ಭದ್ರಾವತಿಯಲ್ಲಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಜನ್ನಾಪುರ ಸಚ್ಚಿದಾನಂದ ಗುರುರಾಜ ನ್ಯಾಯಬೆಲೆ ಅಂಗಡಿಗೆ ಭೇಟ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಭದ್ರಾವತಿ: ತಾಲೂಕಿನ ನಗರ ಪ್ರದೇಶದ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾಗಿ ಪಡಿತರ ವಿತರಣೆ ಮಾಡದೆ ಸರ್ಕಾರದ ಆದೇಶದಂತೆ ಕಾರ್ಯನಿರ್ವಹಿಸದೆ ನಿರ್ಲಕ್ಷ್ಯತನದಿಂದ ವರ್ತಿಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಆರೋಪಿಸಿದ್ದಾರೆ.
ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಸಚ್ಚಿದಾನಂದ ಗುರುರಾಜ ನ್ಯಾಯಬೆಲೆ ಅಂಗಡಿಗೆ ಭೇಟ ನೀಡಿ ಪರಿಶೀಲನೆ ನಡೆಸಲಾಯಿತು. ಆಹಾರ ಖಾತೆ ಸಚಿವ ಕೆ.ಎಚ್ ಮುನಿಯಪ್ಪರವರು ರಾಜ್ಯದಲ್ಲಿ ಒನ್ ನೇಷನ್, ಒನ್ ಕಾರ್ಡ್ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. ಇದರ ಪ್ರಕಾರ ದೇಶದ ಯಾವುದೇ ಮೂಲೆಯಲ್ಲಿ ವಾಸಿಸುತ್ತಿದ್ದರೂ ಸಹ ಅವರಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಿಸಬೇಕೆಂಬುದಾಗಿದೆ. ಆದರೆ ಇಲ್ಲಿನ ನ್ಯಾಯಬೆಲೆ ಅಂಗಡಿಗಳು ಆ ರೀತಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದರು.
ಸರಿಯಾಗಿ ಪಡಿತರ ವಿತರಣೆ ಮಾಡದೆ ಸರ್ಕಾದ ಆದೇಶದಂತೆ ಕಾರ್ಯನಿರ್ವಹಿಸದ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.