Sunday, April 27, 2025

ಏ.೩೦ರಂದು ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ



    ಭದ್ರಾವತಿ : ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏ.೩೦ರಂದು ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಹಳೇನಗರದ ಕನಕಮಂಟಪದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ. 
    ಬೆಳಿಗ್ಗೆ ೯ ಗಂಟೆಗೆ ನಗರದ ಅಂಡರ್‌ಬ್ರಿಡ್ಜ್ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಶ್ರೀ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾಗು ಕಲಾ ತಂಡಗಳೊಂದಿ ಮೆರವಣಿಗೆ ನಡೆಯಲಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಿ.ಎಸ್ ಅರುಣ್, ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ವೀರಶೈವ ಸಮಾಜ(ನಗರ) ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ(ಗ್ರಾಮಾಂತರ) ಅಧ್ಯಕ್ಷೆ ಸಾಕಮ್ಮ ಮಹೇಶ್, ತಹಸೀಲ್ದಾರ್ ಪರುಸಪ್ಪ ಕುರುಬರ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಮತ್ತು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
    ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಲಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಉಗ್ರರ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಪಂಜಿನ ಮೆರವಣಿಗೆ ನಡೆಸಿ ಶ್ರದ್ದಾಂಜಲಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. 
    ಭದ್ರಾವತಿ:  ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ತಾಲೂಕಿನ ಶಂಕರಘಟ್ಟದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. 
    ಶಂಕರಘಟ್ಟದ ಎಸ್‌ಬಿಐ ಬ್ಯಾಂಕ್ ಸಮೀಪದಿಂದ ಆರಂಭಗೊಂಡ ಮೆರವಣಿಗೆ ಗಾನವಿ ಹೋಟೆಲ್ ಸಮೀಪದವರೆಗೂ ನಡೆಯಿತು. ದಾಳಿ ಕೃತ್ಯವನ್ನು ಖಂಡಿಸುವ ಮೂಲಕ ತಕ್ಷಣ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಕಾಶ್ಮೀರದಲ್ಲಿ ಶಾಂತಿ ಕಾಪಾಡಬೇಕೆಂದು ಆಗ್ರಹಿಸಲಾಯಿತು. ಅಲ್ಲದೆ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಸಂತಾಪ ಸೂಚಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಿ ಉಪತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
    ಕುವೆಂಪು ವಿಶ್ವವಿದ್ಯಾನಿಲಯ ಎನ್‌ಎಸ್‌ಯುಐ ಗೌರವಾಧ್ಯಕ್ಷ ಆರ್. ಮುರುಗೇಶ್ ರವರು, ಗ್ರಾಮ ಪಂಚಾಯಿತಿ ಸದಸ್ಯರಾದ ಪುನೀತ್, ಶಿವಶಂಕರ್(ದಿಲ್ಲಿ), ಪ್ರವೀಣ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಮಾದೇಶ್, ಸಿಂಗನ ಮನೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಡಿ.ಟಿ ಶಶಿಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಶರವಣ, ಮೂರ್ತಿ, ಪುಟ್ಟರಾಜು, ಮೋಹನ್, ಯೋಗೇಶ್(ಬಿಲ್ಲ), ಪ್ರವೀಣ್ ಶಾಸ್ತ್ರಿ, ವಾಸು, ವೆಂಕಟೇಶ್, ಶಶಿಕುಮಾರ್, ಘಟ್ಟ, ಗಂಗಾಧರ್, ಸುಮಿತ್ರ, ಮಂಜುನಾಥ್, ಮಂಜುಳಾ, ರೇವತಿ, ಶುಭ, ಚಂದನ, ಸುಧಾ, ಶಿಲ್ಪ, ಶೋಭಾ, ವರಲಕ್ಷ್ಮಿ, ಶರಣ, ರಮೇಶ್, ವಿನಯ್, ರವಿಕುಮಾರ್, ಗಿರೀಶ್, ವೆಂಕಿ, ಅಪ್ಪು, ಕೀರ್ತಿ, ಕಾಶಿ, ಕೋಟಿ, ಚೇತು, ವೇಲು, ಸಂದೀಪ್, ಮಂಜುನಾಥ್, ಸುರೇಶ್, ಪ್ರಮೋದ್, ರವಿಶಂಕರ್, ವಿನಾಯಕ, ಸಂತೋಷ್, ಅಮಿತ್, ರವಿ, ಕಿರಣ್ ಕುಮಾರ್, ಚಿರಂತ್, ಮೌನಿಕ, ವನಿತಾ, ಪಲ್ಲವಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಂಗನ ಮನೆ, ತಾವರಘಟ್ಟ, ಕಂಬದಾಳ ಹೊಸೂರು ಸೇರಿದಂತೆ ಸುತ್ತಮುತ್ತಲ ಗ್ರಾಮ ಪಂಚಾಯಿತಿ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.