ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ನ್ಯೂಟೌನ್ ಠಾಣೆಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ನ್ಯೂಟೌನ್ ಠಾಣೆಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ.೨ ರಂದು ರಾತ್ರಿ ಮನೆಯ ಸಿಮೆಂಟ್ ಮೇಲ್ಛಾವಣಿಯನ್ನು ಒಡೆದು ಹಾಕಿ ಒಳಗೆ ಪ್ರವೇಶಿಸಿ ಸುಮಾರು ೧.೧೨ ಲಕ್ಷ ರು. ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.
ಪ್ರಕರಣ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ. ಜಿ. ಕಾರಿಯಪ್ಪ ರವರ ಮಾರ್ಗದರ್ಶನದಲ್ಲಿ ಉಪ ವಿಭಾಗದ ಉಪ ಅಧೀಕ್ಷಕ ಕೆ ಆರ್. ನಾಗರಾಜುರವರ ಮಾಗದರ್ಶನದಲ್ಲಿ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ರವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಟಿ ರಮೇಶ್ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಟಿ.ಪಿ ಮಂಜಪ್ಪ, ನವೀನ್ ಮತ್ತು ನಾಗರಾಜ್ ರವರನ್ನು ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡ ಆರೋಪಿ, ಮೀನುಗಾರರ ಬೀದಿಯ ನಿವಾಸಿ ಪಿ. ಜೈಕಾಂತ್(೨೧) ಈತನನ್ನು ಬಂಧಿಸಿ ಅಂದಾಜು ೧.೧೨ ಲಕ್ಷ ರು. ಮೌಲ್ಯದ ೧೧ ಗ್ರಾಂ ೩೦೦ ಮಿಲಿ ತೂಕದ ಬಂಗಾರದ ಅಭರಣ, ಒಂದು ವಾಚ್, ೨ ಸಾವಿರ ರು. ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಒಪ್ಪೋ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.