ಭದ್ರಾವತಿ ಹಳೇನಗರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಬಳಿ ಬ್ರಾಹ್ಮಣರ ಬೀದಿಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ವಯಸ್ಸಿನ ಬೇಧಭಾವವಿಲ್ಲದೆ ಬಣದೋಕುಳಿಯಲ್ಲಿ ತೊಡಕುವ ಮೂಲಕ ಕುಣಿದು ಸಂಭ್ರಮಿಸಿದರು.
ಭದ್ರಾವತಿ : ನಗರದ ವಿವಿಧೆಡೆ ಶನಿವಾರ ಬಣದೋಕುಳಿಯೊಂದಿಗೆ ಸಂಭ್ರಮಾಚರಣೆ ನಡೆಸಿ ರತಿಮನ್ಮಥರ ದಹನದೊಂದಿಗೆ ಹೋಳಿ ಹಬ್ಬ ಸಂಪನ್ನಗೊಳಿಸಲಾಯಿತು.
ಹಳೇನಗರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಬಳಿ ಬ್ರಾಹ್ಮಣರ ಬೀದಿ ಮತ್ತು ಉಪ್ಪಾರರ ಬೀದಿ ಹಾಗು ಕುಂಬಾರರ ಬೀದಿ ಸೇರಿದಂತೆ ವಿವಿಧೆಡೆ ಬೆಳಿಗ್ಗೆಯಿಂದಲೇ ಮಕ್ಕಳು, ಪುರುಷರು, ಮಹಿಳೆಯರು ವಯಸ್ಸಿನ ಬೇಧಭಾವವಿಲ್ಲದೆ ಬಣದೋಕುಳಿಯಲ್ಲಿ ತೊಡಕುವ ಮೂಲಕ ಹಾಡಿನ ಅಬ್ಬರದ ಸದ್ದಿಗೆ ಕುಣಿದು ಸಂಭ್ರಮಿಸಿದರು. ನಂತರ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಭಕ್ತಿ-ಭಾವದೊಂದಿಗೆ ರತಿ-ಮನ್ಮಥರ ಮೆರವಣಿಗೆ ನಡೆಸಿ ದಹನದೊಂದಿಗೆ ಸಂಪನ್ನಗೊಳಿಸಿದರು.
ನಗರಸಭೆ ಸಮೀಪದ ಭೂತನಗುಡಿಯಲ್ಲಿ ಶ್ರೀ ನೇತಾಜಿ ಸೇವಾ ಸಮಿತಿ ಹಾಗು ಶ್ರೀ ನೇತಾಜಿ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ೮೮ನೇ ವರ್ಷದ ಹೋಳಿ ಹಬ್ಬ ಆಚರಣೆ ಸಹ ಸಂಪನ್ನಗೊಂಡಿತು.
ನಗರಸಭೆ ಸಮೀಪದ ಭೂತನಗುಡಿಯಲ್ಲಿ ಶ್ರೀ ನೇತಾಜಿ ಸೇವಾ ಸಮಿತಿ ಹಾಗು ಶ್ರೀ ನೇತಾಜಿ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ೮೮ನೇ ವರ್ಷದ ಹೋಳಿ ಹಬ್ಬ ಆಚರಣೆ ಕೊನೆಯ ದಿನ ಪ್ರಮುಖ ರಸ್ತೆಗಳಲ್ಲಿ ಮನ್ಮಥ ದೇವರ ಭವ್ಯ ಮೆರವಣಿಗೆ ನಡೆಸಲಾಯಿತು.
ಭೂತನಗುಡಿ ವ್ಯಾಪ್ತಿಯ ರಸ್ತೆ ರಸ್ತೆಗಳಲ್ಲಿ ಮಕ್ಕಳು, ಪುರುಷರು, ಮಹಿಳೆಯರು ವಯಸ್ಸಿನ ಬೇಧಭಾವವಿಲ್ಲದೆ ಬಣದೋಕುಳಿಯಲ್ಲಿ ತೊಡಕಿರುವುದು ಕಂಡು ಬಂದಿತು. ಪ್ರಮುಖ ರಸ್ತೆಗಳಲ್ಲಿ ಮನ್ಮಥ ದೇವರ ಭವ್ಯ ಮೆರವಣಿಗೆ ನಡೆಸಿ ಅಂತಿಮವಾಗಿ ನಗರಸಭೆ ಬಳಿ ದಹನದೊಂದಿಗೆ ಸಂಪನ್ನಗೊಳಿಸಿದರು.
ಉಳಿದಂತೆ ನಗರದಾದ್ಯಂತ ಕಳೆದ ೨-೩ ದಿನಗಳಿಂದ ಸಾಮಾನ್ಯವಾಗಿ ಹೋಳಿ ಆಚರಣೆಯಲ್ಲಿ ತೊಡಗಿರುವುದು ಕಂಡು ಬಂದಿತು. ವಿಶೇಷ ಎಂದರೆ ಈ ಬಾರಿ ಹೆಚ್ಚಾಗಿ ಯುವಕರು-ಯುವತಿಯರು ಬಣದೋಕುಳಿಯಲ್ಲಿ ತೊಡಗುವ ಮೂಲಕ ಗಮನ ಸೆಳೆದರು.
ಹೋಳಿ ಆಚರಣೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹಾಗು ಹೋಳಿ ಆಚರಣೆ ನಡೆಸುವ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.