Friday, June 27, 2025

ತಾಲೂಕು ಕಛೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಶುಕ್ರವಾರ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು. 
    ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಶುಕ್ರವಾರ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. 
    ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕೆಂಪೇಗೌಡರ ಆಡಳಿತ ವ್ಯವಸ್ಥೆ, ಭವಿಷ್ಯದ ಚಿಂತನೆ, ನಾಡಿಗೆ ನೀಡಿರುವ ಕೊಡುಗೆ ಸ್ಮರಿಸಲಾಯಿತು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ರಿಯಾಜ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಮಂಜುಳ ಸುಬ್ಬಣ್ಣ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಪರುಸಪ್ಪ ಕುರುಬರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉಪತಹಸೀಲ್ದಾರ್ ಮಂಜಾನಾಯ್ಕ,  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಛೇರಿ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಆಟೋ ಮಾಲೀಕರು, ಚಾಲಕರು, ಅಪ್ಪಾಜಿ ಅಭಿಮಾನಿಗಳಿಂದ ಕೆಂಪೇಗೌಡ ಜಯಂತಿ ಆಚರಣೆ

ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ಆಟೋ ಮಾಲೀಕರು, ಚಾಲಕರು ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ಆಟೋ ಮಾಲೀಕರು, ಚಾಲಕರು ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಿಸಲಾಯಿತು. 
    ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷೆ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿ ಸಾರ್ವಜನಿಕರಿಗೆ ಲಾಡು ಹಂಚಲಾಯಿತು. 
    ಮುಖಂಡರಾದ ತಿಮ್ಮೇಗೌಡ, ಆಟೋ ಚಾಲಕ ಸಂಘದ ಲಕ್ಷ್ಮಣ್, ಅರುಣ್, ವಿಶ್ವೇಶ್ವರ ಗಾಯಕ್ವಾಡ್, ಕಾರ್ಮಿಕ ಮುಖಂಡ ಎನ್. ಶ್ರೀನಿವಾಸ್, ಭಾಗ್ಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ನಾಡಪ್ರಭು ಕೆಂಪೇಗೌಡರ ಜಯಂತಿ : ಭವ್ಯ ಮೆರವಣಿಗೆ

ಭದ್ರಾವತಿಯಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಶುಕ್ರವಾರ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಕೆಂಪೇಗೌಡರ ಹಾಗು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಮತ್ತು ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. 
    ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಶುಕ್ರವಾರ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಕೆಂಪೇಗೌಡರ ಹಾಗು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಮತ್ತು ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. 
    ಮೆರವಣಿಗೆಗೆ ಸಂಘದ ಗೌರವಾಧ್ಯಕ್ಷೆ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿದ್ದರು. 
    ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದ್ದವು. ಲೋಯರ್ ಹುತ್ತಾದಿಂದ ಆರಂಭಗೊಂಡ ಮೆರವಣಿಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತದವರೆಗೆ ಸಾಗಿತು. 
    ಮೆರವಣಿಗೆಯಲ್ಲಿ ಸಂಘದ ಅಧ್ಯಕ್ಷ ಎಸ್. ಆನಂದ್ ಹಾಗು ಪದಾಧಿಕಾರಿಗಳು, ಒಕ್ಕಲಿಗ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದರು. 
 

ನಾಡಪ್ರಭು ಕೆಂಪೇಗೌಡರ ಆದರ್ಶತನ ಮೈಗೂಡಿಸಿಕೊಳ್ಳಿ : ಶಾರದ ಅಪ್ಪಾಜಿ

ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆಯಿಂದ ಜಯಂತಿ ಕಾರ್ಯಕ್ರಮ 


ಭದ್ರಾವತಿ ಅಪ್ಪರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಾರದ ಅಪ್ಪಾಜಿ  ಉದ್ಘಾಟಿಸಿದರು.
    ಭದ್ರಾವತಿ : ನಾಡಪ್ರಭು ಕೆಂಪೇಗೌಡರು ನಾಡುಕಂಡ ಅಪ್ರತಿಮ ನಾಯಕರಾಗಿದ್ದು, ಇಂತಹ ನಾಯಕನ ಆದರ್ಶತನಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಾರದ ಅಪ್ಪಾಜಿ ಹೇಳಿದರು. 
    ಅವರು ನಗರದ ಅಪ್ಪರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ಕೆಂಪೇಗೌಡರ ಜನ್ಮದಿನ ನಾವೆಲ್ಲರೂ ಒಗ್ಗಟ್ಟಾಗಿ ಮನೆ ಮಕ್ಕಳಂತೆ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಎಲ್ಲರಿಗೂ ಕೆಂಪೇಗೌಡರ ಜಯಂತಿ ಶುಭಾಶಯಗಳು ಎಂದರು. 


ಭದ್ರಾವತಿ ಅಪ್ಪರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. 
        ವೇದಿಕೆ ಅಧ್ಯಕ್ಷ, ನ್ಯಾಯವಾದಿ ಟಿ. ಚಂದ್ರೇಗೌಡ ಮಾತನಾಡಿ, ಈ ನಾಡಿಗೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ವೇದಿಕೆ ವತಿಯಿಂದ ಕೆಂಪೇಗೌಡರ ಜಯಂತಿ ಪ್ರತಿ ವರ್ಷ ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. 
    ಜಯಂತಿ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವೇದಿಕೆ ಪ್ರಧಾನ ಕಾರ್ಯದರ್ಶಿ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ, ಖಜಾಂಚಿ ವೆಂಕಟೇಶ್, ಉಪಾಧ್ಯಕ್ಷರಾದ ಕಬಡ್ಡಿ ಕೃಷ್ಣೇಗೌಡ, ಮಣಿ ಎಎನ್‌ಎಸ್, ಶಶಿಕುಮಾರ್, ಕಾರ್ಯದರ್ಶಿ ದೇವರಾಜ್, ನಗರಸಭೆ ಮಾಜಿ ಸದಸ್ಯ ಮಹೇಶ್, ಭಾಗ್ಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಒಕ್ಕಲಿಗ ಸಮಾಜದ ಮುಖಂಡರು, ಗಣ್ಯರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.