ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ರಂಗಪ್ಪ ವೃತ್ತದಲ್ಲಿ ನಿರ್ಮಿಸಲಾಗಿರುವ ಮಹಾದ್ವಾರದ ಮೇಲ್ಭಾಗದಲ್ಲಿ ಗಣಪತಿ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ೫ ಲಕ್ಷ ರು. ಅನುದಾನ ನೀಡಿದ್ದಾರೆ.
ಭದ್ರಾವತಿ: ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ರಂಗಪ್ಪ ವೃತ್ತದಲ್ಲಿ ನಿರ್ಮಿಸಲಾಗಿರುವ ಮಹಾದ್ವಾರದ ಮೇಲ್ಭಾಗದಲ್ಲಿ ಗಣಪತಿ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ೫ ಲಕ್ಷ ರು. ಅನುದಾನ ನೀಡಿದ್ದಾರೆ.
ಶಾಸಕರ ಗೃಹ ಕಚೇರಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಹಾಗೂ ನಗರಸಭೆ ಹಿರಿಯ ಸದಸ್ಯ ವಿ. ಕದೀರೇಶ್ ಮತ್ತು ಮಹಾಸಭಾ ಪದಾಧಿಕಾರಿಗಳಿಗೆ ಶಾಸಕರು ೫ ಲಕ್ಷ ರು. ಚೆಕ್ ವಿತರಿಸಿದರು.
ಚೆಕ್ ಸ್ವೀಕರಿಸಿದ ವಿ.ಕದೀರೇಶ್ ಮತ್ತು ಪದಾಧಿಕಾರಿಗಳು ಸಂಗಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ. ಎಸ್ ಗಣೇಶ್, ನಗರಸಭೆ ಸದಸ್ಯ ಚನ್ನಪ್ಪ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್ ಎಲ್ ಷಡಾಕ್ಷರಿ, ನಗರ ಓಬಿಸಿ ಅಧ್ಯಕ್ಷ ಬಿ. ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
.jpg)