ಮಂಗಳವಾರ, ಆಗಸ್ಟ್ 26, 2025

ನಿವೃತ್ತ ಇಂಜಿನಿಯರ್ ಜೆ. ಚಂದ್ರಶೇಖರಪ್ಪ ನಿಧನ

ಜೆ. ಚಂದ್ರಶೇಖರಪ್ಪ 
    ಭದ್ರಾವತಿ : ನಗರದ ಸೈಲ್-ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಇಂಜಿನಿಯರ್ ಜೆ. ಚಂದ್ರಶೇಖರಪ್ಪ(೮೨) ವಯೋಸಹಜವಾಗಿ ನಿಧನ ಹೊಂದಿದರು.   
    ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಕಾರ್ಖಾನೆಯ ಮೆಟಲರ್ಜಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ನಿವೃತ್ತಿ ಹೊಂದಿದ ನಂತರ ನಗರದ ಚನ್ನಗಿರಿ ರಸ್ತೆಯ ರಂಗಪ್ಪ ವೃತ್ತದಲ್ಲಿ ಕಿರಣ್ ಏಜೆನ್ಸಿಸ್ ಹೆಸರಿನಲ್ಲಿ ವ್ಯಾಪಾರ, ವಹಿವಾಟು ನಡೆಸುತ್ತಿದ್ದರು. .ಉಂಬ್ಳೆಬೈಲ್ ಬೈಲ್ ಸಮೀಪದ ಕಣಗಲಸರ ಗ್ರಾಮದಲ್ಲಿರುವ ಇವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿತು. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಆ.೨೯ರಿಂದ ವೆಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ೪೧ನೇ ವಾರ್ಷಿಕ ಮಹೋತ್ಸವ

ಭದ್ರಾವತಿ ಗಾಂಧಿನಗರದ ವೆಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದ ಧರ್ಮಗುರು ಪಾದರ್ ಸ್ಟೀವನ್ ಡೇಸಾರವರು ಪತ್ರಿಕಾಗೋಷ್ಠಿಯಲ್ಲಿ ೪೧ನೇ ವಾರ್ಷಿಕ ಮಹೋತ್ಸವ ಕುರಿತು ಮಾಹಿತಿ ನೀಡಿದರು. 
    ಭದ್ರಾವತಿ : ಗಾಂಧಿನಗರದ ವೆಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ಆ.೨೯ ರಿಂದ ಸೆ.೮ರವರೆಗೆ ೪೧ನೇ ವಾರ್ಷಿಕ ಮಹೋತ್ಸವ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪುಣ್ಯಕ್ಷೇತ್ರದ ಧರ್ಮಗುರು ಪಾದರ್ ಸ್ಟೀವನ್ ಡೇಸಾ ತಿಳಿಸಿದರು. 
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಕುರಿತು ಮಾಹಿತಿ ನೀಡಿದರು. ಆ.೨೯ರ ಸಂಜೆ ೫.೩೦ಕ್ಕೆ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಫ್ರಾನ್ಸಿಸ್ ಎಸ್.ಜೆ ಸೆರಾವೊರವರು ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿ ವರ್ಷ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. 
    ಈ ಬಾರಿ ಸಹ ಪ್ರತಿದಿನ ವಿವಿಧ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಹಿರಿಯರ ದಿನ, ಧಾರ್ಮಿಕರ ದಿನ, ವ್ಯಾಧಿಷ್ಟರ ದಿನ, ಯುವಜನರ ದಿನ, ವೈದ್ಯ, ದಾದಿಯರ ದಿನ, ಮಕ್ಕಳ ದಿನ, ಶಿಕ್ಷಕರ ದಿನ, ಕುಟುಂಬದ ದಿನ, ಯಾತ್ರಿಕರ ದಿನ ಮತ್ತು ಕೊನೆಯದಾಗಿ ಸರ್ವರ ದಿನ ಹೀಗೆ ಒಂದೊಂದು ದಿನ ಒಂದೊಂದು ಆಚರಣೆಗಳು ನಡೆಯಲಿವೆ. ಪ್ರತಿಯೊಂದು ಆಚರಣೆಯ ಹಿಂದೆ ಒಂದೊಂದು ಮಹತ್ವವಿದೆ. ಒಂದೊಂದು ಧ್ಯೆಯ ವಾಕ್ಯದೊಂದಿಗೆ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದರು.
    ಕಬಳೆ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಧರ್ಮಗುರು ಫಾ. ರೋಮನ್ ಪಿಂಟೋ ಪ್ರಬೋಧಕರಿಂದ ಆ.೩೧ರ ಭಾನುವಾರ ಬೆಳಿಗ್ಗೆ ೮.೩೦ ರಿಂದ ಸಂಜೆ ೭ ಗಂಟೆವರೆಗೆ ಆಧ್ಯಾತ್ಮಿಕ ನವೀಕರಣ ಧ್ಯಾನ ಕೂಟ & ನವೇನ ಮತ್ತು ಬಲಿಪೂಜೆ ನಡೆಯಲಿದೆ. ಸೆ.೭ರ ಭಾನುವಾರ ಸಂಜೆ ೫ ಗಂಟೆಗೆ ಜಪಸರ, ಬಲಿಪೂಜೆ, ಪ್ರಬೋಧನೆ ಮತ್ತು ನವೇನ ಸಂಜೆ ೬.೩೦ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಾತೆಯ ಅಲಂಕೃತ ತೇರಿನ ಭಕ್ತಿಯುತ ಮೆರವಣಿಗೆ ನಡೆಯಲಿದೆ. ಸೆ.೮ರ ಸೋಮವಾರ ಮಾತೆಯ ಮಹೋತ್ಸವ ನಡೆಯಲಿದ್ದು, ಬೆಳಿಗ್ಗೆ ೭ಕ್ಕೆ, ೮.೩೦ಕ್ಕೆ ಮತ್ತು ೧೦ ಗಂಟೆಗೆ ಪೂಜೆಗಳು ಮತ್ತು ೧೧ ಗಂಟೆಗೆ ಸಿರೋ ಮಲಬಾರ್ ವಿಧಿಯಲ್ಲಿ ದಿವ್ಯ ಬಲಿಪೂಜೆ, ಮಧ್ಯಾಹ್ನ ೧೨.೩೦ಕ್ಕೆ ಅನ್ನದಾನ, ಸಂಜೆ ೫.೩೦ಕ್ಕೆ ಮಹೋತ್ಸವದ ಸಾಂಭ್ರಮಿಕ ದಿವ್ಯ ಬಲಿಪೂಜೆ ಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಫ್ರಾನ್ಸಿಸ್ ಎಸ್.ಜೆ ಸೆರಾವೊರವರಿಂದ ನೆರವೇರಲಿದೆ ಎಂದರು. 
    ಪತ್ರಿಕಾಗೋಷ್ಠಿಯಲ್ಲಿ ಪುಣ್ಯಕೇತ್ರದ ಪಾಲನ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಕ್ಯಾಥೋಲಿಕ್ ಅಸೋಯೇಷನ್‌ನ ಅಂತೋಣಿ, ನಿರ್ಮಲ ಆಸ್ಪತ್ರೆ ವ್ಯವಸ್ಥಾಪಕಿ ಸಿಸ್ಟರ್ ವಿಲ್ಮಾ, ಪುಣ್ಯಕೇತ್ರದ ಕಾರ್ಯದರ್ಶಿ ಎಲಿಜಾ ಲಾರೆನ್ಸ್, ಜೆಸ್ಸಿ ಗೋನ್ಸಾಲಿಸ್ ಮತ್ತು ಪೌಲ್ ಡಿಸೋಜಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

ಭದ್ರಾ ಜಲಾಶಯದಲ್ಲಿ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಲ್ಲಿ ನೀರಾವರಿ ಇಲಾಖೆಯಿಂದ ನೂತನವಾಗಿ ಪರಿವೀಕ್ಷಣಾ ಮಂದಿರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು. 
    ಭದ್ರಾವತಿ: ತಾಲೂಕಿನ ಭದ್ರಾ ಜಲಾಶಯದಲ್ಲಿ ನೀರಾವರಿ ಇಲಾಖೆಯಿಂದ ನೂತನವಾಗಿ ಪರಿವೀಕ್ಷಣಾ ಮಂದಿರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು. 
    ಪ್ರತಿ ವರ್ಷ ಜಲಾಶಯಕ್ಕೆ ಸಚಿವರು, ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ರೈತ ಮುಖಂಡರು, ಸರ್ಕಾರದ ಉನ್ನತ ಅಧಿಕಾರಿಗಳು, ಗಣ್ಯರು ಭೇಟಿ ನೀಡಿ ಭದ್ರೆಗೆ ಪೂಜೆ ಸಲ್ಲಿಸುತ್ತಿದ್ದಾರೆ. ಸುಸಜ್ಜಿತವಾದ ಪರಿವೀಕ್ಷಣಾ ಮಂದಿರ ನಿರ್ಮಾಣಗೊಂಡಿರುವುದು ಹೆಚ್ಚು ಅನುಕೂಲವಾಗಿದೆ. 
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ವಿವಿಧ ದೇವಾಲಯಗಳ ಅರ್ಚಕರಿಂದ ಧಾರ್ಮಿಕ ಆಚರಣೆಗಳು ನೆರವೇರಿದವು. 
    ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಪ್ರಮುಖರಾದ ಎಸ್. ಕುಮಾರ್, ಸಿ.ಎಂ ಖಾದರ್, ಮಣಿಶೇಖರ್, ಎಚ್. ರವಿಕುಮಾರ್, ಬಿ.ಕೆ ಜಗನ್ನಾಥ್, ಸೈಯದ್ ರಿಯಾಜ್, ಬಿ.ಎಸ್ ಗಣೇಶ್, ಬಿ.ಎಂ. ರವಿಕುಮಾರ್, ಬಿ.ಎಂ ಮಂಜುನಾಥ್, ಬಸವೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳಾ ಸಂಘಟನೆಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.