ಭದ್ರಾವತಿ: ನಗರದ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಈ ಬಾರಿ ಸಹ ೪೧ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ಮೇ.೨೫ರ ಭಾನುವಾರ ಮಧ್ಯಾಹ್ನ ೧೨ ರಿಂದ ೧ ಗಂಟೆವರೆಗೆ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಶ್ರೀ ಧರ್ಮಶ್ರೀ ಸಭಾಭವನದಲ್ಲಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಗಿದೆ.
ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಇದುವರೆಗೂ ಒಟ್ಟು ೭೭೬ ಜೊತೆ ಉಚಿತ ವಿವಾಹ ನಡೆಸಲಾಗಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ವರನಿಗೆ ಕಡ್ಡಾಯವಾಗಿ ೨೧ ವರ್ಷ ಮೇಲ್ಪಟ್ಟು, ವಧುವಿಗೆ ೧೮ ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. ಮೊದನೇ ಮದುವೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ವಿಧವಾ ವಿವಾಹಕ್ಕೆ ಅವಕಾಶವಿದೆ. ವಿವಾಹಕ್ಕೆ ಅಪೆಕ್ಷೆಯುಳ್ಳವರು ಮೇ.೧ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವಿವಾಹ ಕೋರಿಕೆಯ ಮನವಿ ಪತ್ರ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಹಾ. ರಾಮಪ್ಪ, ಮೊ: ೯೮೮೦೭೭೯೨೯೩ ಅಥವಾ ಡಿ.ಆರ್ ಶಿವಕುಮಾರ್, ಮೊ: ೯೯೬೪೨೩೭೦೭೮ ಸಂಖ್ಯೆಗೆ ಕರೆಮಾಡಬಹುದಾಗಿದೆ. ಅಥವಾ ಕೆ. ನಿರಂಜನ, ವ್ಯವಸ್ಥಾಪಕರು, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ, ಬಿ.ಎಚ್ ರಸ್ತೆ, ಭದ್ರಾವತಿ ಈ ವಿಳಾಸ ಸಂಪರ್ಕಿಸಬಹುದಾಗಿದೆ.