ್ವಾಮಿ, ಜಿ.ಎಸ್ ರುದ್ರೇಶ್, ಎಸ್. ಆನಂದ್, ಎಚ್. ರುದ್ರೇಶ್, ವಿ. ಗದ್ದಿಗೆ ಸ್ವಾಮಿ ಮತ್ತು ಎಲ್.ಓ ಲೋಕೇಶ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. 
    ನೂತನ ಆಡಳಿತ ಮಂಡಳಿಯನ್ನು ತಾಲೂಕು ಸರ್ಕಾರಿ ನೌಕರರ ಸಂಘದ  ಅಧ್ಯಕ್ಷ ಬಿ. ಸಿದ್ದಬಸಪ್ಪ, ಪದಾಧಿಕಾರಿಗಳಾದ ಎಸ್.ಕೆ ಮೋಹನ್, ಕೆ.ಆರ್ ಪ್ರಶಾಂತ್, ಎಂ. ವೆಂಕಟೇಶ್, ವೈ.ಎನ್ ಶ್ರೀಧರಗೌಡ, ಎ. ರಂಗನಾಥ್ ಮತ್ತು ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಕಾರ್ಯದರ್ಶಿ ಎಂ.ಎಸ್ ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ಮಹಾತ್ಮಗಾಂಧಿ ಕೊಂದವರ ವೈಭವೀಕರಣ ವಿಷಾದನೀಯ : ಶಶಿಕುಮಾರ್ ಗೌಡ

ಭದ್ರಾವತಿ ನಗರದ ಜನ್ನಾಪುರ ಫಿಲ್ಟರ್‌ಶೆಡ್ ಅಂತರಘಟ್ಟಮ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ಸಮುದಾಯ ಭವನ ಮುಂಭಾಗ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಗುರುವಾರ ಮಹಾತ್ಮಗಾಂಧಿಯವರ ಹುತಾತ್ಮ ದಿನ, ಸರ್ವೋದಯ ದಿನ ಆಚರಿಸಲಾಯಿತು. 
    ಭದ್ರಾವತಿ: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮನುವಾದಿಗಳ ಸಂಸ್ಕೃತಿ ಹೆಚ್ಚಾಗಿದ್ದು, ಮಹಾತ್ಮಗಾಂಧಿ ಕೊಂದವರನ್ನು ಮಹಾನ್ ವ್ಯಕ್ತಿಗಳಂತೆ ಬಿಂಬಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ವಿಷಾದ ವ್ಯಕ್ತಪಡಿಸಿದರು.  
    ಅವರು ಗುರುವಾರ ನಗರದ ಜನ್ನಾಪುರ ಫಿಲ್ಟರ್‌ಶೆಡ್ ಅಂತರಘಟ್ಟಮ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ಸಮುದಾಯ ಭವನ ಮುಂಭಾಗ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಗಾಂಧಿಯವರ ಹುತಾತ್ಮ ದಿನ, ಸರ್ವೋದಯ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ರಾಷ್ಟ್ರಪಿತ ಮಹಾತ್ಮಗಾಂಧಿಯವರು ಜಾತಿ, ಧರ್ಮ, ಮತಪಂಥಗಳನ್ನು ಮೀರಿ ಎಲ್ಲರನ್ನು ಒಗ್ಗೂಟಿಸಿಕೊಂಡು ಅಹಿಂಸಾ ಮಾರ್ಗದಲ್ಲಿ ತ್ಯಾಗ, ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸರ್ವಕಾಲಕ್ಕೂ ಮಹಾತ್ಮಗಾಂಧಿಯವರು ಆದರ್ಶಪ್ರಾಯರಾಗಿದ್ದಾರೆ. ಆದರೆ ಇಂದು ದೇಶದಲ್ಲಿ ಅವರ ತತ್ವ, ಸಿದ್ಧಾಂತಗಳನ್ನು ವಿರೋಧ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದ್ದು, ಇದನ್ನು ಖಂಡಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಮಹಾತ್ಮಾ ಗಾಂಧಿಯವರ ವಿಷಯದಲ್ಲಿ ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. 
    ಮಾದೇವಿ, ಪಾರ್ವತಿಬಾಯಿ, ದಿವ್ಯಶ್ರೀ, ಇಂದ್ರಮ್ಮ, ಶಾಂತಮ್ಮ ಸೇರಿದಂತೆ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಪ್ರಮುಖರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.