ಭಾನುವಾರ, ಮೇ 4, 2025

ಶ್ರೀ ಭಗೀರಥ ಮಹರ್ಷಿ ಜಯಂತಿ

ಭೂ ಲೋಕದ ಕಲ್ಯಾಣಕ್ಕಾಗಿ ಮಹಾ ತಪ್ಪಸ್ಸಿನೊಂದಿಗೆ ಗಂಗೆಯನ್ನು ಭೂಮಿಗೆ ಕರೆತಂದ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿ ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಆಚರಿಸಲಾಯಿತು. 
    ಭದ್ರಾವತಿ : ಭೂ ಲೋಕದ ಕಲ್ಯಾಣಕ್ಕಾಗಿ ಮಹಾ ತಪ್ಪಸ್ಸಿನೊಂದಿಗೆ ಗಂಗೆಯನ್ನು ಭೂಮಿಗೆ ಕರೆತಂದ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಆಚರಿಸಲಾಯಿತು. 
    ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸ್ಮರಿಸಲಾಯಿತು. ಉಪತಹಸೀಲ್ದಾರ್ ಮಂಜಾನಾಯ್ಕ ಅವರ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ನಾರಾಯಣ ಗೌಡ, ತಾಲೂಕು ಉಪ್ಪಾರ ಸಮಾಜದ ಪ್ರಮುಖರಾದ ಎಸ್ ರಾಜಶೇಖರ ಉಪ್ಪಾರ, ರವೀಶ್ ಕುಮಾರ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಎಸ್‌ಎಸ್‌ಎಲ್‌ಸಿ : ಪತ್ರಿಕಾ ವಿತರಕನ ಪುತ್ರಿಗೆ ೬೧೧ ಅಂಕ

ಕೀರ್ತನಾ  
    ಭದ್ರಾವತಿ : ನಗರದ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರೌಢಶಾಲೆ ವಿದ್ಯಾರ್ಥಿನಿ ಕೀರ್ತನಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೧೧ ಅಂಕ ಪಡೆದು ಶೇ.೯೭.೭೬ ಫಲಿತಾಂಶದೊಂದಿಗೆ ಅತ್ಯನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 
    ವಿಶೇಷ ಎಂದರೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದು ಕೀರ್ತನಾ ಗಮನ ಸೆಳೆದಿದ್ದು, ಇವರು ನಗರದ ಹುಡ್ಕೋ ಕಾಲೋನಿ ನಿವಾಸಿ, ದಿನ ಪತ್ರಿಕೆಗಳ ವಿತರಕ ಕೃಷ್ಣಮೂರ್ತಿ ಮತ್ತು ಸ್ವರ್ಣಾಂಬ ದಂಪತಿ ಪುತ್ರಿಯಾಗಿದ್ದಾರೆ. ಕೀರ್ತನಾ ಸಾಧನೆಗೆ ನಗರದ ಪತ್ರಕರ್ತರು, ಪತ್ರಿಕಾ ವಿತರಕರು, ಗಣ್ಯರು ಹಾಗು ಸ್ಥಳೀಯ ನಿವಾಸಿಗಳು ಅಭಿನಂದಿಸಿದ್ದಾರೆ.