Sunday, June 1, 2025

ವಿಜೃಂಭಣೆಯಿಂದ ಜರುಗಿದ ಗಂಗಮ್ಮ ಕರಗ ಮಹೋತ್ಸವ

ಭದ್ರಾವತಿ ಜನ್ನಾಪುರ ಹಾಲಪ್ಪ ಶೆಡ್ ಶ್ರೀ ಗಂಗಮ್ಮ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೫ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ: ಜನ್ನಾಪುರ ಹಾಲಪ್ಪ ಶೆಡ್ ಶ್ರೀ ಗಂಗಮ್ಮ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೫ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಶನಿವಾರ ಬೆಳಿಗ್ಗೆ ಅಮ್ಮನವರಿಗೆ ವಿಶೇಷ ಪೂಜೆ ಹಾಗು ಹೋಮ ನೆರವೇರಿತು. ಭಾನುವಾರ ಮಧ್ಯಾಹ್ನ  ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ರಾತ್ರಿ ರಾಜಬೀದಿಯಲ್ಲಿ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು. 


    ಹಾಲಪ್ಪ ಶೆಡ್, ಜನ್ನಾಪುರ, ಗಣೇಶ್ ಕಾಲೋನಿ, ವಿದ್ಯಾಮಂದಿರ, ನ್ಯೂಟೌನ್, ಆಂಜನೇಯ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಭಕ್ತರು ಕರಗ ಉತ್ಸವದಲ್ಲಿ ಪಾಲ್ಗೊಂಡಿದ್ದರು. 

ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಹೂವು, ಸಿಹಿ ನೀಡಿ ಆರತಿ ಬೆಳಗಿ ಅದ್ದೂರಿ ಸ್ವಾಗತ

ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಲಾಯಿತು. 
    ಭದ್ರಾವತಿ: ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ನಗರದ ನ್ಯೂಟೌನ್ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಲಾಯಿತು. 
    ಶಾಲಾ ಮಕ್ಕಳಿಗೆ ಹೂವು ಮತ್ತು ಸಿಹಿ ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿಶೇಷ ಎಂದರೆ ಶಾಲಾ ಮಕ್ಕಳ ಜೊತೆಗೆ ಶಿಕ್ಷಕ ವೃಂದದವರಿಗೂ ಕಿರುಕಾಣಿಕೆ ನೀಡುವ ಮೂಲಕ ಆರತಿ ಬೆಳಗಿ ವಿನೂತನವಾಗಿ ಬರಮಾಡಿಕೊಳ್ಳಲಾಯಿತು.   
    ಮೊದಲ ದಿನ ಮಕ್ಕಳಿಗೆ ಪೆನ್ನು, ಪೆನ್ಸಿಲ್, ರಬ್ಬರ್, ನೋಟ್ ಪುಸ್ತಕ ಸೇರಿದಂತೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿಯವರು, ಒಕ್ಕೂಟದ ಸದಸ್ಯೆಯರು ಉಪಸ್ಥಿತರಿದ್ದರು. 

ಶಾಸಕರ ಭರವಸೆ ಮೇರೆಗೆ ೩ನೇ ದಿನಕ್ಕೆ ಅನಿರ್ಧಿಷ್ಟಾವಧಿ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಭದ್ರಾವತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಗರಸಭೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ೩ನೇ ದಿನ ಭಾನುವಾರ ಸಹ ನಡೆಯಿತು. ಈ ನಡುವೆ ಶಾಸಕರ ಭರವಸೆ ಮೇರೆಗೆ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಲಾಯಿತು. 
ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಗರಸಭೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ೩ನೇ ದಿನ ಭಾನುವಾರ ಸಹ ನಡೆಯಿತು. ಈ ನಡುವೆ ಶಾಸಕರ ಭರವಸೆ ಮೇರೆಗೆ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಲಾಯಿತು. 
    ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ನಗರಸಭೆ ಹಿರಿಯ ಸದಸ್ಯ, ಶಾಸಕರ ಸಹೋದರ ಬಿ.ಕೆ ಮೋಹನ್ ಮಾತನಾಡಿ, ಪ್ರಸ್ತುತ ಶಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಅವರ ಭರವಸೆ ಮೇಲೆ ನಂಬಿಕೆ ಹೊಂದುವ ಮೂಲಕ ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು. 
    ನಾವು ಸಹ ಪೌರಕಾರ್ಮಿಕರ ಬೇಡಿಕೆಗಳ ಪರವಾಗಿದ್ದೇವೆ. ನಾವು ಬೇಡಿಕೆಗಳನ್ನು ವಿರೋಧಿಸುವುದಿಲ್ಲ. ನಮ್ಮ ಸರ್ಕಾರ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆಯುವ ನಿಟ್ಟಿನಲ್ಲಿ ಹೋರಾಟ ರೂಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಶಾಸಕರು ಸಹ ನಿಮ್ಮ ಪರವಾಗಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಿದ್ದಾರೆ. ಹೋರಾಟ ಒಂದೆಡೆ ಇರಲಿ ನಮ್ಮ ನಿಮ್ಮ ನಡುವೆ ಪ್ರೀತಿ, ವಿಶ್ವಾಸ, ನಂಬಿಕೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಮಾತನಾಡಿ, ನಮ್ಮ ಸರ್ಕಾರ ಪೌರಕಾರ್ಮಿಕ ಬೇಡಿಕೆಗಳನ್ನು ಈಡೇರಿಸಲಿದೆ. ಕಾಂಗ್ರೆಸ್ ಪಕ್ಷ ನಿಮ್ಮ ಹೋರಾಟಕ್ಕೆ ಸದಾ ಬೆಂಬಲ ನೀಡುತ್ತದೆ. ಪೌರಕಾರ್ಮಿಕರ ಹಿತ ಪಕ್ಷದ ಹಿತವಾಗಿದೆ. ಹೋರಾಟಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಯಾವುದೇ ರೀತಿಯ ಹೋರಾಟಕ್ಕೂ ಪಕ್ಷ ಬೆಂಬಲ ನೀಡಲಿದೆ ಎಂದರು. 
    ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎಸ್. ಚೇತನ್‌ಕುಮಾರ್ ಮಾತನಾಡಿ, ಶಾಸಕರ ಮೇಲೆ ನಂಬಿಕೆ ಇದೆ. ಹೋರಾಟವನ್ನು ತಾತ್ಕಲಿಕವಾಗಿ ಮುಂದೂಡಲಾಗುವುದು. ನಮ್ಮ ಬೇಡಿಕೆಗಳನ್ನು ನಾವು ಹಿಂಪಡೆಯಲು ಸಾಧ್ಯವಿಲ್ಲ. ಸರ್ಕಾರ ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಪ್ರಭಾರ ಪೌರಾಯುಕ್ತರಾದ ಸುನಿತಾಕುಮಾರಿ, ಸದಸ್ಯರಾದ ಚನ್ನಪ್ಪ, ಬಿ.ಎಂ ಮಂಜುನಾಥ್, ಮುಖಂಡರಾದ ಅಮೀರ್‌ಜಾನ್, ಶ್ರೀನಿವಾಸ್, ಮೋಹನ್, ರಂಗನಾಥ್(ಕಬಡ್ಡಿ), ರಾಜೇಂದ್ರ ಸೇರಿಂದ ಇನ್ನಿತರರು ಪಾಲ್ಗೊಂಡಿದ್ದರು.  
    ಪ್ರಧಾನ ಕಾರ್ಯದರ್ಶಿ ಸಿ. ರವಿಪ್ರಸಾದ್, ಜಿಲ್ಲಾಧ್ಯಕ್ಷ ಡಿ.ಎಸ್ ಹೇಮಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ ಸೇರಿದಂತೆ ನಗರಸಭೆ ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.