Sunday, April 6, 2025

ಭದ್ರಾವತಿಯಲ್ಲಿ ದೇವಸ್ಥಾನ, ಸಂಘ-ಸಂಸ್ಥೆಗಳಿಂದ ವಿಜೃಂಭಣೆಯಿಂದ ಜರುಗಿದ ಶ್ರೀರಾಮನವಮಿ

ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದ ಮುಂಭಾಗದಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ: ನಗರದ ವಿವಿಧ ದೇವಸ್ಥಾನಗಳಲ್ಲಿ ಹಾಗು ಸಂಘ-ಸಂಸ್ಥೆಗಳಿಂದ ಭಾನುವಾರ ಶ್ರೀರಾಮನವಮಿ ವಿಜೃಂಭಣೆ ಆಚರಿಸಲಾಯಿತು. ಎಲ್ಲೆಡೆ ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ ನಡೆಯಿತು.  
    ನ್ಯೂಟೌನ್ ಶ್ರೀರಾಮ ದೇವಾಲಯ: 
    ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದ ಮುಂಭಾಗದಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿ ವಿಜೃಂಭಣೆಯಿಂದ ಜರುಗಿತು. 
    ರಾಮನವಮಿ ಅಂಗವಾಗಿ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಅಲಂಕಾರ, ಉತ್ಸವ ಮೂರ್ತಿಗಳ ಮೆರವಣಿಗೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಭಕ್ತರಿಗೆ ಕೋಸಂಬರಿ ಹಾಗು ಪಾನಕ ವಿತರಿಸಲಾಯಿತು. 


ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಶ್ರೀ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು.
    ಹಳೇನಗರ ಶ್ರೀ ರಾಮೇಶ್ವರ ದೇವಾಲಯ: 
    ಹಳೇನಗರದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಶ್ರೀ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು.
  ಬೆಳಗ್ಗೆ ಪಂಚಾಮೃತ ಅಭಿಷೇಕ, ನಂತರ ಶ್ರೀರಾಮ ದೇವರ ರಾಜಬೀದಿ ಉತ್ಸವ ನಡೆಯಿತು. ಉತ್ಸವ ದೇವಾಲಯಕ್ಕೆ ಹಿಂದಿರುಗಿ ಬಂದ ನಂತರ ಮಹಾ ಮಂಗಳಾರತಿಯೊಂದಿಗೆ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ಹಾಗು ಪಾನಕ ಮತ್ತು ಕೋಸಂಬರಿ ವಿತರಣೆ ಮಾಡಲಾಯಿತು. ವಿವಿಧ ಭಜನಾ ಮಂಡಳಿಗಳ ಸದಸ್ಯರು, ದೇವಾಲಯ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು. 


ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀರಾಮನವಮಿ ಅಂಗವಾಗಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೆರವಣಿಗೆ ನಡೆಸಲಾಯಿತು. 
    ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ: 
    ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀರಾಮನವಮಿ ಅಂಗವಾಗಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೆರವಣಿಗೆ ನಡೆಸಲಾಯಿತು. 
    ಬೆಳಗ್ಗೆ ೭ ಗಂಟೆಗೆ ಪಂಚಾಮೃತ ಅಭಿಷೇಕ, ೮ ಗಂಟೆಗೆ ದೇವರ ರಾಜಬೀದಿ ಉತ್ಸವ ಹಾಗೂ ೧೨ ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ನಡೆಯಿತು. ಪ್ರಧಾನ ಅರ್ಚಕ ರಂಗನಾಥ ಶರ್ಮಾ, ಸಹಾಯಕ ಅರ್ಚಕ ಶ್ರೀನಿವಾಸನ್ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು. 
    ವೇದಘೋಷ ಪಾಠಶಾಲೆ ಶಿಷ್ಯ ವೃಂದವರು, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಜಿ. ರಮಾಕಾಂತ್ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ಯಜಮಾನ್ ಕೃಷ್ಣ ಸಂಗಡಿಗರು ಉತ್ಸವ ನಡೆಸಿಕೊಟ್ಟರು.


ಭದ್ರಾವತಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ೪೬ನೇ ಸಂಸ್ಥಾಪನಾ ದಿನ ಹಾಗು ಶ್ರೀರಾಮನವಮಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಆಚರಿಸಲಾಯಿತು.  
    ಬಿಜೆಪಿ ೪೬ನೇ ಸಂಸ್ಥಾಪನಾ ದಿನ, ಪವಿತ್ರ ಶ್ರೀರಾಮನವಮಿ ಸಂಭ್ರಮಾಚರಣೆ : 
    ಬಿಜೆಪಿ ಮಂಡಲ ವತಿಯಿಂದ ಪಕ್ಷದ ೪೬ನೇ ಸಂಸ್ಥಾಪನಾ ದಿನ ಹಾಗು ಶ್ರೀರಾಮನವಮಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಆಚರಿಸಲಾಯಿತು.  ಶ್ರೀರಾಮ ದೇವರಿಗೆ ಪುಷ್ಪಾರ್ಚನೆಯೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸಿ ಸಂಸ್ಥಾಪಕರನ್ನು ಸ್ಮರಿಸಲಾಯಿತು.
    ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಮೊಸರಹಳ್ಳಿ ಅಣ್ಣಪ್ಪ, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಎಂ. ಮಂಜುನಾಥ್, ಎಚ್. ತೀರ್ಥಯ್ಯ, ಕಾರಾ ನಾಗರಾಜ್,  ಬಿ.ಜಿ ರಾಮಲಿಂಗಯ್ಯ, ಸರಸ್ವತಿ, ಧನುಷ್‌ಬೋಸ್ಲೆ, ರಾಜಶೇಖರ್, ಸತೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು. 
    ಬಿಟಿವೈನಿಂದ ಶ್ರೀರಾಮನವಮಿ: 
    ಕಡುಬಡವರು, ನಿರ್ಗತಿಕರಿಗೆ ಬೆಳಗಿನ ಉಚಿತ ಉಪಹಾರ, ಉಚಿತ ಕುಡಿಯುವ ನೀರಿನ ಸೇವೆ ಸೇರಿದಂತೆ ಇನ್ನಿತರ ಸೇವಾಕಾರ್ಯಗಳನ್ನು ಕೈಗೊಂಡು ನಗರದಲ್ಲಿ ಗಮನ ಸೆಳೆದಿರುವ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು. 
    ನಗರದ ಕೆಎಸ್‌ಆರ್‌ಟಿಸಿ ಮುಖ್ಯಬಸ್‌ನಿಲ್ದಾಣ ಮುಂಭಾಗ ಕೈಗೊಂಡಿರುವ ಉಚಿತ ಕುಡಿಯುವ ನೀರಿನ ಸೇವೆ ಸ್ಥಳದಲ್ಲಿ ಅಸೋಸಿಯೇಷನ್ ವತಿಯಿಂದ ಶ್ರೀರಾಮ ದೇವರಿಗೆ ಪುಷ್ಪಾರ್ಚನೆ ಸಲ್ಲಿಸಿ ಕೋಸಂಬರಿ ಮತ್ತು ಪಾನಕ ವಿತರಿಸಲಾಯಿತು. 

ಶ್ರೀರಾಮನವಮಿಯಂದು ಗುಡ್ಡದ ಮೇಲೊಂದು ಜಾತ್ರೆ

ಭದ್ರಾವತಿ: ತಾಲೂಕಿನ ಐತಿಹಾಸಿಕ ಧಾರ್ಮಿಕ ಹಾಗು ಪ್ರಾಕೃತಿಕ ಧಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗೊಂದಿ  ಶ್ರೀ ಕ್ಷೇತ್ರ ಹೊನ್ನೆಗುಡ್ಡದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿಯಂದು ಭಾನುವಾರ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ: ತಾಲೂಕಿನ ಐತಿಹಾಸಿಕ ಧಾರ್ಮಿಕ ಹಾಗು ಪ್ರಾಕೃತಿಕ ಧಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗೊಂದಿ  ಶ್ರೀ ಕ್ಷೇತ್ರ ಹೊನ್ನೆಗುಡ್ಡದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿಯಂದು ಭಾನುವಾರ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಶ್ರೀ ಹೊನ್ನೆಗುಡ್ಡ ಲಕ್ಷ್ಮೀರಂಗನಾಥಸ್ವಾಮಿ ಹಾಗು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ದೇವಾಲಯದ ಅಧಿದೇವತೆಯಾಗಿರುವ ಶ್ರೀ ರಂಗನಾಥಸ್ವಾಮಿಯ ಮಹಾರಥೋತ್ಸವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗು ಶ್ರೀ ಕ್ಷೇತ್ರ ಹೊನ್ನೆಗುಡ್ಡದ ಶ್ರೀ ವಿಠ್ಠಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯಿತು. 
    ದೇವಾಲಯದ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಅಲಂಕಾರ, ಹೋಮ-ಹವನ, ದೇವರುಗಳ ಪಲ್ಲಕ್ಕಿ ಉತ್ಸವ, ನಂತರ ಮಹಾರಥೋತ್ಸವ ಹಾಗೂ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕರ ಆಚರಣೆ ಜರುಗಿದವು. 
    ಭಕ್ತರಿಗೆ ಶ್ರೀರಾಮನವಮಿ ಅಂಗವಾಗಿ ಕೋಸಂಬರಿ, ಪಾನಕ ವಿತರಣೆ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಗೊಂದಿ, ಚಿಕ್ಕಗೊಪ್ಪೇನಹಳ್ಳಿ, ತಾರೀಕಟ್ಟೆ, ಅರಳಿಕೊಪ್ಪ, ಸುಲ್ತಾನ್‌ಮಟ್ಟಿ, ಹೊನ್ನಟ್ಟಿ ಹೊಸೂರು, ಹುಣಸೇಕಟ್ಟೆ, ಶಂಕರಘಟ್ಟ, ಗೋಣಿಬೀಡು, ಸಿಂಗನಮನೆ, ಹಿರಿಯೂರು ಬೊಮ್ಮನಕಟ್ಟೆ, ತಿಮ್ಲಾಪುರ, ಬಾಳೆಮಾರನಹಳ್ಳಿ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಸಹಸ್ರರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ : ಕನ್ನಡದ ತೇರು ತೆಳೆಯುವ ಕಾರ್ಯಕ್ಕೆ ಕೈ ಜೋಡಿಸಿ

ಭವನ ನಿರ್ಮಾಣಕ್ಕೆ ಸಹಕಾರ ನೀಡಲು ಬದ್ಧ : ಶಾಸಕ ಬಿ.ಕೆ ಸಂಗಮೇಶ್ವರ್ 

ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ನೂತನವಾಗಿ ಸುಮಾರು ೩.೮೦ ಕೋ. ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. ತಾಲೂಕು ಕಸಾಪ ಅಧ್ಯಕ್ಷ ಕೋಡ್ಲು ಯಜ್ಞಯ್ಯ ವೈಯಕ್ತಿಕವಾಗಿ ೫೫ ಸಾವಿರ ರು. ದೇಣಿಗೆ ಚೆಕ್ ಮೂಲಕ ನೀಡಿದರು. 
    ಭದ್ರಾವತಿ: ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಹೆಚ್ಚಿನ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ಸಾಹಿತ್ಯ ಹಾಗು ಕನ್ನಡಾಭಿಮಾನಿಗಳು ಸೇರಿದಂತೆ ಸಮಸ್ತ ನಾಗರಿಕರು ನೀಡಬೇಕು. ಆ ಮೂಲಕ ಕನ್ನಡದ ತೇರು ಎಳೆಯುವ ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು. 
    ಅವರು ಭಾನುವಾರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ನೂತನವಾಗಿ ಸುಮಾರು ೩.೮೦ ಕೋ. ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 
    ಸಾಹಿತ್ಯ ಭವನ ಕಾಮಗಾರಿ ಯಶಸ್ವಿಯಾಗಿ ನಡೆಯಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯಾವುದೇ ಅಡೆತಡೆಗಳಿಗೂ ಅವಕಾಶ ನೀಡಬಾರದು. ಕಾಮಗಾರಿ ಪೂರ್ಣಗೊಳಿಸಿ ಭವನ ಲೋಕಾರ್ಪಣೆಗೊಳಿಸಲು ನಾನು ಸಹ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಿದ್ದೇನೆ. ಒಂದು ವೇಳೆ ಆರ್ಥಿಕ ನೆರವಿನ ಕೊರತೆ ಕಂಡು ಬಂದಲ್ಲಿ ಅದನ್ನು ಸಹ ಸಂಪೂರ್ಣವಾಗಿ ನಾನೇ ವಹಿಸಿಕೊಂಡು ಭರಿಸಲು ಸಿದ್ದವಿದ್ದೇನೆ ಎಂದರು. 
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ತಾಲೂಕು ಕೇಂದ್ರಗಳಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸಲು ಒಂದು ನೆಲೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಗೊಳ್ಳುತ್ತಿದ್ದು, ಭವನ ನಿರ್ಮಾಣಕ್ಕೆ ಶಾಸಕರು ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಭೂಮಿ ಪೂಜೆ ನೆರವೇರಿಸಲು ಸಾಧ್ಯವಾಗುತ್ತಿದೆ. ಅವರ ಪ್ರಯತ್ನದಿಂದ ನಗರಸಭೆ ಆಡಳಿತ ಸುಮಾರು ೨೫ ಲಕ್ಷ ರು. ಆರ್ಥಿಕ ನೆರವು ನೀಡುತ್ತಿದ್ದು, ಅಲ್ಲದೆ ಅಧ್ಯಕ್ಷರು ಸೇರಿದಂತೆ ಸದಸ್ಯರು ತಮ್ಮ ಒಂದು ತಿಂಗಳ ವೇತನ ಸಹ ನೀಡುತ್ತಿರುವುದು ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಭವನ ನಿರ್ಮಾಣಕ್ಕೆ ಎಲ್ಲರೂ ಸಹ ಹೆಚ್ಚಿನ ನೆರವು ನೀಡಬೇಕೆಂದರು. 
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಉಪಾಧ್ಯಕ್ಷ ಡಾ. ಡಿ. ಪ್ರಭಾಕರ ಬೀರಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಎಂ.ಈ ಜಗದೀಶ್, ಎಂ.ಎಸ್ ಸುಧಾಮಣಿ, ಕಾರ್ಯದರ್ಶಿಗಳಾದ ಡಿ. ನಾಗೋಜಿರಾವ್, ಬಿ.ಎಲ್ ಮೋಹನಕುಮಾರ್, ಖಜಾಂಚಿ ಬಿ.ಎಸ್ ಪ್ರಕಾಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಟಿ. ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ ಮತ್ತು ಜಾನಪದ ಕಲಾವಿದ ದಿವಾಕರ್ ಭೂಮಿ ಪೂಜೆ ಕುರಿತು ಕವನ ವಾಚಿಸಿದರು. ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಉಪಾಧ್ಯಕ್ಷ ಸಿ. ಜಯಪ್ಪ ಹೆಬ್ಬಳಗೆರೆ ವಂದಿಸಿದರು. 
    ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ  ಪ್ರಧಾನ ಕಾರ್ಯದರ್ಶಿ ಎಂ.ಎಸ್ ಸುಧಾಮಣಿ, ಕಸಾಪ ನಿಕಟಪೂರ್ವ ಕೋಶಾಧ್ಯಕ್ಷ ಜಿ.ಎಸ್ ಸತ್ಯಮೂರ್ತಿ, ಮೋಹನ್, ಸೂಡಾ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ವೈಯಕ್ತಿಕವಾಗಿ ದೇಣಿಗೆ ನೀಡಿದರು. 
    ಕಸಾಪ ನಿಕಟಪೂರ್ವ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸುರೇಶ್‌ನಾಯರ್, ಎಸ್. ಉಮಾ, ಮಾಯಮ್ಮ, ಭಾಗ್ಯಮ್ಮ, ಆರ್. ಶೋಭಾ, ಕುಸುಮ, ಉಷಾ, ಮಲ್ಲಿಕಾಂಬ ಹಾಗು ಕಸಾಪ, ಕಜಾಪ, ಕಸಾಸಾಂವೇ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.