ಇಆರ್ಎಸ್ಎಸ್-೧೧೨ ವಾಹನದ ಚಾಲಕ ಸಂತೋಷ್ ಕುಮಾರ್
ಭದ್ರಾವತಿ : ತಕ್ಷಣ ಕಾರ್ಯ ಪ್ರವೃತ್ತರಾಗಿ ಕರ್ತವ್ಯ ನಿಷ್ಠೆ ಮೆರೆಯುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವನನ್ನು ರಕ್ಷಿಸುವಲ್ಲಿ ಇಆರ್ಎಸ್ಎಸ್-೧೧೨ ವಾಹನದ ಅಧಿಕಾರಿ ಹಾಗು ಸಿಬ್ಬಂದಿ ಯಶಸ್ವಿಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಗ್ರಾಮದ ಯುವಕನೋರ್ವ ಚಾಲಕ ಹುದ್ದೆ ಕಳೆದುಕೊಳ್ಳುವ ಭೀತಿಯಲ್ಲಿ ಮೇ.೭ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಷಯ ತಿಳಿದ ಯುವಕನ ತಾಯಿ ೧೧೨ ವಾಹನಕ್ಕೆ ತುರ್ತು ಕರೆ ಮಾಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಇಆರ್ಎಸ್ಎಸ್ ಅಧಿಕಾರಿ, ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ವಿನಯ್ ಕುಮಾರ್ ಹಾಗು ಚಾಲಕ ಸಂತೋಷ್ ಕುಮಾರ್ರವರು ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಆಗಮಿಸಿ ಆತ್ಮಹತ್ಯೆ ಯತ್ನ ತಡೆದು ಯುವಕನಿಗೆ ಧೈರ್ಯ ತುಂಬಿದ್ದಾರೆ.
ಇಆರ್ಎಸ್ಎಸ್-೧೧೨ ವಾಹನದ ಅಧಿಕಾರಿ ಹಾಗು ಸಿಬ್ಬಂದಿ ಕಾರ್ಯವೈಖರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸುವ ಮೂಲಕ ಅಭಿನಂದಿಸಿದ್ದಾರೆ.