Sunday, June 22, 2025

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ಕೀರ್ತನಾಗೆ ಶ್ರೀಗಳಿಂದ ಸನ್ಮಾನ, ಅಭಿನಂದನೆ

ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಕೀರ್ತನಾ ಅವರನ್ನು ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದಿಸಿದರು. 
    ಭದ್ರಾವತಿ: ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಕೀರ್ತನಾ ಅವರನ್ನು ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದಿಸಿದರು. 
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೧೧ ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈಕೆ ಕನ್ನಡಪ್ರಭ ಪತ್ರಿಕಾವಿತರಕ ಕೃಷ್ಣಮೂರ್ತಿ ಮತ್ತು ಸ್ವಣಾಂಬ ದಂಪತಿ ಪುತ್ರಿಯಾಗಿದ್ದಾರೆ. 
    ವೇದಿಕೆಯಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ವಿಶ್ವಕರ್ಮ ಸಮಾಜ ತಾಲೂಕು ಅಧ್ಯಕ್ಷ ಬಿ.ಕೆ ಶ್ರೀನಾಥ್ ಹಾಗು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸಮಾಜದ ಏಳಿಗೆ ಜೊತೆಗೆ ಪ್ರಾಮಾಣಿಕತೆ ಸಹ ಬಹಳ ಮುಖ್ಯ : ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿ

ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಉದ್ಘಾಟನೆ ಸಮಾರಂಭದ ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿಗಳು ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ನಿರ್ದೇಶಕರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಸನ್ಮಾನಿಸಿ ಅಭಿನಂದಿಸಿದರು. 
    ಭದ್ರಾವತಿ: ಸಮಾಜದ ಏಳಿಗೆ ಜೊತೆಗೆ ಪ್ರಾಮಾಣಿಕತೆ ಸಹ ಬಹಳ ಮುಖ್ಯವಾಗಿದೆ. ಸಮಾಜವನ್ನು ಉತ್ತಮವಾಗಿ ಸಂಘಟಿಸುವ ಜೊತೆಗೆ ಮತ್ತಷ್ಟು ಬಲಿಷ್ಠಗೊಳ್ಳಬೇಕು. ಆಗ ಮಾತ್ರ ಸಮಾಜಕ್ಕೆ ಬಲ ಬರುತ್ತದೆ ಎಂದು ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿ ಹೇಳಿದರು. 
ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಉದ್ಘಾಟನೆ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಶ್ರೀಗಳು ಮಾತನಾಡಿದರು. 
ಯಾವ ಸಮಾಜ ದುರ್ಬಲವಾಗಿರುತ್ತದೆಯೋ ಆ ಸಮಾಜದ ಏಳಿಗೆ ಕಷ್ಟಸಾಧ್ಯ ಎಂಬುದನ್ನು ಸಮಾಜದ ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಸಮಾಜದ ಸಂಘಟನೆಯಲ್ಲಿ ತೊಡಗಿಸಿಕೊಂಡವರು ಸ್ವಾರ್ಥ ಮನೋಭಾವದಿಂದ ಹೊರಬಂದು ಯಾವುದೇ ಅಪಸ್ವರಗಳಿಗೆ ಎಡೆಮಾಡಿಕೊಡದೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದು ಆಶಿಸಿದರು. 
ಎಲ್ಲಾ ಯುಗದಲ್ಲೂ ಸಮಾಜಕ್ಕೆ ಋಣಿಯಾದ ಸಮಾಜ ಎಂದರೆ ಅದು ವಿಶ್ವಕರ್ಮ. ಇಂತಹ ಸಮಾಜದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ಶಾಸಕರು ಇಲ್ಲಿನ ಸಮಾಜಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಜೊತೆಗೆ ನಿವೇಶನ ಮಂಜೂರಾತಿ ಮಾಡಿಸಬೇಕು ಎಂದರು. 
ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜೊತೆಗೆ ಶಿಕ್ಷಣವಂತರನ್ನಾಗಿಸಬೇಕು. ಆ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು. 
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ವಿಶ್ವಕರ್ಮ ಸಮಾಜಕ್ಕೆ ತನ್ನದೇ ಆದ ಪರಂಪರೆ ಇದೆ. ಈ ಸಮಾಜದ ಕೊಡುಗೆ ಅನನ್ಯವಾಗಿದೆ. ಇಂತಹ ಸಮಾಜ ಇನ್ನೂ ಸಂಘಟಿತಗೊಂಡು ಬಲಗೊಳ್ಳಬೇಕು. ಶಾಸಕರು ಹಾಗು ಕುಟುಂಬ ವರ್ಗದವರು ಈ ಸಮಾಜದ ಅಭಿವೃದ್ಧಿಗೆ ಬದ್ಧರಾಗಿದ್ದಾರೆ ಎಂದರು. 
ಸಮಾಜದ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆವಹಿಸಿ ಮಾತನಾಡಿ, ಸಮಾಜದಲ್ಲಿ ನಾವು ಗುರುತಿಸಿಕೊಳ್ಳಬೇಕಾದರೆ ಹೆಚ್ಚು ಸಂಘಟಿತಗೊಳ್ಳಬೇಕು. ಸಮಾಜದ ಪ್ರತಿಯೊಬ್ಬರಿಗೂ ಜವಾಬ್ದಾರಿ ಇದೆ. ಇದನ್ನು ಅರ್ಥಮಾಡಿಕೊಂಡು ಸಮಾಜದ ಏಳಿಗೆಗೆ ಕೈಜೋಡಿಬೇಕೆಂದರು. 
ಸಮಾಜದ ಗೌರವಾಧ್ಯಕ್ಷ ಬಿ.ಎಲ್ ನಾಗರಾಜ್, ಕಾರ್ಯಾಧ್ಯಕ್ಷ ಸಿ. ರಾಮಚಾರಿ, ಉಪಾಧ್ಯಕ್ಷರಾದ ರವಿಶಂಕರಚಾರಿ, ಆರ್. ದೊಡ್ಡವೀರಚಾರ್, ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ್, ಸಹ ಕಾರ್ಯದರ್ಶಿ ಪಿ. ಮಂಜುನಾಥ್, ಖಜಾಂಚಿ ಎ. ಬಸವರಾಜಚಾರಿ, ಸಂಘಟನಾ ಕಾರ್ಯದರ್ಶಿ ಕುಮಾರಚಾರಿ, ಸಹ ಸಂಘಟನಾಕಾರ್ಯದರ್ಶಿಗಳಾದ ಎಸ್. ಸುಭಾಷ್, ಮಂಜೇಶ್ ವಸಿಷ್ಠ, ಎಸ್. ಭಾನುಪ್ರಕಾಶ್, ಎನ್. ರಘು ಮತ್ತು ಕಾರ್ಯಕಾರಿ ಸಮಿತಿ ನಿರ್ದೇಶಕರು ಶ್ರೀಗಳಿಂದ ಪ್ರಮಾಣ ಪತ್ರ ಸ್ವೀಕರಿಸಿದರು. 
ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿನಿ ಕೀರ್ತನಾ ಅವರನ್ನು ಶ್ರೀಗಳು ಸನ್ಮಾನಿಸಿ ಅಭಿನಂದಿಸಿದರು. ಈಕೆ ಪತ್ರಿಕಾವಿತರಕ ಕೃಷ್ಣಮೂರ್ತಿ ಮತ್ತು ಸ್ವಣಾಂಬ ದಂಪತಿ ಪುತ್ರಿಯಾಗಿದ್ದಾರೆ. 
ಇದಕ್ಕೂ ಮೊದಲು ಹಳೇನಗರದ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಎನ್‌ಎಸ್‌ಟಿ ರಸ್ತೆಯಲ್ಲಿ ನೂತನ ಕಛೇರಿ ಉದ್ಘಾಟಿಸಲಾಯಿತು.