ಶನಿವಾರ, ಆಗಸ್ಟ್ 9, 2025

ರಾಯರ ಮಠದಲ್ಲಿ ಉಪಕರ್ಮ, ಆ.೧೨ರಂದು ರಥೋತ್ಸವ

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಶನಿವಾರ ಉಪಕರ್ಮ ಜರುಗಿತು. 
    ಭದ್ರಾವತಿ : ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಶನಿವಾರ ಉಪಕರ್ಮ ಜರುಗಿತು. 
    ಮಠದಲ್ಲಿ ಬೆಳಿಗ್ಗೆ ೬.೩೦ಕ್ಕೆ ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್‌ರವರ ನೇತೃತ್ವದಲ್ಲಿ ಉಪಕರ್ಮ ನಡೆಸಲಾಯಿತು. ಶ್ರೀ ಗುರುರಾಜ ಸೇವಾಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ ಹಾಗು ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ನಿರಂಜನಾಚಾರ್ಯ, ಮಾಧುರಾವ್, ಗಿರಿ ಆಚಾರ್, ಪವನ್ ಕುಮಾರ್ ಉಡುಪ, ಪ್ರಮೋದ್ ಕುಮಾರ್, ಶುಭ ಗುರುರಾಜ್, ವಿದ್ಯಾನಂದನಾಯಕ, ಪ್ರಶಾಂತ್, ಶಶಿಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ೨ ದಿನಗಳ ಕಾಲ ಆರಾಧನಾ ಮಹೋತ್ಸವ : 
    ಆ.೧೧ ಮತ್ತು ೧೨ರಂದು ಎರಡು ದಿನಗಳ ಕಾಲ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ನಡೆಯಲಿದ್ದು, ಈ ಸಂಬಂಧ ವಿವಿಧ ಧಾರ್ಮಿಕ ಆಚರಣೆಗಳು ಜರುಗಲಿವೆ. ಆ.೧೨ರಂದು ಬೆಳಿಗ್ಗೆ ೧೦ ಗಂಟೆಗೆ ರಾಯರ ರಥೋತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ  ಆಗಮಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಮೈಸೂರು ಸಂಸ್ಥಾನ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಗೊಂಡ ದಿನ ಆಚರಣೆ

ಕನ್ನಡ ಧ್ವಜ ಹಿಡಿದು ಕನ್ನಡಾಭಿಮಾನ ಬೆಳೆಸಿಕೊಳ್ಳಲು ಕರೆ 

ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಂಡ ದಿನವನ್ನು ಭದ್ರಾವತಿ ನಗರದಲ್ಲಿ ವಿಶಿಷ್ಟವಾಗಿ ಕನ್ನಡ ಬಾವುಟ ಹಿಡಿದು ಪ್ರತಿಯೊಬ್ಬರ ಮನೆಗಳಲ್ಲಿ ಕನ್ನಡದ ಧ್ವಜ ಹಾರಾಡಲಿ ಎಂಬ ಭಾವನೆಯೊಂದಿಗೆ ಆಚರಿಸಲಾಯಿತು
    ಭದ್ರಾವತಿ : ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಂಡ ದಿನವನ್ನು ನಗರದಲ್ಲಿ ವಿಶಿಷ್ಟವಾಗಿ ಕನ್ನಡ ಬಾವುಟ ಹಿಡಿದು ಪ್ರತಿಯೊಬ್ಬರ ಮನೆಗಳಲ್ಲಿ ಕನ್ನಡದ ಧ್ವಜ ಹಾರಾಡಲಿ ಎಂಬ ಭಾವನೆಯೊಂದಿಗೆ ಆಚರಿಸಲಾಯಿತು
    ಆ.೯, ೧೯೪೭ರಂದು ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಗೊಂಡ ದಿನ. ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್‌ರವರು ಒಕ್ಕೂಟ ವ್ಯವಸ್ಥೆಗೆ ಸಹಿ ಮಾಡಿದ ದಿನ ಇದಾಗಿದ್ದು, ಮಹಾರಾಜರ ತ್ಯಾಗ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಕನ್ನಡ ನಾಡಿನ ಮೇಲೆ ಅಭಿಮಾನ ಬೆಳೆಸಿಕೊಳ್ಳಬೇಕು. ನೆಲ, ಜಲ, ಭಾಷೆ, ಸಂಸ್ಕೃತಿ ಪ್ರೀತಿಸಿ ಗೌರವಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಬೇಕೆಂದು ಮನವಿ ಮಾಡಲಾಯಿತು. 
    ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ತಾಲೂಕು ಅಧ್ಯಕ್ಷ ತೀರ್ಥೇಶ್,. ಡಿಎಸ್‌ಎಸ್ ಮುಖಂಡರಾದ ದಾಸರಕಲ್ಲಳ್ಳಿ ನಾಗರಾಜ್, ವೀರಾಪುರ ಗಣೇಶ್, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಮೊಹಮ್ಮದ್ ಸಲ್ಮಾನ್, ಹಸಿರು ಸೇನೆ ಯುವ ಘಟಕದ ತಾಲೂಕು ಅಧ್ಯಕ್ಷ ಇಮ್ರಾನ್, ಶ್ರೀ ತಿರುಮಲ ಚಾರಿಟಬಲ್ ಫೌಂಡೇಷನ್ ಪ್ರಶಾಂತ್, ಜಾನು, ನಿತಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.