ಎಂ.ಜಿ ಅಭಿಜಿತ್
ಭದ್ರಾವತಿ: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನ ಎಂ.ಜಿ ಅಭಿಜಿತ್ ೨೩ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಚೆನ್ನೈ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಫೆ.೧೭ ರಿಂದ ೨೦ರವರೆಗೆ ಕ್ರೀಡಾಕೂಟ ನಡೆಯಲಿದ್ದು, ಅಭಿಜಿತ್ ೧೦೦ ಮೀಟರ್ ಹಾಗು ೪೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಅಭಿಜಿತ್ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ಶಿಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಇವರಿಗೆ ಸಿದ್ದಾರ್ಥ ಅಂಧರ ಕೇಂದ್ರ ಅಧ್ಯಕ್ಷ ಶಿವಬಸಪ್ಪ, ಆಡಳಿತಾಧಿಕಾರಿ ಶಾರದ ಶಿವಬಸಪ್ಪ ಮತ್ತು ಕಾರ್ಯದರ್ಶಿ ಎಂ. ಗುರುಮೂರ್ತಿ ಅಭಿನಂದಿಸಿದ್ದಾರೆ.