ಭದ್ರಾವತಿ ಜನವಸತಿ ಪ್ರದೇಶಗಳಲ್ಲಿಯೇ ಗೋವುಗಳ ಕಳ್ಳತನ ನಡೆಯುತ್ತಿದೆ. ಕಳೆದ ಕೇವಲ ೨೦ ದಿನಗಳಲ್ಲಿ ೯ ಗೋವುಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಹಲವಾರು ವರ್ಷಗಳಿಂದ ಗೋ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಹಿಂದೂ ಜಾಗೃತಿ ವೇದಿಕೆ ಶಿವಮೊಗ್ಗ ಜಿಲ್ಲಾ ಸಂಯೋಜಕ ದೇವರಾಜ್ ಅರಳಿಹಳ್ಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಭದ್ರಾವತಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಕಾನೂನು ಜಾರಿಯಲ್ಲಿದ್ದರೂ ಸಹ ಒಂದೆಡೆ ನಗರದಲ್ಲಿ ಗೋವುಗಳ ಹತ್ಯೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಮತ್ತೊಂದೆಡೆ ಜನವಸತಿ ಪ್ರದೇಶಗಳಲ್ಲಿಯೇ ಗೋವುಗಳ ಕಳ್ಳತನ ನಡೆಯುತ್ತಿದೆ. ಕಳೆದ ಕೇವಲ ೨೦ ದಿನಗಳಲ್ಲಿ ೯ ಗೋವುಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಹಲವಾರು ವರ್ಷಗಳಿಂದ ಗೋ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಹಿಂದೂ ಜಾಗೃತಿ ವೇದಿಕೆ ಶಿವಮೊಗ್ಗ ಜಿಲ್ಲಾ ಸಂಯೋಜಕ ದೇವರಾಜ್ ಅರಳಿಹಳ್ಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೩೧ರ ಜಿಂಕ್ಲೈನ್ನಲ್ಲಿ ಕಳೆದ ೨೦ ದಿನಗಳಲ್ಲಿ ೩ ರೈತ ಕುಟುಂಬಗಳ ೯ ಗೋವುಗಳನ್ನು ಕಳ್ಳತನ ಮಾಡಲಾಗಿದ್ದು, ಇದರಿಂದ ರೈತ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ವಿಶೇಷ ಎಂದರೆ ಗೋವುಗಳು ಮೇಯಲು ಹೋದಾಗ ಕಳ್ಳತನವಾಗುತ್ತವೆ. ಆದರೆ ಇಲ್ಲಿ ಕೊಟ್ಟಿಗೆಯಲ್ಲಿರುವ ಗೋವುಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೂ ಕಳ್ಳರ ಬಗ್ಗೆ ಸುಳಿವಿಲ್ಲ.
ಗೋವುಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿರುವ ರೈತ ಕುಟುಂಬಗಳ ಪರ ಹೋರಾಟಕ್ಕೆ ಮುಂದಾಗಿರುವ ದೇವರಾಜ್ರವರು ಪೊಲೀಸರಿಗೆ ದೂರು ನೀಡಿದ್ದರೂ ಸಹ ಇದುವರೆಗೂ ಕಳ್ಳರನ್ನು ಪತ್ತೆ ಮಾಡದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇಲ್ಲಿನ ನಿವಾಸಿಗಳು ಹಗಲಿರುಳು ಗೋವುಗಳನ್ನು ಕಾಯುವ ಪರಿಸ್ಥಿತಿ ಉಂಟಾಗಿದೆ. ಗೋವುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಹೆಚ್ಚಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದೇವರಾಜ್ ಅರಳಿಹಳ್ಳಿಯವರ ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ಸುಧೀಂದ್ರ ಸಾಗರ. ಫೋಕಸ್ ಮಂಜುನಾಥ್, ರಕ್ಷಿತ್ ಸೇರಿದಂತೆ ಇನ್ನಿತರರು ಗೋವುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.