ಭದ್ರಾವತಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ಕಛೇರಿಯಲ್ಲಿ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ: ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ಕಛೇರಿ ಹಾಗು ನಗರಸಭೆ ಕಛೇರಿಯಲ್ಲಿ ಗುರುವಾರ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಆಚರಿಸಲಾಯಿತು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್-೨ ಮಂಜಾನಾಯ್ಕರವರು ಹಡಪದ ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸುವ ಮೂಲಕ ಜನ್ಮದಿನ ಆಚರಿಸಲಾಯಿತು.
ಉಪ ತಹಸೀಲ್ದಾರ್ ರಾಜ್ ಅರಸ್, ಸಮಾಜದ ಅಧ್ಯಕ್ಷ ಲಕ್ಷ್ಮೀಪತಿ, ಸಮಾಜ ಬಾಂಧವರು ಮತ್ತು ತಾಲೂಕು ಕಛೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವರ್ಗದವರು ಪಾಲ್ಗೊಂಡಿದ್ದರು.
ನಗರಸಭೆ ಕಛೇರಿ:
ನಗರಸಭೆ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಶಿವಶರಣ, ವಚನಕಾರ ಹಡಪದ ಅಪ್ಪಣ್ಣರವರ ಜನ್ಮದಿನ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್ಕುಮಾರ್ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸಿದರು.
ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಹಡಪದ ಅಪ್ಪಣ್ಣನವರ ಕುರಿತು ಮಾತನಾಡಿದರು. ನಗರಸಭೆ ಸದಸ್ಯರು, ಅಭಿಯಂತರ ಶಿವಪ್ರಸಾದ್, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಮೇಶ್, ಲೆಕ್ಕಾಧಿಕಾರಿ ಗಿರಿಧರ್ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.