ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಭದ್ರಾವತಿ ಕ್ಷೇತ್ರ ಅಭಿವೃದ್ಧಿ ವೇದಿಕೆ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಕಾರ್ಮಿಕ ಮುಖಂಡರಾದ ಶಿವಮೂರ್ತಿ, ಅಡವೀಶಯ್ಯ, ಜಿ.ಟಿ ಬಸವರಾಜ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.
ಭದ್ರಾವತಿ : ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಭದ್ರಾವತಿ ಕ್ಷೇತ್ರ ಅಭಿವೃದ್ಧಿ ವೇದಿಕೆ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ಹಿರಿಯ ಸಹಕಾರಿ ಧುರೀಣ, ಅಭಿವೃದ್ಧಿ ವೇದಿಕೆ ಅಧ್ಯಕ್ಷ ಜಿ.ಟಿ ಬಸವರಾಜ್ ಸಭೆ ಅಧ್ಯಕ್ಷತೆ ವಹಿಸಿದ್ದರು. ಎಂಪಿಎಂ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಶಿವಮೂರ್ತಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಹಾಗು ಕಾರ್ಖಾನೆಗಳ ಸ್ಥಿತಿಗತಿಗಳ ಕುರಿತು ವಿವರವಾಗಿ ತಿಳಿಸಿದರು.
ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಉಪಾಧ್ಯಕ್ಷ ಅಡವಿಶಯ್ಯ, ಕ್ಷೇತ್ರದಲ್ಲಿ ಕಾರ್ಮಿಕರು ಎದುರಿಸುತ್ತಿರುವ ಶೋಚನೀಯ ಸ್ಥಿತಿ ಹಾಗು ವಿಐಎಸ್ಎಲ್ ಕಾರ್ಖಾನೆಯ ವಸತಿ ಗೃಹಗಳ ಬಗ್ಗೆ, ಆಡಳಿತ ವರ್ಗ ಮನೆ ಬಾಡಿಗೆ ಹಣ ಹೆಚ್ಚು ಮಾಡುತ್ತಿರುವ ಕುರಿತು ಮಾತನಾಡಿದರು. ನಾಗೇಶ್ ಕಾರ್ಮಿಕರ ದಿನಾಚರಣೆ ಹಿನ್ನಲೆಯನ್ನು ವಿವರಿಸಿದರು.
ನಗರಸಭೆ ಸದಸ್ಯ ಕಾಂತರಾಜ್, ನ್ಯಾಯವಾದಿ ಎಂ. ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಲಾವಿದ ಜಂಬೂಸ್ವಾಮಿ ಪ್ರಾರ್ಥಿಸಿ, ಹಿರಿಯ ಕಾರ್ಮಿಕ ಮುಖಂಡ ಡಿ. ನರಸಿಂಹಮೂರ್ತಿ ಸ್ವಾಗತಿಸಿದರು. ಕೆ.ಜೆ ಹನುಮಂತಯ್ಯ ವಂದಿಸಿದರು.