ಭದ್ರಾವತಿ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್ಎಸ್ಎಸ್ ಘಟಕ-೧ ಮತ್ತು ಘಟಕ-೨ರ ಸಹಯೋಗದೊಂದಿಗೆ ಶಿವಮೊಗ್ಗ ತಾಲೂಕಿನ ಕಾಟಿಕೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದವರೆಗೆ ವಾರ್ಷಿಕ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್ಎಸ್ಎಸ್ ಘಟಕ-೧ ಮತ್ತು ಘಟಕ-೨ರ ಸಹಯೋಗದೊಂದಿಗೆ ಶಿವಮೊಗ್ಗ ತಾಲೂಕಿನ ಕಾಟಿಕೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದವರೆಗೆ ವಾರ್ಷಿಕ ಶಿಬಿರ ಆಯೋಜಿಸಲಾಗಿತ್ತು.
ಮೇ.೨ರಿಂದ ಜರುಗಿದ ವಾರ್ಷಿಕ ಶಿಬಿರದಲ್ಲಿ ಶ್ರಮದಾನ, ವ್ಯಕ್ತಿತ್ವ ವಿಕಸನ, ಉಚಿತ ಕಾನೂನು ಅರಿವು-ನೆರವು, ಕೃಷಿ ಸಮಸ್ಯೆ ಸವಾಲುಗಳು, ಶಾಲಾ ಆಟದ ಮೈದಾನ ಸ್ವಚ್ಛತೆ, ರಸ್ತೆ ನಿರ್ಮಾಣ ಮತ್ತು ರಸ್ತೆ ಸುರಕ್ಷತಾ ಕ್ರಮಗಳು, ಯೋಗ ಮತ್ತು ಧ್ಯಾನ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ, ಸಂಸ್ಕೃತಿ, ಸಮುದಾಯ ಜೀವನ ಮೌಲ್ಯಗಳ ಅರಿವು, ಅಗ್ನಿ ದುರಂತಗಳ ಬಗ್ಗೆ ಅರಿವು ಮತ್ತು ಜಾಗೃತಿ, ದೇವಸ್ಥಾನ ಆವರಣದ ಸ್ವಚ್ಛತೆ, ರಸ್ತೆ ಮತ್ತು ಚರಂಡಿ ಸ್ವಚ್ಛತೆ, ನಿರ್ಮಾಣ, ಉಚಿತ ಜಾನುವಾರುಗಳ ಲಸಿಕೆ/ತಪಾಸಣೆ, ಆರೋಗ್ಯ ಮಾಹಿತಿ ಮತ್ತು ಗ್ರಾಮ ಸಮೀಕ್ಷೆ ಕಾರ್ಯಕ್ರಮಗಳು ಜರುಗಿದವು.
`ಸಂವಿಧಾನ ಮತ್ತು ಮಹಿಳಾ ಸಂರಕ್ಷಣೆ ಹಕ್ಕುಗಳು' ಎಂಬ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ನಗರದ ನ್ಯಾಯವಾದಿ ಎಂ. ಶಿವಕುಮಾರ್ ಮಾತನಾಡಿದರು. ಪ್ರತಿಯೊಬ್ಬರು ಸಂವಿಧಾನದ ಮಹತ್ವ ಅರಿತು ಅದನ್ನು ಗೌರವಿಸಬೇಕು. ವಿಶೇಷವಾಗಿ ಮಹಿಳಾ ಸಂರಕ್ಷಣೆ ಹಕ್ಕುಗಳನ್ನು ತಿಳಿದುಕೊಳ್ಳಬೇಕೆಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳೇರ, ಶಿಬಿರಾಧಿಕಾರಿಗಳಾದ ಕೆ.ಎಂ ಮಹೇಶ್ ಕುಮಾರ್, ಎಂ. ಸತೀಶ್, ಸಹ ಶಿಬಿರಾಧಿಕಾರಿ ಎಸ್.ಕೆ ಶಂಕರಯಾದವ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಬೋಧಕ/ಬೋಧಕೇತರ ವರ್ಗ, ಅತಿಥಿ ಉಪನ್ಯಾಸಕರ ವರ್ಗ, ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಹಿರಿಯ ವಿದ್ಯಾರ್ಥಿಗಳು ಮತ್ತು ಕಾಟಿಕೆರೆ ಗ್ರಾಮಸ್ಥರು. ಶಿಬಿರದಲ್ಲಿ ಪಾಲ್ಗೊಂಡಿದ್ದರು.