ಭದ್ರಾವತಿ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಉಪ ಅರಣ್ಯ ಸಂರಕ್ಷಧಿಕಾರಿಗಳ ಕಛೇರಿ ಸಮೀಪದಿಂದ ಬೈಪಾಸ್ ರಸ್ತೆ ಬಿಳಿಕಿ ವೃತ್ತದವರೆಗೆ ಚತುಷ್ಪಥ ರಸ್ತೆ ಸುಮಾರು ೧೪ ಕೋ. ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಸ್ತೆ ಬದಿಯ ನೂರಾರು ವರ್ಷಗಳ ಬೃಹತ್ ಮರಗಳನ್ನು ತೆರವುಗೊಳಿಸಲಾಗುತ್ತಿದೆ.
ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಉಪ ಅರಣ್ಯ ಸಂರಕ್ಷಧಿಕಾರಿಗಳ ಕಛೇರಿ ಸಮೀಪದಿಂದ ಬೈಪಾಸ್ ರಸ್ತೆ ಬಿಳಿಕಿ ವೃತ್ತದವರೆಗೆ ಚತುಷ್ಪಥ ರಸ್ತೆ ಸುಮಾರು ೧೪ ಕೋ. ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಸ್ತೆ ಬದಿಯ ನೂರಾರು ವರ್ಷಗಳ ಬೃಹತ್ ಮರಗಳನ್ನು ತೆರವುಗೊಳಿಸಲಾಗುತ್ತಿದೆ.
ಕಳೆದ ೨ ದಶಕಗಳಿಂದ ನಗರದ ಪ್ರಮುಖ ರಸ್ತೆಗಳನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸಲಾಗುತ್ತಿದೆ. ಈಗಾಗಲೇ ನಗರದ ಹೃದಯ ಭಾಗದ ರಸ್ತೆಗಳು ಹಾಗು ಬೈಪಾಸ್ ರಸ್ತೆ ಅಗಲೀಕರಣಗೊಳಿಸಲಾಗಿದ್ದು, ನೂರಾರು ವರ್ಷಗಳ ರಸ್ತೆ ಬದಿಯ ಬೃಹತ್ ಮರಗಳನ್ನು ತೆರವುಗೊಳಿಸಲಾಗಿದೆ. ಇದೀಗ ಮತ್ತಷ್ಟು ಮರಗಳನ್ನು ತೆರವುಗೊಳಿಸಲಾಗುತ್ತಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಸಮೀಪದ ಕವಲಗುಂದಿ ಸೇತುವೆಯನ್ನು ಸಹ ತೆರವುಗೊಳಿಸಿ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಈ ಎಲ್ಲಾ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ. ರಸ್ತೆ ಅಗಲೀಕರಣದಿಂದ ಭವಿಷ್ಯದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮುಂದಿನ ಸುಮಾರು ೨೫ ವರ್ಷಗಳ ಕಾಲದ ಯೋಜನೆ ರೂಪಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಸಿದ್ದಾರೆ