ಎ. ಅನನ್ಯ
ಭದ್ರಾವತಿ: ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸಿ.ಬಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಜ್ಞಾನಪೀಠ-ಸಿ.ಬಿ.ಎಸ್.ಇ ಶಾಲೆ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ. .
ಈ ಬಾರಿ ಪರೀಕ್ಷೆಗೆ ಶಾಲೆಯ ಒಟ್ಟು ೨೯ ವಿದ್ಯಾರ್ಥಿಗಳು ಹಾಜರಿದ್ದು, ಈ ಪೈಕಿ ೧೨ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಹಾಗು ೧೫ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಮತ್ತು ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಎ. ಅನನ್ಯ ಶೇ.೯೦, ಜಿ.ಎನ್ ಭುವನ ಶೇ.೮೯, ಎಸ್. ಹಿಮೇಶ್ ಶೇ.೮೮, ಆರ್. ದರ್ಶನ್ ಶೇ.೮೭.೬ ಹಾಗು ಎಂ. ದಿಯಾ ಶೇ.೮೭.೨ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ.
ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತಾಧಿಕಾರಿ ಡಿ. ಪ್ರಭಾಕರ್ ಬೀರಯ್ಯ, ಜಂಟಿ ಆಡಳಿತಾಧಿಕಾರಿ ಸೌಮ್ಯ ರೂಪ ಮತ್ತು ಪ್ರಾಂಶುಪಾಲರು ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.