ಸದ್ಬಳಕೆ ಮಾಡಿಕೊಳ್ಳಲು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕರೆ

ಭದ್ರಾವತಿ ನ್ಯೂಟೌನ್ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ನಗರಭೆ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ `ನಮ್ಮ ಕ್ಲಿನಿಕ್' ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ: ಸರ್ಕಾರಿ ಆಸ್ಪತ್ರೆ ಎಂಬ ಮನೋಭಾವನೆಯಿಂದ ಹೊರಬಂದು ಪ್ರತಿಯೊಬ್ಬರು `ನಮ್ಮ ಕ್ಲಿನಿಕ್' ಸೇವೆಯನ್ನು ಪಡೆಯುವ ಮೂಲಕ ಸದ್ಬಳಕೆ ಮಾಡಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.
ಅವರು ಭಾನುವಾರ ನ್ಯೂಟೌನ್, ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ನಗರಭೆ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ `ನಮ್ಮ ಕ್ಲಿನಿಕ್' ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ಉತ್ತಮ ಮೂಲ ಸೌಕರ್ಯ, ಉತ್ತಮ ಆಹಾರ ಮತ್ತು ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಮುಂದಾಗಿದೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಪ್ರತಿಯೊಂದು ಯೋಜನೆಗಳು ಇಂದು ಇಡೀ ದೇಶಕ್ಕೆ ಮಾದರಿಯಾಗುತ್ತಿವೆ. ಪ್ರತಿಯೊಬ್ಬರ ಮನೆಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಕಡುಬಡವರು, ಕೂಲಿಕಾರ್ಮಿಕರು ಹೆಚ್ಚಾಗಿ ವಾಸಿಸುತ್ತಿರುವ ನಗರಸಭೆ ವ್ಯಾಪ್ತಿಯ ಹೊಸಮನೆ ಹನುಮಂತ ನಗರ ಮತ್ತು ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್ನಲ್ಲಿ ಎರಡು ಕಡೆ `ನಮ್ಮ ಕ್ಲಿನಿಕ್' ಆರಂಭಿಸುವಂತೆ ಶಾಸಕರು ಸರ್ಕಾರಕ್ಕೆ ಕೋರಿದ್ದರು. ಅದರಂತೆ ಇದೀಗ ಕ್ಲಿನಿಕ್ ಆರಂಭಿಸಲಾಗುತ್ತಿದೆ ಎಂದರು.
ವೈದ್ಯರು, ಸಿಬ್ಬಂದಿಗಳು ಕ್ಲಿನಿಕ್ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಲು ಅಗತ್ಯವಿರುವ ಎಲ್ಲಾ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಸರ್ವಮಂಗಳ, ರೂಪಾವತಿ, ಬಸವರಾಜ್ ಬಿ. ಆನೇಕೊಪ್ಪ, ಐ.ವಿ ಸಂತೋಷ್ ಕುಮಾರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಮುಖಂಡರಾದ ಬಿ.ಕೆ ಜಗನ್ನಾಥ್, ಎಸ್.ಎಸ್ ಭೈರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಜಿಲ್ಲಾ ಆರೋಗ್ಯ ಅಧಿಕಾರಿ ಓ. ಮಲ್ಲಪ್ಪ, ಹಿರಿಯ ಆರೋಗ್ಯ ಸಹಾಯಕರಾದ ನಿಲೇಶ್ ರಾಜ್, ಆನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಸದಸ್ಯ ಚನ್ನಪ್ಪ ಸ್ವಾಗತಿಸಿದರು.