ಭೂಮಿಕಾ ವೇದಿಕೆ ವತಿಯಿಂದ ಭದ್ರಾವತಿ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ `ಚೌಡಿಕೆ ಗೊಂದಲಿಗರ ಪದ' ವಿಶೇಷ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಭದ್ರಾವತಿ: ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಹೇಳಿದರು.
ಅವರು ಭೂಮಿಕಾ ವೇದಿಕೆ ವತಿಯಿಂದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ `ಚೌಡಿಕೆ ಗೊಂದಲಿಗರ ಪದ' ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಾನಪದಕ್ಕೆ ತನ್ನದೇ ಆದ ಮಹತ್ವವಿದೆ. ಕನ್ನಡನಾಡಿನ ಶ್ರೀಮಂತ ಕಲೆಗಳಲ್ಲಿ ಒಂದಾಗಿದೆ. ಇಂದಿನ ಯುವ ಸಮುದಾಯಕ್ಕೆ ಜಾನಪದ ಮಹತ್ವ ತಿಳಿಸಿಕೊಡುವ ಅಗತ್ಯವಿದೆ ಎಂದರು.
ಚೌಡಿಕೆ ಕಲಾವಿದ ಲಕ್ಷ್ಮಣರಾವ್ ಭೋರತ್ರವರ ತಂಡದಿಂದ ನಡೆದ `ಚೌಡಿಕೆ ಗೊಂದಲಿಗರ ಪದ' ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಮುನಿರಾಜ್, ಪುಷ್ಪ ತಂಡದವರು ಪ್ರಾರ್ಥಿಸಿ, ಶೋಭಾ ಸ್ವಾಗತಿಸಿದರು. ರೂಪರಾವ್ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಕವಿ, ಸಾಹಿತಿ ಡಾ. ಎಚ್.ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.