ಮಂಗಳವಾರ, ಜುಲೈ 15, 2025

ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನೆ

ಶ್ರೀ ಜಯತೀರ್ಥರ ಆರಾಧನೆ ಮೊಹೋತ್ಸವದ ಅಂಗವಾಗಿ ಮಂಗಳವಾರ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಆರಾಧನೆ ಮೊಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ : ಶ್ರೀ ಜಯತೀರ್ಥರ ಆರಾಧನೆ ಮೊಹೋತ್ಸವದ ಅಂಗವಾಗಿ ಮಂಗಳವಾರ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಆರಾಧನೆ ಮೊಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಬೆಳಗ್ಗೆ ಪಂಚಾಮೃತ ಅಭಿಷೇಕ, ಮೃತ್ಯುಕ ಗುರುರಾಜ ಅವರಿಂದ ಉಪನ್ಯಾಸ, ನಂತರ ಮಠದ ಪ್ರಕಾರದಲ್ಲಿಯೇ ರಥೋತ್ಸವ ಜರಗಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮತ್ತು ಬ್ರಾಹ್ಮಣರ ಪಾದ ತೊಳೆಯುವ ಕಾರ್ಯಕ್ರಮ ಹಾಗು ವಿವಿಧ ಭಜನಾ ಮಂಡಳಿಗಳಿಂದ ಜಯತೀರ್ಥರ ಸಂಕೀರ್ತನೆ ನಡೆಯಿತು. ಶ್ರೀ ಕೃಷ್ಣ ಚಂಡಿ ಬಳಗದಿಂದ ಚಂಡೆ ಉತ್ಸವ ವಿಜೃಂಭಣೆಯಿಂದ ಜರಗಿತು
    ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್, ಸತ್ಯನಾರಾಯಣಚಾರ್, ಸಮೀರಾಚಾರ್ ಹಾಗೂ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷ ಸುಮಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾಕಾಂತ, ಖಜಾಂಚಿ ನಿರಂಜನಾಚಾರ್ಯ ಮತ್ತು ಶುಭ ಗುರುರಾಜ್ ವಿದ್ಯಾನಂದ ನಾಯಕ, ಮಾಧುರಾವ್, ಗೋಪಾಲಕೃಷ್ಣ, ಸುಪ್ರೀತ ತಂತ್ರಿ ಸೇರಿದಂತೆ ಭಕ್ತ ವೃಂದದವರು ಪಾಲ್ಗೊಂಡಿದ್ದರು.

ಟೀಚರ್ ಎಲಿಸಬೆತ್ ಸಿಗಾಮಣಿ ನಿಧನ

ಎಲಿಸಬೆತ್ ಸಿಗಾಮಣಿ 
    ಭದ್ರಾವತಿ : ನಗರದ ಹೊಸಮನೆ ನಿವಾಸಿ ಸೈಂಟ್ ಚಾರ್ಲ್ಸ್ ಕನ್ನಡ ಶಾಲೆಯ ನಿವೃತ್ತ ಶಿಕ್ಷಕಿ ಎಲಿಸಬೆತ್ ಸಿಗಾಮಣಿ(೭೪)  ಸೋಮವಾರ ರಾತ್ರಿ ನಿಧನ ಹೊಂದಿದರು. 
    ಇವರಿಗೆ ಪತಿ, ಪುತ್ರ, ಪುತ್ರಿ ಮತ್ತು ಮೊಮ್ಮಕ್ಕಳು ಇದ್ದಾರೆ. ನ್ಯೂಟೌನ್ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ಮಂಗಳವಾರ ಅಂತ್ಯಸಂಸ್ಕಾರ ನೆರವೇರಿತು. ಸಿಗಾಮಣಿಯವರು ಸುಮಾರು ೪೦ ವರ್ಷ ಸೈಂಟ್ ಚಾರ್ಲ್ಸ್ ಕನ್ನಡ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಎಲಿಸಬೆತ್ ಟೀಚರ್ ಎಂದೆ ಖ್ಯಾತಿ ಪಡೆದಿದ್ದರು. ಅವರ ಬಳಿ  ಶಿಕ್ಷಣ ಪಡೆದ ನೂರಾರು ವಿದ್ಯಾರ್ಥಿಗಳು ವಿಷಯ ತಿಳಿದು ದೂರದ ಊರುಗಳಿಂದ ಬಂದು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.

ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ನಿವಾಸಿಗಳಿಗೆ ಮೂಲ ಸೌಕರ್ಯಗಳ ನಿರಾಕರಣೆ

ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಸೂಪರ್ ಸೀಡ್‌ಗೆ ಡಿಎಸ್‌ಎಸ್ ಆಗ್ರಹ 

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿವಾಸಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡದೆ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡುವ ಮೂಲಕ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಡಿಎಸ್‌ಎಸ್ ಮುಖಂಡರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. 
    ಭದ್ರಾವತಿ : ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿವಾಸಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡದೆ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡುವ ಮೂಲಕ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಡಿಎಸ್‌ಎಸ್ ಮುಖಂಡರು ಆಗ್ರಹಿಸಿದ್ದಾರೆ. 
 ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ  ಭದ್ರಾವತಿ ಹಾಗೂ ಜಿಲ್ಲಾ ಸಂಚಾಲಕ ಚಿನ್ನಯ್ಯರವರು, ಹುಣಸೆಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ೨೦೧೧ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ವಿವಿಧ ಜಾತಿ ಸಮುದಾಯಗಳ ಸುಮಾರು ೩೦ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮೂಲ ಸೌಕರ್ಯಗಳಾದ ವಿದ್ಯುತ್ ದೀಪ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ನಮ್ಮ ಹೋರಾಟದ ಫಲವಾಗಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದರು.  
    ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹೇಳಿರುವಂತೆ "ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಹ ಜೀವಿಸಲು ಅತ್ಯವಶ್ಯಕವಾದ ಕುಡಿಯುವ ನೀರು ಹಾಗೂ ಬೆಳಕು ಅಂದರೆ ವಿದ್ಯುತ್ ದೀಪದ ವ್ಯವಸ್ಥೆ  ಕಲ್ಪಿಸಬೇಕಾಗಿರುವುದು ಆಡಳಿತ ವ್ಯವಸ್ಥೆಯಲ್ಲಿರುವ ನಮ್ಮ ಜವಾಬ್ದಾರಿ" ಎಂಬುದನ್ನು ಅರಿತಿರುವ ಜಿಲ್ಲಾಧಿಕಾರಿಗಳು ತಕ್ಷಣ ನಿವಾಸಿಗಳಿಗೆ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶಿಸಿದರು. ಇದರ ಫಲವಾಗಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯಲು ಬೀದಿ ನಲ್ಲಿ ನೀರಿನ ವ್ಯವಸ್ಥೆ ಹಾಗೂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. 
    ಆದರೆ ಸಂವಿಧಾನದ ಆಶಯದಂತೆ ಜನರು ಬದುಕಲು ಅತ್ಯಂತ ಅವಶ್ಯಕವಾಗಿರುವ ಕುಡಿಯುವ ನೀರು ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲು ನಿರಾಕರಿಸಿರುವ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸದಸ್ಯತ್ವ ರದ್ದುಪಡಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡಬೇಕೆಂದು ಆಗ್ರಹಿಸಿದರು. 
ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಪ್ರಮುಖರಾದ ಸಿ. ಜಯಪ್ಪ, ರಂಗನಾಥ್, ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ಪರಮೇಶ್ವರಪ್ಪ, ಸಂದೀಪ್, ನರಸಿಂಹ, ಮಂಜು, ಸುರೇಶ್, ಶಾಂತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಗಣೇಶ್‌ಗೆ ಸರ್ಕಾರಿ ನೌಕರರಿಂದ ಅಭಿನಂದನೆ

ಕರ್ನಾಟಕ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಬಿ.ಎಸ್ ಗಣೇಶ್‌ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ಕರ್ನಾಟಕ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಬಿ.ಎಸ್ ಗಣೇಶ್‌ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪರವರ ನೇತೃತ್ವದಲ್ಲಿ ಗಣೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಖಚಾಂಚಿ ಪ್ರಶಾಂತ್, ಪ್ರಮುಖರಾದ ಟಿ. ಪೃಥ್ವಿರಾಜ್ ರಂಗನಾಥ್, ರಾಜಕುಮಾರ್, ರಮೇಶ್, ಪ್ರಕಾಶ್, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ. ಮತ್ತು ಶ್ರೀಧರ್ ಗೌಡ, ರಾಜನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಅಭಿವೃದ್ದಿ ಕಾರ್ಯಗಳಿಗೆ ಸದ್ಯದಲ್ಲಿಯೇ ಚಾಲನೆ : ಕದಿರೇಶ್

ಭದ್ರಾವತಿ ಗಾಂಧಿನಗರದ ಗಾಂಧಿ ಉದ್ಯಾನವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಅಧ್ಯಕ್ಷ ಬಿ.ಎಸ್ ಗಣೇಶ್‌ರವರನ್ನು ಸ್ಥಳೀಯ ನಾಗರಿಕರು ಸನ್ಮಾನಿಸಿ ಅಭಿನಂದಿಸಿದರು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ೧೬ನೇ ವಾರ್ಡಿನ ಅಭಿವೃದ್ದಿಗೆ ಸರ್ಕಾರದಿಂದ ಶಾಸಕರು ಕೋಟ್ಯಾಂತರ ರೂ ಅನುದಾನ ಬಿಡುಗಡೆ ಮಾಡಿಸಿಕೊಟ್ಟಿದ್ದು,   ಸದ್ಯದಲ್ಲಿಯೇ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಕಾಮಗಾರಿಗಳ ಆರಂಭಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು  ನಗರಸಭೆ ಹಿರಿಯ ಸದಸ್ಯ ವಿ.ಕದಿರೇಶ್ ಹೇಳಿದರು.
    ಅವರು ಗಾಂಧಿನಗರದ ಗಾಂಧಿ ಉದ್ಯಾನವನದಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಮೃತ್ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಂದ ೧೬ ಮತ್ತು ೧೭ನೇ ವಾರ್ಡ್ ವ್ಯಾಪ್ತಿಯ ೬ ಉದ್ಯಾನವನಗಳ ನಿರ್ವಹಣೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಶಾಸಕರು ಯಾರು ಸಹ ನಿರೀಕ್ಷಿಸಲಾಗದಷ್ಟರಮಟ್ಟಿಗೆ ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ ಎಂದರು. 
    ೫ ಉದ್ಯಾನವನಗಳ ನಿರ್ವಹಣೆಗೆ ೨೦ ಲಕ್ಷ ರು., ರಸ್ತೆ ದೀಪಗಳಿಗೆ ೪೦ ಲಕ್ಷ ರು., ಗಾಂಧಿನಗರದ ಗಣಪತಿ ದೇವಾಲಯದ ಅಭಿವೃದ್ಧಿಗೆ ೨೦ ಲಕ್ಷ ರು., ಸೇಂಟ್ ಜೋಸೆಫ್ ಕಾಲೇಜು ರಸ್ತೆಗೆ ೧೮ ಲಕ್ಷ ರು., ಫುಟ್‌ಪಾತ್ ನಿರ್ಮಾಣಕ್ಕೆ ೩೦ ಲಕ್ಷ ರು. ಕೆರಕೋಡಮ್ಮ ದೇವಾಲಯ ಬಳಿಯ ಕೆರೆ ಅಭಿವೃದ್ದಿಗೆ ೧.೫೦ ಕೋಟಿ ರು., ಕೇಶವಪುರ ಬಡಾವಣೆ ಫುಟ್‌ಪಾತ್ ಟೈಲ್ಸ್ ಹಾಕಲು ೩೦ ಲಕ್ಷ ರು., ಹಿಂದೂ ಮಹಾಸಭಾ ಗಣಪತಿ ದೇವಾಲಯ ಬಳಿಯ ನಾಲ್ಕು ಕನ್ಸರ್‌ವೆನ್ಸಿ ಅಭಿವೃದ್ದಿಗೆ ೧೮ ಲಕ್ಷ ರು., ತಡೆಗೋಡೆಗೆ ೫೦ ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಇದೇ ರೀತಿ ನಗರಸಭೆ ಅಧ್ಯಕ್ಷರು ಕುಡಿಯುವ ನೀರಿನ ಟ್ಯಾಂಕುಗಳ ಅಭಿವೃದ್ದಿಗೆ ೬ ಲಕ್ಷ ರು. ಅನುದಾನ ಬಿಡುಗಡೆ ಮಾಡಿದ್ದಾರೆ ನೀಡಿದ್ದಾರೆಂದರು.
    ನಾಗರೀಕ ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್,  ಜನರ ಸೇವೆ ಮಾಡಲು ನನ್ನನ್ನು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿಗೆ ನೇಮಿಸಿದ್ದಾರೆ. ಕ್ಷೇತ್ರದಲ್ಲಿ ೫೦ ರಿಂದ ೬೦ ಸಾವಿರ ಜನರು ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆಯುತ್ತಿದ್ದಾರೆ. ಕ್ಷೇತ್ರದಲ್ಲಿ ೪ ಬಾರಿ ಶಾಸಕರನ್ನಾಗಿ ನಮ್ಮ ತಂದೆಯವರನ್ನು ಆಯ್ಕೆ ಮಾಡಿದ್ದೀರಿ ಆ ರುಣವನ್ನು ನಾವೆಂದೂ ಮರೆಯದೆ ನಿಮ್ಮ ರುಣವನ್ನು ತೀರಿಸಲು ಹಗಲಿರುಳು ಶ್ರಮಿಸುತ್ತಿದ್ದೇವೆಂದರು.
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಂಧಿನಗರದ ಹಿರಿಯ ನಾಗರೀಕರಾದ ಡಾ: ನರೇಂದ್ರಭಟ್, ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಿ. ಬಸವಂತಪ್ಪ ಮಾತನಾಡಿದರು. 
    ನಗರಸಭೆ ಮಾಜಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪನವರ್, ಪರಿಸರ ಅಭಿಯಂತರ ಪ್ರಭಾಕರ್, ಅಭಿಯಂತರ ಸಂತೋಷ್ ಪಾಟೀಲ್, ಮುಖಂಡರಾದ ಸುರೇಶ್ ವರ್ಮಾ, ನಾಗೇಶ್, ತಿಪ್ಪೇಸ್ವಾಮಿ, ಚಲುವರಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. 
    ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.