ಭದ್ರಾವತಿ ನಗರದ ಉಬ್ಳೆಬೈಲು ರಸ್ತೆ, ನ್ಯೂಟೌನ್, ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಸಂಜೆ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರೋಟರಿ ಕ್ಲಬ್ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಕೆ.ಎಚ್ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ ; ನಗರದ ಉಬ್ಳೆಬೈಲು ರಸ್ತೆ, ನ್ಯೂಟೌನ್, ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಸಂಜೆ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರೋಟರಿ ಕ್ಲಬ್ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಕೆ.ಎಚ್ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಕ್ಲಬ್ ೩೧೬೦ರ ಪಿಡಿಜಿ ಮತ್ತು ಆರ್.ಸಿ ಚಿತ್ರದುರ್ಗ ಕೆ. ಮಧುಪ್ರಸಾದ್ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿದರು. ನಂತರ ಮಾತನಾಡಿದ ಅವರು, ಉತ್ತಮ ಆಡಳಿತ ನಿರ್ವಹಣೆಯಿಂದ ಜಿಲ್ಲಾ ಕ್ಲಬ್ ವ್ಯಾಪ್ತಿಯಲ್ಲಿ ಹೆಚ್ಚಿನ ಗಮನ ಸೆಳೆದಿರುವ ಭದ್ರಾವತಿ ರೋಟರಿ ಕ್ಲಬ್ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ವಿಸ್ತಾರಗೊಳ್ಳುವಂತಾಗಲಿ ಎಂದರು.
ನೂತನ ಕಾರ್ಯದರ್ಶಿಯಾಗಿ ಎಚ್. ಆರ್ ಕೇಶವಮೂರ್ತಿ ಹಾಗು ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಸವಿತ ರಾಜೇಂದ್ರಕುಮಾರ್ ಲೋಧ ಮತ್ತು ಕಾರ್ಯದರ್ಶಿ ಸವಿತ ಶಾಂತಕುಮಾರ್ ತಂಡದವರು ಅಧಿಕಾರ ಸ್ವೀಕರಿಸಿದರು. ಕ್ಲಬ್ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲಾ ಕ್ಲಬ್ ೩೧೮೨ರ ಎ.ಜಿ ಕೆ.ಪಿ ಶೆಟ್ಟಿ ಹಾಗೂ ಜಿಲ್ಲಾ ಕ್ಲಬ್ ೩೧೮೨ರ ಝಡ್.ಎಲ್ ಜಗದೀಶ್ ಸರ್ಜಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳು:
ರೋಟರಿ ಕ್ಲಬ್ ಅಧ್ಯಕ್ಷ-ಕೆ.ಎಚ್ ಶಿವಕುಮಾರ್, ಉಪಾಧ್ಯಕ್ಷರು- ಪಿ. ಸುಧಾಕರ ಶೆಟ್ಟಿ, ರಾಜೇಂದ್ರಕುಮಾರ್ ಲೋಧ, ಕ್ಲಬ್ ಟ್ರೈನರ್-ಕೆ.ಎಸ್ ಶೈಲೇಂದ್ರ, ಕಾರ್ಯದರ್ಶಿ-ಎಚ್.ಆರ್ ಕೇಶವಮೂರ್ತಿ, ನಿರ್ಗಮಿತ ಅಧ್ಯಕ್ಷ ಜಿ. ರಾಘವೇಂದ್ರ ಉಪಾಧ್ಯಾಯ, ಸಹ ಕಾರ್ಯದರ್ಶಿ-ಎಚ್.ಎಸ್ ದಿನೇಶ್, ಬಿ.ಎಸ್ ಚಂದ್ರಶೇಖರ್, ಖಜಾಂಚಿ-ಟಿ.ಎಸ್ ದುಷ್ಯಂತ್ ರಾಜ್, ನಿರ್ದೇಶಕರು-ಇಳೆಯರಾಜ, ಶ್ರೀನಿವಾಸ್, ವಿ. ಉದಯಕುಮಾರ್, ಆರ್.ಸಿ ಬೆಂಗಳೂರಿ, ಎಂ.ಎನ್ ಗಿರೀಶ್, ಕೆ.ಎಚ್ ತೀರ್ಥಯ್ಯ, ಹಾಲೇಶ್ ಎಸ್. ಕೂಡ್ಲಿಗೆರೆ, ಶ್ವೇತ ಎಂ. ರಮೇಶ್, ಮಲ್ಲಿಕಾರ್ಜುನ ಜ್ಯೋತಿ, ಆರ್. ನವೀನ್ ಮತ್ತು ಡಾ. ಕೆ. ನಾಗರಾಜ್.
ಭದ್ರಾವತಿ ನಗರದ ಉಬ್ಳೆಬೈಲು ರಸ್ತೆ, ನ್ಯೂಟೌನ್, ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಸಂಜೆ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರೋಟರಿ ಕ್ಲಬ್ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.