ನಿವೃತ್ತಿ ಹೊಂದಿ ತವರಿಗೆ ಮರಳಿದ ಯೋಧ ಟಿ.ಪಿ ವಿಶ್ವನಾಥ್‌ರಿಗೆ ಅದ್ದೂರಿ ಸ್ವಾಗತ : ಮುಖಂಡರು, ಗ್ರಾಮಸ್ಥರಿಂದ ಸನ್ಮಾನ

ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ಭದ್ರಾವತಿ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸುವ ಮೂಲಕ ಗೌರವಿಸಲಾಯಿತು. 
    ಭದ್ರಾವತಿ : ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿದರು. 
    ಗಂಗೂರಿನ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಟಿ.ಪಿ ವಿಶ್ವನಾಥ್‌ರವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಗೌರವಿಸಲಾಯಿತು. 
    ರವಿ, ಮಂಜಣ್ಣ, ಶ್ರೀನಿವಾಸ್, ಪರಮೇಶ್ವರಪ್ಪ, ರಾಮಮೂರ್ತಿ, ಜಗದೀಶ್, ಬಾಬುರಾವ್, ರಾಮ, ಸಿದ್ದರಾಮಪ್ಪ, ಗಣೇಶ್, ಸತೀಶ್ ಹಾಗು ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ರೈಲ್ವೆ ಇಲಾಖೆ ನೌಕರ ವರ್ಗದವರು ಉಪಸ್ಥಿತರಿದ್ದರು.