ಭದ್ರಾವತಿ: ತಾಲೂಕಿನ ಸುಣ್ಣದಹಳ್ಳಿ ಮನೆಯೊಂದರ ಮೇಲ್ಛಾವಣಿ ಹಂಚನ್ನು ತೆಗೆದು ಒಳಗೆ ಪ್ರವೇಶಿಸಿ ನಗದು, ಚಿನ್ನಾಭರಣ ಕಳವು ಮಾಡಿರುವ ಘಟನೆ ಕಳೆದ ೩ ದಿನಗಳ ಹಿಂದೆ ನಡೆದಿದೆ.
ನಾಗರಾಜ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಜೂ.೧೩ರ ಬೆಳಿಗ್ಗೆ ೬ ಗಂಟೆ ಸಮಯದಲ್ಲಿ ಮನೆಗೆ ಬೀಗ ಹಾಕಿ ತುಮಕೂರಿಗೆ ಹೋಗಿದ್ದು, ಪುನಃ ಹಿಂದಿರುಗಿ ಸಂಜೆ ೬.೩೦ರ ಸಮಯದಲ್ಲಿ ಮನೆಗೆ ಬಂದು ನೋಡಿದಾಗ ಕಳ್ಳತನ ಮಾಡಿರುವುದು ಕಂಡು ಬಂದಿದೆ.
ಬೀರುವಿನಲ್ಲಿದ್ದ ಸುಮಾರು ೬೫ ಸಾವಿರ ರು. ಮೌಲ್ಯದ ಚಿನ್ನಾಭರಣ ಹಾಗು ೩ ಲಕ್ಷ ರು. ನಗದು ಹಣ ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಪೇಪರ್ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.