ಶುಕ್ರವಾರ, ಅಕ್ಟೋಬರ್ 3, 2025

ಅ.4ರಂದು ವಿದ್ಯುತ್ ವ್ಯತ್ಯಯ



    ಭದ್ರಾವತಿ : ಶಿವಮೊಗ್ಗ 220 ಕೆವಿ ಎಮ್.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾರ್ಗ ಮುಕ್ತತೆ ಪಡೆಯಲು ನಗರದ ಜೆ.ಪಿ.ಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿ 110/11 ಕೆವಿ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಅ.4ರ ಶನಿವಾರ ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ ಕೇಂದ್ರ ವ್ಯಾಪ್ತಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್.ಟಿ.ಬಿ ಬಡಾವಣೆ, ಸರ್.ಎಂ.ವಿ ಬಡಾವಣಿ, ಹಳೇಸಿದ್ದಾಪುರ, ಹೊಸೂರು, ತಾಂಡ, ಸಂಕ್ಲೀಪುರ, ಹುತ್ತಾ ಕಾಲೋನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮೀಸಾಗರ(ರಬ್ಬರ್ ಕಾಡು), ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣಿ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ. ಅರಳಿಕೊಪ್ಪ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಹೇಡಿಕಟ್ಟೆ, ಹಳೆಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟಿ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು. ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ ಮತ್ತು ಹಾತಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಚಾಮುಂಡೇಶ್ವರಿ ದೇವಿ ಮನುಷ್ಯರ ಕೆಟ್ಟ ಗುಣಗಳನ್ನು ದೂರ ಮಾಡಿ ವಿಜಯ ಸಾಧಿಸುವ ಶಕ್ತಿ ನೀಡಲಿ : ಬಿ.ಕೆ ಸಂಗಮೇಶ್ವರ್

ನಾಡಹಬ್ಬ ದಸರಾ ಆಚರಣೆ : ಬನ್ನಿ ಮುಡಿದ ದಂಡಾಧಿಕಾರಿ ಪರಸಪ್ಪ ಕುರುಬರ

ಭದ್ರಾವತಿ ನಗರಸಭೆಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆ ಅಂತಿಮ ದಿನದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ಬನ್ನಿ ಮುಡಿಯುವ ಮೂಲಕ ಆಚರಣೆಗೆ ತೆರೆ ಎಳೆದರು. 
    ಭದ್ರಾವತಿ : ಮನುಷ್ಯರಲ್ಲಿನ ಕೆಟ್ಟ ಗುಣಗಳನ್ನು ದೂರ ಮಾಡಿ, ಪ್ರತಿಯೊಂದರಲ್ಲೂ ವಿಜಯ ಸಾಧಿಸುವ ಶಕ್ತಿ ಚಾಮುಂಡೇಶ್ವರಿ ತಾಯಿ ಪ್ರತಿಯೊಬ್ಬರಿಗೂ ಕರುಣಿಸಲಿ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ನಗರಸಭೆಯಿಂದ ನಾಡಹಬ್ಬ ದಸರಾ ಆಚರಣೆ ಅಂತಿಮ ದಿನದ ಬನ್ನಿ ಮುಡಿಯುವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಚಾಮುಂಡೇಶ್ವರಿ ತಾಯಿ ರಾಕ್ಷಸರನ್ನು ಸಂಹರಿಸಿದಂತೆ ಮನುಷ್ಯರಲ್ಲಿನ ಕ್ರೋಧ, ಆಶಾಂತಿ ಗುಣಗಳನ್ನು, ಧರ್ಮಾಂಧತೆಯನ್ನು ದೂರ ಮಾಡಿ ಪ್ರತಿಯೊಬ್ಬರು ಸೌಹಾರ್ದತೆಯಿಂದ, ಸಹೋದರತೆಯಿಂದ ಬದುಕುವಂತಾಗಲಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗಳು ನಡೆಯಲಿವೆ. ನಾಡಹಬ್ಬ ಯಶಸ್ವಿಗೊಳ್ಳಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. 
    ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ರಂಗನಾಥ ಶರ್ಮಾ ಮತ್ತು ಸಹಾಯಕ ಅರ್ಚಕ ಶ್ರೀನಿವಾಸ್ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ಪರುಸಪ್ಪ ಕುರುಬರ ಅವರನ್ನು ಸಂಪ್ರದಾಯ ಬದ್ಧವಾಗಿ ಬನ್ನಿ ಮುಡಿಯುವ ಕಾರ್ಯಕ್ಕೆ ಆಹ್ವಾನಿಸಿತು. 
    ಬನ್ನಿ ಮಂಟಪಕ್ಕೆ ಆಗಮಿಸಿದ ತಹಸೀಲ್ದಾರ್ ಪರುಸಪ್ಪ ಕುರುಬರರವರು ಅರ್ಚಕ ನೇತೃತ್ವದ ತಂಡದೊಂದಿಗೆ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಅಂತಿಮವಾಗಿ ಬನ್ನಿ ಮುಡಿದರು. ನಂತರ ಸಿಡಿಮದ್ದು ಪ್ರದರ್ಶನದೊಂದಿಗೆ ರಾವಣ ಸಂಹಾರ ನಡೆಸಲಾಯಿತು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್,  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಚುನಾಯಿತ ಹಾಗು ನಾಮನಿರ್ದೇಶಿತ ನಗರಸಭೆ ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ವಿವಿಧ ದೇವಸ್ಥಾನಗಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಗಣ್ಯರು ಸೇರಿದಂತೆ ಸ್ಥಳೀಯರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.  ನಗರದ ವಿವಿಧೆಡೆಗಳಿಂದ ನಿವಾಸಿಗಳು ಆಗಮಿಸಿ ಬನ್ನಿ ಮುಡಿಯುವ ಕಾರ್ಯಕ್ರಮ ವೀಕ್ಷಿಸಿ ಕಣ್ತುಂಬಿಕೊಂಡರು.