ಭದ್ರಾವತಿ ತಾಲೂಕಿನ ಅತಿದೊಡ್ಡ ಪಂಚಾಯಿತಿ ಸಿಂಗನಮನೆ ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಸದಸ್ಯ ಮಂಜುನಾಥ್ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮಂಗಳವಾರದಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದು, ಆದರೆ ಇದುವರೆಗೂ ಯಾರು ಸಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ.
ಭದ್ರಾವತಿ : ತಾಲೂಕಿನ ಅತಿದೊಡ್ಡ ಪಂಚಾಯಿತಿ ಸಿಂಗನಮನೆ ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಸದಸ್ಯ ಮಂಜುನಾಥ್ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮಂಗಳವಾರದಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದು, ಆದರೆ ಇದುವರೆಗೂ ಯಾರು ಸಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಾಗ ಹಾಗು ಬಡಾವಣೆಗಳಲ್ಲಿ ಸಿಎ ನಿವೇಶಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಬೀದಿ ದೀಪಗಳ ಖರೀದಿಯಲ್ಲಿ ಹಾಗು ಕುಡಿಯುವ ನೀರಿನ ಕೊಳವೆಗಳ ದುರಸ್ತಿ ಕಾರ್ಯದಲ್ಲಿ ಅಕ್ರಮವೆಸಗಲಾಗಿದೆ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಾಗು ೧೫ನೇ ಹಣಕಾಸು ವಾರ್ಷಿಕ ಲೆಕ್ಕ ಪರಿಶೋಧನೆಯಲ್ಲಿ ಅಕ್ರಮವೆಸಗಿದ್ದಾರೆಂದು ಆರೋಪಿಸಿದ್ದಾರೆ.
ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಗ್ರಾಮದಲ್ಲಿ ಕೆಲವು ದಿನಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ. ಪಂಚಾಯಿತಿ ಅಧ್ಯಕ್ಷೆ ಮಂಜುಳಾರವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ವಾರ್ಡ್ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಿಗೆ ಸರಿಯಾಗಿ ಬಿಲ್ ಪಾವತಿಸಿಲ್ಲ. ಅಲ್ಲದೆ ಹೊಸದಾಗಿ ಯಾವುದೇ ಕಾಮಗಾರಿಗಳನ್ನು ಹಾಗು ಕಾರ್ಯಕ್ರಮಗಳನ್ನು ನಡೆಸುತ್ತಿಲ್ಲ ಎಂದು ದೂರಿದ್ದಾರೆ.
ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗದಕಾರಣ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥ್ ಅಳಲು ತೋರ್ಪಡಿಸಿಕೊಂಡಿದ್ದಾರೆ.

.jpg)