
ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ರವರ ಜನ್ಮದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಬಿ.ಇಡಿ ಕಾಲೇಜುಗಳ ಡಾ.ಬಿ.ಆರ್ ಅಂಬೇಡ್ಕರ್ರವರ ವಿಚಾರಧಾರೆಗಳ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಭದ್ರಾವತಿ : ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಪ್ರತಿಯೊಂದು ಕ್ಷೇತ್ರಗಳಲ್ಲೂ ಪೈಪೋಟಿ ಏರ್ಪಟ್ಟಿದೆ. ಇಂತಹ ದಿನಗಳಲ್ಲಿ ಯುವಜನರು ಮೊಬೈಲ್ನಲ್ಲಿ ಸಮಯ ಕಾಲಹರಣ ಮಾಡುತ್ತಿದ್ದು, ಜೀವನದಲ್ಲಿ ಹಗಲುಗನಸು ಕಾಣುತ್ತಿದ್ದಾರೆ. ಜೀವನದಲ್ಲಿ ಸಫಲತೆ ಕಾಣಬೇಕಾದರೆ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು, ವ್ಯಕ್ತಿತ್ವ ನಿರ್ಮಾಣದೊಂದಿಗೆ ಇತರರಿಗೆ ಮಾದರಿಯಾಗಬೇಕೆಂದು ತಾಲೂಕಿನ ಅರಕೆರೆ ಸರ್ಕಾರಿ ಪ್ರೌಢಶಾಲೆಯ ಭಾಷಾ ಶಿಕ್ಷಕ, ಸಾಹಿತಿ ಅರಳೆಹಳ್ಳಿ ಅಣ್ಣಪ್ಪ ಹೇಳಿದರು.
ಅವರು ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ.
ಬಿ. ಆರ್ ಅಂಬೇಡ್ಕರ್ರವರ ಜನ್ಮದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಬಿ.ಇಡಿ ಕಾಲೇಜುಗಳ ಡಾ.ಬಿ.ಆರ್ ಅಂಬೇಡ್ಕರ್ರವರ ವಿಚಾರಧಾರೆಗಳ ಕುರಿತು ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಅಂತರ ಬಿ.ಇಡಿ ಕಾಲೇಜುಗಳ ಸ್ಪರ್ಧೆ ಏರ್ಪಡಿಸಿರುವುದು ಶ್ಲಾಘನೀಯ. ಸ್ಪರ್ಧೆಗಳ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ, ನಮ್ಮಲ್ಲಿರುವ ಸಾಮರ್ಥ್ಯ ನಮಗೆ ಅರಿವಾಗಲಿದೆ. ಬುದ್ಧ, ಬಸವಣ್ಣ, ಡಾ.ಬಿ.ಆರ್ ಅಂಬೇಡ್ಕರ್ ಸೇರಿದಂತೆ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
ಶಿಕ್ಷಕರಾದ ಸುಧೀಂದ್ರ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜ್ಞಾನವನ್ನು ಗಳಿಸಿಕೊಳ್ಳುವುದರ ಜೊತೆಗೆ ಇಂದಿನ ಆಧುನಿಕ ಜಗತ್ತಿಗೆ ಅವಶ್ಯಕವಾದ ಸಂವಹನ ಕೌಶಲ್ಯಗಳನ್ನು ಕಲಿತು ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಡಾ. ಸಿದ್ದರಾಜು, ಇಂದಿನ ಜಗತ್ತಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ರವರ ವಿಚಾರಧಾರೆಗಳು ಎಂದೆಂದಿಗೂ ಅತ್ಯವಶ್ಯಕ. ಡಾ ಬಿ.ಆರ್ ಅಂಬೇಡ್ಕರ್ರವರ ಚಿಂತನೆಗಳೇ ನಮಗೆ ದಾರಿದೀಪ, ಎಲ್ಲರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು, ಆ ಹಿನ್ನಲೆಯಲ್ಲಿ ತಾವೆಲ್ಲರೂ ಜ್ಞಾನದ ಜೊತೆ ವೃತ್ತಿ ಕೌಶಲ್ಯಗಳಾದ ಸಂವಹನ, ಚಿತ್ರಕಲೆ, ಭಾಷಣ ಕಲೆಗಳನ್ನು ಕಲಿತು, ವಿವಿಧ ರಂಗಗಳಲ್ಲಿ ಸಾಧನೆ ಮಾಡುವ ಮೂಲಕ ಉತ್ತಮ ಶಿಕ್ಷಕರಾಗುವಂತೆ ಕರೆ ನೀಡಿದರು.
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಬಿ.ಇಡಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳು ಮತ್ತು ಉಪನ್ಯಾಸಕರು ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ ನಿರ್ದೇಶಕರಾದ ನೇತ್ರಾವತಿ ಸುಭಾಷ್, ಸಾವಿತ್ರಿ ಗಣೇಶಪ್ಪ, ಎಸ್. ಹನುಮಂತಪ್ಪ ಎಸ್, ಸಂಶೋಧಕರಾದ ಪವನ್ರಾಜ್, ಪ್ರಜ್ವಲ್ ಕುಮಾರ್, ತೀರ್ಪುಗಾರರಾಗಿ ಮುಖ್ಯ ಶಿಕ್ಷಕ ನಾಗೇಶ್, ಜಾನಪದ ಕಲಾವಿದ ತಮಟೆ ಜಗದೀಶ್, ಚಿತ್ರಕಲಾ ಶಿಕ್ಷಕ ಶಿವಕುಮಾರ್ ಮತ್ತು ಹಿರಿಯ ರಂಗ ಕಲಾವಿದ ವೈ.ಕೆ. ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸ್ಪರ್ಧಾ ವಿಜೇತರು :
ಭಾಷಣ ಸ್ಪರ್ಧೆ : ವಿಸ್ಮಿತ್ .ವಿ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ, ಪ್ರಥಮ ಸ್ಥಾನ, ಸಿಂಚನ ಯು ನಾಯ್ಕ್-ಡಿ.ಕೆ ಶಿವಕುಮಾರ್ ಶಿಕ್ಷಣ ಮಹಾವಿದ್ಯಾಲಯ, ದ್ವಿತೀಯ ಸ್ಥಾನ, ಕೋಮಲ-ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ತೃತೀಯ ಸ್ಥಾನ, ಶೀಲವಂತೆ ಬಿ ಪೂಜಾರಿ-ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ, ಸಮಾಧಾನಕರ ಸ್ಥಾನ.
ಡಾ.ಬಿ.ಆರ್ ಅಂಬೇಡ್ಕರ್ರವರ ಕುರಿತು ರಸಪ್ರಶ್ನೆ ಸ್ಪರ್ಧೆ : ಮಲ್ಲಿಕಾರ್ಜುನ್ .ಎಂ ಮತ್ತು ಕಾರ್ತಿಕ್ .ಎ-ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಪ್ರಥಮ ಸ್ಥಾನ, ರಂಜಿತಾ ಮತ್ತು ಸ್ಫೂರ್ತಿ-ವಿಶ್ವೇಶ್ವರಾಯ ಶಿಕ್ಷಣ ಮಹಾವಿದ್ಯಾಲಯ, ದ್ವಿತೀಯ ಸ್ಥಾನ, ವಿನೋದ ಮತ್ತು ಲಕ್ಷ್ಮಣ್-ಜ್ಞಾನಭಾರತೀ ಶಿಕ್ಷಣ ಮಹಾವಿದ್ಯಾಲಯ, ತೃತೀಯ ಸ್ಥಾನ, ಶ್ರೀಲಕ್ಷ್ಮೀ ವಿ.ಎ ಮತ್ತು ಭೂಮಿಕಾ .ಡಿ-ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ, ಸಮಾಧಾನಕರ ಸ್ಥಾನ.
ಡಾ.ಬಿ.ಆರ್ ಅಂಬೇಡ್ಕರ್ರವರ ಭಾವಚಿತ್ರ ಬರೆಯುವ ಸ್ಪರ್ಧೆ:
ಪ್ರತಿಭಾ ಜೆ.ಡಿ-ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಪ್ರಥಮ ಸ್ಥಾನ, ಗಿರೀಶ ಕೆ ಎಂ-ಡಿ.ಕೆ ಶಿವಕುಮಾರ್ ಶಿಕ್ಷಣ ಮಹಾವಿದ್ಯಾಲಯ, ದ್ವಿತೀಯ ಸ್ಥಾನ, ಸಿಂದು .ಎಂ-ರಾಜೀವ್ಗಾಂಧಿ ಶಿಕ್ಷಣ ಮಹಾವಿದ್ಯಾಲಯ, ತೃತೀಯ ಸ್ಥಾನ, ಝೀಯಾನ ಸಾದತ್-ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಸಮಾಧಾನಕರ ಸ್ಥಾನ.
ಅಂಬೇಡ್ಕರ್ ಗೀತೆ/ಸಮೂಹ ಗಾಯನ ಸ್ಪರ್ಧೆ: ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ, ಪ್ರಥಮ ಸ್ಥಾನ, ಅಲ್ ಮಹಮ್ಮೂದ್ ಬಿ.ಇಡಿ ಕಾಲೇಜು, ದ್ವಿತೀಯ ಸ್ಥಾನ, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ, ತೃತೀಯ ಸ್ಥಾನ ಹಾಗು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ, ಸಮಾಧಾನಕರ ಸ್ಥಾನ ಪಡೆದುಕೊಂಡಿವೆ.