ಕರ್ನಾಟಕ ನೀರಾವರಿ ನಿಗಮ ಇಲಾಖೆ ವತಿಯಿಂದ ಸಮುದಾಯ ಭವನಗಳಿಗೆ ಕಾನೂನುಬಾಹಿರವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿ ಭದ್ರಾವತಿ ಫಿಲ್ಟರ್ ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ನಗರದ ಮಿಲ್ಟ್ರಿಕ್ಯಾಂಪ್ನಲ್ಲಿರುವ ಬಿಆರ್ಎಲ್ಬಿಸಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ: ಕರ್ನಾಟಕ ನೀರಾವರಿ ನಿಗಮ ಇಲಾಖೆ ವತಿಯಿಂದ ಸಮುದಾಯ ಭವನಗಳಿಗೆ ಕಾನೂನುಬಾಹಿರವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿ ಫಿಲ್ಟರ್ ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ನಗರದ ಮಿಲ್ಟ್ರಿಕ್ಯಾಂಪ್ನಲ್ಲಿರುವ ಬಿಆರ್ಎಲ್ಬಿಸಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜನ್ನಾಪುರ ಶ್ರೀ ಅಂತರ ಘಟ್ಟಮ್ಮ ಸಾರ್ವಜನಿಕ ಸಮುದಾಯ ಭವನದ ಕಾಮಗಾರಿಗೆ ೨೦೧೯-೨೦೨೦ರಲ್ಲಿ ೧೫ ಲಕ್ಷ ರು. ಅನುದಾನ ಬಿಡುಗಡೆಯಾಗಿರುತ್ತದೆ. ಟ್ರಸ್ಟ್ ಅಧಿಕೃತವಾಗಿ ನೋಂದಣಿಯಾಗಿರುವುದಿಲ್ಲ. ಅಲ್ಲದೆ ಸರ್ಮಪಕ ದಾಖಲೆಗಳಿರುವುದಿಲ್ಲ. ಆದರೂ ಸಹ ಅನುದಾನ ಬಿಡುಗಡೆ ಮಾಡಿರುತ್ತಾರೆ. ಈ ಹಿನ್ನಲೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಸಮುದಾಯ ಭವನದ ಟ್ರಸ್ಟ್ ನೋಂದಣಿಯಾಗಿರುವುದು ೨೦೨೨-೨೩ರಲ್ಲಿ ಭವನಕ್ಕೆ ನಗರಸಭೆಯವರು ವಿಐಎಸ್ಎಲ್ಗೆ ಸೇರಿದ ಜಾಗಕ್ಕೆ ಆಕ್ರಮವಾಗಿ ಸರ್ಕಾರಿ ಜಾಗವೆಂದು ಖಾತೆ ಮಾಡಿ ಕೊಟ್ಟಿರುವುದು ದುರಂತ. ಆದ್ದರಿಂದ ಸೂಕ್ತ ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿವಾಗಿರುವ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳುವಂತೆ ಆಗ್ರಹಿಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ದಿವ್ಯಶ್ರೀ, ಇಂದ್ರಮ್ಮ, ಮಾಲಮ್ಮ, ಮುನಿಯಮ್ಮ, ಮಾದೇವಿ, ಸುರೇಶ್, ಪರಮೇಶ್ವರಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.