ಪೋಸ್ಟ್‌ಗಳು

ಭದ್ರಾ ಎಡ-ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಿ ರೈತರ ಹಿತ ಕಾಪಾಡಿ

ಇಮೇಜ್
ಅಧೀಕ್ಷಕ ಅಭಿಯಂತರರಿಗೆ ಬಿಜೆಪಿ ಆಗ್ರಹಿಸಿ ಮನವಿ  ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ತಕ್ಷಣ ನೀರು ಹರಿಸಿ ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ನೀರಾವರಿ ಇಲಾಖೆ ಅಧಿಕ್ಷಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ : ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ತಕ್ಷಣ ನೀರು ಹರಿಸಿ ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಆಗ್ರಹಿಸಿ ಬುಧವಾರ ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ನೀರಾವರಿ ಇಲಾಖೆ ಅಧಿಕ್ಷಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.       ತಾಲೂಕಿನ ಬಿಆರ್‌ಪಿ ಅಧೀಕ್ಷಕ ಅಭಿಯಂತರರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಸಮಯದಲ್ಲಿ ನೀರು ಲಭ್ಯವಾಗದಿದ್ದಲ್ಲಿ ಬೆಳೆಗಳು ನಾಶವಾಗಲಿವೆ. ಈ ಹಿನ್ನಲೆಯಲ್ಲಿ ತಕ್ಷಣ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಬೇಕು. ಇದರ ಜೊತೆಗೆ ಭದ್ರಾ ಜಲಾಶಯದಿಂದ ಸೋರಿಕೆಯಾಗುತ್ತಿರುವ ನೀರು ವ್ಯಕ್ತವಾಗಿ ಭದ್ರಾ ನದಿಗೆ ಸೇರುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸೋರಿಕೆಯಾಗುತ್ತಿರುವ ನೀರು ನಾಲೆಗಳಿಗೆ ಸೇರುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಲಾಯಿತು.   ...

ಆರೋಗ್ಯ ಮೇರಿ ನಿಧನ

ಇಮೇಜ್
ಆರೋಗ್ಯ ಮೇರಿ       ಭದ್ರಾವತಿ : ನಗರಸಭೆ ವ್ಯಾಪ್ತಿಯ ಹೊಸಮನೆ ವಿಜಯನಗರದ ಕ್ರೈಸ್ತ ಸಮುದಾಯದ ನಿವಾಸಿ ಆರೋಗ್ಯ ಮೇರಿ(೭೯) ಮಂಗಳವಾರ ನಿಧನ ಹೊಂದಿದರು.       ಇವರಿಗೆ ಪುತ್ರ ಹಾಗು ಪುತ್ರಿ ಇದ್ದಾರೆ. ಬುಧವಾರ ಹಳೇನಗರ ಜಟ್‌ಪಟ್ ನಗರದಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಇವರ ನಿಧನಕ್ಕೆ ನಗರದ ಕ್ರೈಸ್ತ ಮುಖಂಡರು ಸಂತಾಪ ಸೂಚಿಸಿದ್ದಾರೆ. 

ರಜೀನಾ ಥಾಮಸ್ ನಿಧನ

ಇಮೇಜ್
ರಜೀನಾ ಥಾಮಸ್       ಭದ್ರಾವತಿ : ನಗರಸಭೆ ವ್ಯಾಪ್ತಿಯ ನ್ಯೂಟೌನ್ ಕ್ರೈಸ್ತ ಸಮುದಾಯದ ನಿವಾಸಿ ರಜೀನಾ ಥಾಮಸ್(೭೧) ಮಂಗಳವಾರ ನಿಧನ ಹೊಂದಿದರು .         ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ನ್ಯೂಟೌನ್ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ನೆರವೇರುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಇಮೇಜ್
ಭದ್ರಾವತಿ ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಇದರ ಅಂಗವಾಗಿ ಭಕ್ತರಿಗೆ ಕಲ್ಪಿಸಲಾಗಿದ್ದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಭಕ್ತರ ಕಣ್ಮನ ಸೆಳೆಯಿತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು.      ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.  ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥನ ವಿಶೇಷ ದರ್ಶನ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆಯಿಂದಲೇ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆದರು. ಸಂಜೆ ೬.೩೦ರಿಂದ ಸರಸ್ವತಿ ಕಲಾ ಸಂಗೀತ ಮತ್ತು ನೃತ್ಯ ಶಾಲೆ ವತಿಯಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಭದ್ರಾವತಿ ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿ...

ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠನಾಥನ ದರ್ಶನ

ಇಮೇಜ್
ನಗರದ ಪ್ರಮುಖ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತ ಭಕ್ತರು  ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ವಂಕೀಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಭಕ್ತರಿಗೆ ಕಲ್ಪಿಸಲಾಗಿರುವ ವೈಕುಂಠನಾಥನ ದರ್ಶನ ಕಣ್ಮನ ಸೆಳೆಯಿತು.       ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು.       ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ವಂಕೀಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ ೪.೩೦ಕ್ಕೆ ಪ್ರಾಕಾರ ಉತ್ಸವ, ಪರಮಪದ ಮಹಾದ್ವಾರದ ಪೂಜೆ, ಶ್ರೀ ವೈಕುಂಠನಾಥನ ದರ್ಶನ ನಂತರ ಶ್ರೀ ಗೋದಾದೇವಿ ಅಮ್ಮನವರ ಉತ್ಸವದೊಂದಿಗೆ ವಿವಿಧ ಭಜನಾ ಮಂಡಳಿಯವರಿಂದ ನಗರ ಸಂಕೀರ್ತನೆ ಹಾಗು ಶ್ರೀ ಕೃಷ್ಣ ಗೆಳೆಯರ ಬಳಗದಿಂದ ಚಂಡೇವಾದ್ಯ ನಡೆಯಿತು.       ಮಧ್ಯಾಹ್ನ ಸುಡು ಬಿಸಿಲಿನಲ್ಲೂ ಭಕ್ತರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿದ್ದು, ಮತ್ತೊಂ...

ಹಿರಿಯೂರಿನಲ್ಲಿ ತೋಟಕ್ಕೆ ನುಗ್ಗಿ ನಾಯಿ ಕೊಂದ ಚಿರತೆ : ಸಿ.ಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಇಮೇಜ್
ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಕಳೆದ ೨ ದಿನಗಳ ಹಿಂದೆ ಚಿರತೆಯೊಂದು ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದು ತಿಂದು ಹೋಗಿರುವ ಘಟನೆ ನಡೆದಿದೆ. ಈ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.       ಭದ್ರಾವತಿ : ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಕಳೆದ ೨ ದಿನಗಳ ಹಿಂದೆ ಚಿರತೆಯೊಂದು ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದು ತಿಂದು ಹೋಗಿರುವ ಘಟನೆ ನಡೆದಿದೆ.       ಪತ್ರಕರ್ತ ಸುರೇಶ್‌ರವರ ತೋಟದಲ್ಲಿ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ತೋಟದಲ್ಲಿದ್ದ ನಾಯಿಯನ್ನು ಕೊಂದು ತಿಂದಿದೆ. ಕೆಲ ಸಮಯ ಅಲ್ಲಿಯೇ ಇದ್ದು ಪುನಃ ಬಂದ ಮಾರ್ಗದಲ್ಲಿಯೇ ಹಿಂದಿರುಗಿದೆ. ಈ ದೃಶ್ಯ ತೋಟದಲ್ಲಿ ಅಳವಡಿಸಲಾಗಿರುವ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.       ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಸುರೇಶ್‌ರವರು ತೋಟದಲ್ಲಿ ನಾಯಿಗಳು ತಿರುಗಾಡಲು ಒಂದೇ ಒಂದು ಜಾಗ ಬಿಟ್ಟಿದ್ದು, ಆ ಜಾಗದ ಮೂಲಕವೇ ಚಿರತೆ ಬಂದಿದೆ. ನಾವು ಸಾಕಿರುವ ನಾಯಿಯನ್ನು ತಿಂದು ಪುನಃ ಹಿಂದಿರುಗಿದೆ. ಈ ಭಾಗದಲ್ಲಿ ರೈತರು ಹಗಲು ಮತ್ತು ಇರುಳಿನ ವೇಳೆಯಲ್ಲಿ ತಮ್ಮ ತೋಟಗಳಿಗೆ ತೆರಳುತ್ತಾರೆ. ಅಲ್ಲದೆ ರೈತರು ಜಾನುವಾರುಗಳನ್ನು ಮೇಯಲು ಬಿಡುತ್ತಾರೆ. ಈ ಭಾಗದಲ್ಲಿ ಎಚ್ಚರವಹಿಸುವುದು ಅಗತ್ಯವಾಗಿದೆ. ಈ ಕುರಿತು ಅರಣ್ಯ ಇಲಾಖೆ ಗಮನ ಹರಿಸಬೇಕಿದೆ. ಅರಣ್ಯ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯಲು ಮನವ...

ಬಿ.ಜೆ ರಾಮಲಿಂಗಯ್ಯ ೪ನೇ ಬಾರಿಗೆ ಆಯ್ಕೆ : ಬಿಜೆಪಿ ಮುಖಂಡರಿಂದ ಅಭಿನಂದನೆ

ಇಮೇಜ್
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಬಿ.ಜೆ ರಾಮಲಿಂಗಯ್ಯ ೪ನೇ ಬಾರಿಗೆ ಪುನಃ ಆಯ್ಕೆಯಾಗಿದ್ದಾರೆ. ಇವರನ್ನು ಜಿಲ್ಲಾ ಬಿಜೆಪಿ ಮುಖಂಡ ಎಂ. ಮಂಜುನಾಥ್, ಒಬಿಸಿ ಅಧ್ಯಕ್ಷ ಎಸ್. ರಾಜಶೇಖರ್ ಉಪ್ಪಾರ ಹಾಗೂ ನಗರ ಪ್ರಧಾನ ಕಾರ್ಯದರ್ಶಿ ರಘುರಾವ್ ಅಭಿನಂದಿಸಿದರು.       ಭದ್ರಾವತಿ : ನಗರದ ನ್ಯೂಟೌನ್ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಬಿ.ಜೆ ರಾಮಲಿಂಗಯ್ಯ ಹೆಚ್ಚಿನ ಮತಗಳನ್ನು ಪಡೆದು ಗೆಲುವು ಸಾಧಿಸುವ ಮೂಲಕ ೪ನೇ ಬಾರಿಗೆ ಪುನಃ ಆಯ್ಕೆಯಾಗಿದ್ದಾರೆ.       ರಾಮಲಿಂಗಯ್ಯರವರು ಈಗಾಗಲೇ ೧ ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಒಟ್ಟು ೧೫ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಫಲಿತಾಂಶ ಸಹ ಪ್ರಕಟಗೊಂಡಿದೆ. ನೂತನ ನಿರ್ದೇಶಕರ ಮಂಡಳಿ ರಚನೆಯಾಗಬೇಕಿದೆ.       ರಾಮಲಿಂಗಯ್ಯರವರನ್ನು ಜಿಲ್ಲಾ ಬಿಜೆಪಿ ಮುಖಂಡ ಎಂ. ಮಂಜುನಾಥ್, ಒಬಿಸಿ ಅಧ್ಯಕ್ಷ ಎಸ್. ರಾಜಶೇಖರ್ ಉಪ್ಪಾರ ಹಾಗೂ ನಗರ ಪ್ರಧಾನ ಕಾರ್ಯದರ್ಶಿ ರಘುರಾವ್ ಅಭಿನಂದಿಸಿದರು. 

ಡಿ.೩೦ರಂದು ಶಾಲಾ-ಕಾಲೇಜು ವಾರ್ಷಿಕೋತ್ಸವ

ಇಮೇಜ್
     ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ(ಎಸ್‌ಎವಿ) ಶಾಲಾ-ಕಾಲೇಜು ವಾರ್ಷಿಕೋತ್ಸವ ಡಿ.೩೦ರ ಮಂಗಳವಾರ ಸಂಜೆ ೫ ಗಂಟೆಗೆ ಎಸ್‌ಎವಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.       ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಉಪಸ್ಥಿತರಿರುವರು.       ಚಲನಚಿತ್ರ ನಟ, ನಿರ್ದೇಶಕ ಮಂಡ್ಯ ರಮೇಶ್ ಮುಖ್ ಅತಿಥಿಗಳಾಗಿ ಆಗಮಿಸಲಿದ್ದು, ವೇದಿಕೆ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವಿದ್ಯಾರ್ಥಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾಲಾ-ಕಾಲೇಜು ವಾರ್ಷಿಕೋತ್ಸವ ಯಶಸ್ವಿಗೊಳಿಸುವಂತೆ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕೋರಿದೆ. 

ನಿವೃತ್ತ ಶಿಕ್ಷಕ, ಜ್ಯೋತಿಷಿ ಸತ್ಯನಾರಾಯಣ ಭಟ್ ನಿಧನ

ಇಮೇಜ್
ಸತ್ಯನಾರಾಯಣ ಭಟ್       ಭದ್ರಾವತಿ : ನಗರದ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ನಿವೃತ್ತ ಗಣಿತ ಶಿಕ್ಷಕ, ಜ್ಯೋತಿಷಿ ಸತ್ಯನಾರಾಯಣ ಭಟ್(೬೪) ಸೋಮವಾರ ನಿಧನ ಹೊಂದಿದರು.       ಪತ್ನಿ, ಪುತ್ರ ಇದ್ದಾರೆ. ಮಕ್ಕಳಿಗೆ ಗಣಿತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಆಧ್ಯಾತ್ಮಿಕ ಮೌಲ್ಯಗಳನ್ನು ಸಹ ತಿಳಿಸಿಕೊಡುತ್ತಿದ್ದರು. ಹಲವು ವರ್ಷಗಳವರೆಗೆ ಶಿಕ್ಷಕರಾಗಿ, ನಂತರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಅಪಾರ ಶಿಷ್ಯವೃಂದ ಹೊಂದಿದ್ದರು. ವೃತ್ತಿ ಬದುಕಿನ ಜೊತೆಗೆ ಜ್ಯೋತಿಷಿಯಾಗಿ ಸಹ ಗುರುತಿಸಿಕೊಂಡಿದ್ದರು.       ಇವರ ನಿಧನಕ್ಕೆ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದ ಮತ್ತು ಶಿಷ್ಯವೃಂದ ಹಾಗು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.

ಜಾನಪದ ಕಲಾವಿದ ಜಿ. ದಿವಾಕರ್‌ಗೆ `ಶ್ರೀ ಕರ್ನಾಟಕ ಕಲಾ ಸೇವಾ ರತ್ನ'

ಇಮೇಜ್
ಜಿ. ದಿವಾಕರ     ಭದ್ರಾವತಿ : ಬೆಂಗಳೂರಿನ ಅಖಿಲ ಕರ್ನಾಟಕ ಅಂಗವಿಕಲರ ಸೇವಾ ಟ್ರಸ್ಟ್ ವತಿಯಿಂದ ೨೦೨೬ನೇ ಹೊಸ ವರ್ಷದ ಅಂಗವಾಗಿ ನಗರದ ಜಾನಪದ ಕಲಾವಿದ ಜಿ. ದಿವಾಕರ ಅವರಿಗೆ ಶ್ರೀ ಕರ್ನಾಟಕ ಕಲಾ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.     ನೂತನ ವರ್ಷದ ಸಂಭ್ರಮ ಸಡಗರದೊಂದಿಗೆ ಜ.೧ರಂದು ಬೆಂಗಳೂರು, ನಾಗರಭಾವಿ, ಮಲ್ಲತ್ತಹಳ್ಳಿ ಕಲಾ ಗ್ರಾಮದಲ್ಲಿ ಮಧ್ಯಾಹ್ನ ೨.೩೦ ರಿಂದ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಪ್ರಶಸ್ತಿ ಪುರಸ್ಕಾರ ನಡೆಯಲಿದ್ದು, ಸುಮಾರು ೩೦೦ ಅಂಗವಿಕಲರಿಗೆ ಆಹಾರ ಪದಾರ್ಥ ಕಿಟ್‌ಗಳ ವಿತರಣೆ ನಡೆಯಲಿದೆ.      ದಿವಾಕರ ಅವರಿಗೆ ಶ್ರೀ ಕರ್ನಾಟಕ ಕಲಾ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ. ಈ ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಚಲನಚಿತ್ರ ಕಲಾವಿದರು ಹಾಗು ಸಮಾಜ ಸೇವಕರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಟ್ರಸ್ಟ್ ಸಂಸ್ಥಾಪಕ ಹಾಗು ಕಾರ್ಯಕ್ರಮ ಆಯೋಜಕ ಡಾ. ಎಸ್. ಪ್ರಸಾದ್ ಕಾರ್ಯಕ್ರಮದ ನೇತೃತ್ವವಹಿಸಲಿದ್ದಾರೆ.        ದಿವಾಕರ ಅವರು ಹಲವಾರು ವರ್ಷಗಳಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ನಗರದ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ನಡುವೆ ಜಾನಪದ ಕಲೆಯಲ್ಲಿ ತೊಡಗಿಸಿಕೊಂಡು ಹಲವಾರು ವೇದಿಕೆಗಳಲ್ಲಿ ತಮ್ಮ ಪ...

ಸೌಲಭ್ಯ ಸದ್ಬಳಕೆ ಮಾಡಿಕೊಂಡು ಕಲಿಕೆಯಲ್ಲಿ ಪ್ರಗತಿ ಸಾಧಿಸಿ : ಬಿ.ಕೆ ಸಂಗಮೇಶ್ವರ್

ಇಮೇಜ್
ಭದ್ರಾವತಿ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ "ವಾರ್ಷಿಕ ಪರ್ವ 2025-26" ಶಾಲಾ ವಾರ್ಷಿಕೋತ್ಸವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.      ಭದ್ರಾವತಿ : ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಕಲಿಕೆಯಲ್ಲಿ ಪ್ರಗತಿ ಸಾಧಿಸಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.       ಅವರು ನಗರದ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ "ವಾರ್ಷಿಕ ಪರ್ವ 2025-26" ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.       2024-25 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇಕಡ ನೂರರಷ್ಟು ಫಲಿತಾಂಶ ಲಭಿಸಿರುವುದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಮತ್ತು ಶಾಲಾಭಿವೃದ್ಧಿ ಸಮಿತಿಯವರ ಶ್ರಮ ಹೆಚ್ಚಿನದ್ದಾಗಿದೆ. ಅಲ್ಲದೆ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಪ್ರಶಂ...

ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಚುನಾವಣೆ : ೯೮೭ ಮತ ಚಲಾವಣೆ

ಇಮೇಜ್
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ೫ ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗೆ ಭಾನುವಾರ ಸಿಲ್ವರ್ ಜ್ಯೂಬಿಲಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಚುನಾವಣೆ ನಡೆಯಿತು.       ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ೫ ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗೆ ಭಾನುವಾರ ಸಿಲ್ವರ್ ಜ್ಯೂಬಿಲಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಚುನಾವಣೆ ನಡೆಯಿತು.       ೧೫ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಟ್ಟು ೩೨ ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಪೈಕಿ ತಲಾ ೧೫ ಮಂದಿ ಅಭ್ಯರ್ಥಿಗಳು ತಂಡಗಳಾಗಿ ರಚಿಸಿಕೊಂಡು ಹಾಗು ಉಳಿದ ಇಬ್ಬರು ಅಭ್ಯರ್ಥಿಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದರು.        ಬೆಳಿಗ್ಗೆ ೧೦ ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಮತ ಕೇಂದ್ರದ ಸಮೀಪ ನಿವೃತ್ತ ಕಾರ್ಮಿಕರು ಗುಂಪು ಗುಂಪುಗಳಾಗಿ ಜಮಾಯಿಸಿ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿ, ಮತ ಹಾಕುವಂತೆ ಕೋರಿದರು. ಯಾವುದೇ ಚುನಾವಣೆಗೂ ಕಮ್ಮಿ ಇಲ್ಲದಂತೆ ಚುನಾವಣೆ ನಡೆದಿದ್ದು, ಸಂಜೆ ೪ ಗಂಟೆಗೆ ಮತದಾನ ಅಂತ್ಯಗೊಂಡಿತು. ಒಟ್ಟು ೨೯೦೯ ಮತದಾರರ ಪೈಕಿ ೯೮೭ ಮತ...

ಡಾ. ಮಧುಕರ್‌ಶೆಟ್ಟಿ ೭ನೇ ವರ್ಷದ ಪುಣ್ಯಸ್ಮರಣೆ : ರಕ್ತದಾನ ಶಿಬಿರ

ಇಮೇಜ್
ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು.       ಭದ್ರಾವತಿ : ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು.       ಡಾ. ಮಧುಕರ್ ಶೆಟ್ಟಿ ಅಭಿಮಾನಿ ಬಳಗ ವತಿಯಿಂದ ಶ್ರೀ ತಿರುಮಲ ಚಾರಿಟಬಲ್ ಫೌಂಡೇಶನ್ ಹಾಗು ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಆರಂಭದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಮತ್ತು ಡಾ. ಮಧುಕರ್ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು.  ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಡಾ. ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು. ಉಚಿತ ರಕ...

ಅತಿಥಿ ಉಪನ್ಯಾಸಕಿಗೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲ ವಿರುದ್ಧ ದೂರು

ಇಮೇಜ್
     ಭದ್ರಾವತಿ: ಕಾಲೇಜಿನ ಪ್ರಾಂಶುಪಾಲರೊಬ್ಬರು ಅತಿಥಿ ಉಪನ್ಯಾಸಕಿ ಒಬ್ಬರಿಗೆ ಕಾರಿನಲ್ಲಿ ಡ್ರಾಪ್ ಮಾಡುವ ವೇಳೆ ಲೈಂಗಿಕ ದೌರ್ಜನ್ಯ ನೀಡಿರುವ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.      ಬಿಆರ್ ಪ್ರಾಜೆಕ್ಟ್ ಶಾಂತಿನಗರದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ 40 ವರ್ಷದ ಮಹಿಳೆ ಶಿವಮೊಗ್ಗದಿಂದ ಓಡಾಡುತ್ತಿದ್ದರು. ಕಾಲೇಜಿನ ಪ್ರಾಂಶುಪಾಲರು ಕಾರಿನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನೀಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ನಿಮ್ಮ ಜಾತಿಯವರು ಲೈಂಗಿಕ ಕ್ರಿಯೆಗೆ ಸಹಕರಿಸುವುದಾಗಿ ಮಹಿಳೆಗೆ ಪ್ರಚೋದಿಸಲಾಗಿದೆ ಎನ್ನಲಾಗಿದೆ.      ಶ್ರೀಪಾದ ಹೆಗ್ಡೆ, ಮಂಗಳ ವಸುಂಧರ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ ಡಿ.19 ರಂದು ಮಂಜುಳ ಮತ್ತು ವಸುಂಧರರವರು ಡ್ಯಾನ್ಸ್ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಬೈಯುವಾಗ ಪ್ರಶ್ನಿಸಿದ ಅತಿಥಿ ಉಪನ್ಯಾಸಕಿಗೆ ಥಳಿಸಿದ್ದಾರೆ. ಅಲ್ಲೇ ಇದ್ದ ಪ್ರಾಂಶುಪಾಲ ಶ್ರೀಪಾದ ಹೆಗ್ಡೆ ಜಾತಿ ಬುದ್ದಿ ಬಿಡಬೇಕು ಎಂದು ಹೇಳಿ ನಿಂದಿಸಿರುವ ಬಗ್ಗೆ ದೂರಲಾಗಿದೆ.

ಡಿ.೨೮ರಂದು ಮಧುಕರ್‌ಶೆಟ್ಟಿ ೭ನೇ ಪುಣ್ಯಸ್ಮರಣೆ

ಇಮೇಜ್
  ಭದ್ರಾವತಿ : ಯುವ ಸಮುದಾಯಕ್ಕೆ ಪ್ರಾಮಾಣಿಕತೆ ಮತ್ತು ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿವಂಗತ ಮಧುಕರ್ ಶೆಟ್ಟಿಯವರ ೭ನೇ ವರ್ಷದ ಪುಣ್ಯಸ್ಮರಣೆ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಡಿ.೨೮ರಂದು ಹಮ್ಮಿಕೊಳ್ಳಲಾಗಿದೆ.     ನಗರದ ಮಧುಕರ್ ಶೆಟ್ಟಿ ಅಭಿಮಾನಿ ಬಳಗದಿಂದ ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಭಿಮಾನಿ ಬಳಗದ ಪ್ರಮುಖರು ಕೋರಿದ್ದಾರೆ. 

ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಹಕಾರ ನೀಡಿ : ಬಿ.ಕೆ ಸಂಗಮೇಶ್ವರ್

ಇಮೇಜ್
ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.    ಭದ್ರಾವತಿ:  ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಗಳ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದರು.     ಅವರು ತಾಲೂಕಿನ ಯರೇಹಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.    ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸದುಪಯೋಗ ಪಡೆದುಕೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ  ಕರೆ ನೀಡಿದರು.    ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಎನ್.ಕೆ. ಅಶೋಕ್, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆಗೆ ಪೈಪೋಟಿ ಎದುರಿಸಿ ಉಳಿಯಬೇಕಾದರೆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ ಹಾಗು ಸಾಂಸ್ಕೃ...

ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಮೆರವಣಿಗೆ : ೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಸಂಪನ್ನ

ಇಮೇಜ್
ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಭದ್ರಾವತಿ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ೩ ದಿನಗಳವರೆಗೆ ವಿಜೃಂಭಣೆಯಿಂದ ಜರುಗಿತು. ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರ ಗಣ್ಯರು ಅನ್ನಸಂತರ್ಪಣೆಗೆ ಚಾಲನೆ ನೀಡಿದರು.       ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ೩ ದಿನಗಳವರೆಗೆ ವಿಜೃಂಭಣೆಯಿಂದ ಜರುಗಿತು.      ಶನಿವಾರ ಬೆಳಿಗ್ಗೆ ನಿರ್ಮಾಲ್ಯದರ್ಶನಂ, ಮಹಾಗಣಪತಿ ಹೋಮ, ಅಷ್ಟಾಭಿಷೇಕ, ಶ್ರೀ ಅಯ್ಯಪ್ಪ ಸ್ವಾಮಿ ಹಾಗು ಶ್ರೀ ಭಗವತಿಗೆ ದೇವರಿಗೆ ಚಂದನಾಲಂಕಾರ ಹಾಗು ದೇವಸ್ಥಾನ ಎಲ್ಲಾ ದೇವರುಗಳಿಗೆ ಹೂವಿನ ಅಭಿಷೇಕ, ನಂತರ ಪೂಜೆ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಹೋಮ-ಹವನಗಳು ಶಿವಮೊಗ್ಗ ವೇದಬ್ರಹ್ಮ ಶ್ರೀ ಚಂದ್ರಶೇಖರ ಉಡುಪ ಮತ್ತು ಸಂಗಡಿಗರ ನೇತೃತ್ವದಲ್ಲಿ ಜರುಗಿದವು      ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿ...

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಇಮೇಜ್
ಕಾಂಗ್ರೆಸ್, ಜಾತ್ಯವಾದಿಗಳು, ಪ್ರಗತಿಪರರ ವಿರುದ್ಧ ಆಕ್ರೋಶ  ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಭದ್ರಾವತಿ ಹಿರಿಯೂರು ಮಹಾಶಕ್ತಿ ಕೇಂದ್ರ ಹಾಗು ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ಬಾರಂದೂರಿನಲ್ಲಿ ಬಿ.ಎ ಪ್ರಸನ್ನಕುಮಾರ್ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.       ಭದ್ರಾವತಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯಾಕಾಂಡ ಘಟನೆಯನ್ನು ದೇಶದಲ್ಲಿನ ಜಾತ್ಯತೀತವಾದಿಗಳು, ಪ್ರಗತಿಪರರು ಹಾಗು ಕಾಂಗ್ರೆಸ್ ಪಕ್ಷದವರು ಖಂಡಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ನಮ್ಮ ದೇಶದಲ್ಲಿ ವಾಸಿಸುತ್ತಿರುವವರು ಹಿಂದೂಗಳಲ್ಲವೇ ಎಂದು ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ.       ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಹಿರಿಯೂರು ಮಹಾಶಕ್ತಿ ಕೇಂದ್ರ ಹಾಗು ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ಬಾರಂದೂರಿನಲ್ಲಿ ಬಿ.ಎ ಪ್ರಸನ್ನಕುಮಾರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ದೇಶದಲ್ಲಿ ಯಾವುದೇ ಸಣ್ಣ ಕೋಮುಗಲಭೆಗಳು ನಡೆದರೆ ಜಾತ್ಯತೀತ ವಾದಿಗಳು, ಪ್ರಗತಿಪರರು ಹಾಗು ಕಾಂಗ್ರೆಸ್ ಪಕ್ಷದವರು ದೊಡ್ಡಮಟ್ಟದಲ್ಲಿ ಪ್ರತಿಭಟಿಸುತ್ತಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯಾಕಾಂಡ ಭೀಕರವಾಗಿದ್ದು, ವಿಶ್ವದ ಗಮನ ಸೆಳೆಯುತ್ತಿದೆ. ಆದರೆ ಈ ಘಟನೆಯನ್...

ಎಂಪಿಎಂ ನಿವೃತ್ತ ಕಾರ್ಮಿಕ ಪರಮೇಶ್ ನಿಧನ

ಇಮೇಜ್
ಪರಮೇಶ್       ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕ, ಕಾಗದ ನಗರ ನಿವಾಸಿ ಪರಮೇಶ್(೬೮) ಶುಕ್ರವಾರ ನಿಧನ ಹೊಂದಿದರು.       ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಪರಮೇಶ್ ಎಂಪಿಎಂ ಕಾರ್ಖಾನೆ ನೀರು ಸರಬರಾಜು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೈಪಾಸ್ ರಸ್ತೆ, ಬುಳ್ಳಾಪುರ ಶ್ರೀ ಶಂಕ್ರಪ್ಪ ಕಟ್ಟೆ ಸಮೀಪದ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ಎಂಪಿಎಂ ಕಾರ್ಖಾನೆ ನಿವೃತ್ತ ಕಾರ್ಮಿಕರು, ಕಾಗದನಗರ ನಿವಾಸಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಡಿ.೩೦ರಂದು ಮಿಲ್ಟ್ರಿಕ್ಯಾಂಪ್‌ನಲ್ಲಿ ವೈಕುಂಠ ಏಕಾದಶಿ

ಇಮೇಜ್
     ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಡಿ.೩೦ರಂದು ವೈಕುಂಠ ಏಕಾದಶಿ ಏರ್ಪಡಿಸಲಾಗಿದೆ.       ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.  ಬೆಳಿಗ್ಗೆ ೫ ಗಂಟೆಯಿಂದ ರಾತ್ರಿ ೧೦ ಗಂಟೆವರೆಗೆ ವೈಕುಂಠನಾಥನ ವಿಶೇಷ ದರ್ಶನ ಏರ್ಪಡಿಸಲಾಗಿದೆ.       ಸಂಜೆ ೬.೩೦ರಿಂದ ಸರಸ್ವತಿ ಕಲಾ ಸಂಗೀತ ಮತ್ತು ನೃತ್ಯ ಶಾಲೆ ವತಿಯಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವ ಮೂಲಕ ಯಶಸ್ವಿಗೊಳಿಸುವಂತೆ ದೇವಸ್ಥಾನ ಆಡಳಿತ ಮಂಡಳಿ ಕೋರಿದೆ. 

ಎಂ.ಎಸ್ ರೇವಣ್ಣ ನಿಧನ

ಇಮೇಜ್
ಎಂ.ಎಸ್ ರೇವಣ್ಣ       ಭದ್ರಾವತಿ : ತಾಲೂಕು ಕುರುಬರ ಸಂಘದ ಮಾಜಿ ಕಾರ್ಯದರ್ಶಿ, ಹಳೇನಗರ ದೊಡ್ಡ ಕುರುಬರ ಬೀದಿ, ಶ್ರೀ ಕೋಟೆ ಬಸವಣ್ಣ ದೇವಸ್ಥಾನ ಸಮೀಪದ ನಿವಾಸಿ ಎಂ.ಎಸ್ ರೇವಣ್ಣ(೭೪) ಶುಕ್ರವಾರ ನಿಧನ ಹೊಂದಿದರು.       ಪತ್ನಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ, ನಗರಸಭೆ ಮಾಜಿ ಅಧ್ಯಕ್ಷೆ ವೈ. ರೇಣುಮ್ಮ, ವೈದ್ಯ ಡಾ. ರಕ್ಷಿತ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ, ಅಳಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿ ಡಾ. ಮಲ್ಲಪ್ಪ ಇದ್ದಾರೆ.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್, ಹಿರಿಯ ಪತ್ರಕರ್ತ ಕಣ್ಣಪ್ಪ, ತಾಲೂಕು ಕುರುಬ ಸಮಾಜದ ಪ್ರಮುಖರು, ಗಣ್ಯರು ರೇವಣ್ಣರವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ. 

ವಿಜಯಪುರ ಗರ್ಭಿಣಿ ಮಾನ್ಯ ಹತ್ಯೆ ಪ್ರಕರಣ : ಅಂಬೇಡ್ಕರ್ ವೈಚಾರಿಕ ವೇದಿಕೆ ಖಂಡನೆ

ಇಮೇಜ್
ಧಾರವಾಡ ಜಿಲ್ಲೆ ಇನಾಂ ವೀರಾಪುರದ ಮಾನ್ಯ      ಭದ್ರಾವತಿ: ಧಾರವಾಡ ಜಿಲ್ಲೆ ಇನಾಂ ವೀರಾಪುರದಲ್ಲಿ ಮಾನ್ಯ ಎಂಬ ಹೆಣ್ಣು ಮಗಳು ದಲಿತ ಹುಡುಗನನ್ನು ಮದುವೆ ಆದಳು ಎಂಬ ಕಾರಣಕ್ಕಾಗಿ ತಂದೆಯೇ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ತೀವ್ರವಾಗಿ ಖಂಡಿಸಿದೆ.      ಈ ಸಂಬಂಧ ವೇದಿಕೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಲಿಂಗಾಯತ ಜಾತಿಗೆ ಸೇರಿದ ಯುವತಿ ದಲಿತ ಜಾತಿಯ ಯುವಕನನ್ನು ವಿವಾಹವಾಗಿದ್ದು, ೭ ತಿಂಗಳ ಗರ್ಭಿಣಿಯನ್ನು ಹೆತ್ತ ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿರುವುದು ತುಂಬಾ ನೋವಿನ ವಿಚಾರವಾಗಿದೆ.  ಇದೆ ರೀತಿ ವಿಜಯಪುರದಲ್ಲಿ ದೇವಸ್ಥಾನ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಒಬ್ಬ ದಲಿತ ಯುವಕ ಕುಳಿತ ಎಂದು ಆತನನ್ನು ಕೊಲೆ ಮಾಡಿರುವುದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಈ ಕೃತ್ಯವನ್ನು ಸಹ ವೇದಿಕೆ ಖಂಡಿಸಿದ್ದಾರೆ ಎಂದು ತಿಳಿಸಲಾಗಿದೆ.       ಈ ಎರಡೂ ಘಟನೆಗಳು ಇಂದಿಗೂ ವರ್ಣಾಶ್ರಮ ಜಾತಿ ವ್ಯವಸ್ಥೆ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿವೆ. ಇನಾಂ ವೀರಾಪುರದ ಮೇಲ್ಮಾತಿಗೆ ಸೇರಿದ ಮಾನ್ಯ ಹಾಗು ಇದೇ ಗ್ರಾಮದ ದಲಿತ ಹುಡುಗ ವಿವೇಕಾನಂದ ದೊಡ್ಮನಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದರು. ದಲಿತ ಹುಡುಗನನ್ನು ಮಗಳು ಮದುವೆಯಾದ ಕಾರಣಕ್ಕಾಗಿ ಮರ್ಯಾದೆ ಹೋಯಿತೆಂದು ಮೇಲ್ಜಾತಿಯ ದುರಹಂಕಾರದಿಂದ ಪ್ರ...

ಉಕ್ಕಿನ ನಗರದ ವಿವಿಧೆಡೆ ಕ್ರಿಸ್‌ಮಸ್ ಸಡಗರ, ಸಂಭ್ರಮ

ಇಮೇಜ್
ಭದ್ರಾವತಿ ಕಾಗದ ನಗರದ ಕಾರ್ಮಿಕರ ಸಂತ ಜೋಸೆಫರ ದೇವಾಲಯದಲ್ಲಿ ಕ್ರಿಸ್‌ಮಸ್ ಹಬ್ಬದ ಹಿನ್ನಲೆಯಲ್ಲಿ ನಿರ್ಮಿಸಲಾಗಿದ್ದ ಯೇಸುವಿನ ಜನನ ವೃತ್ತಾಂತ ನೆನಪಿಸುವ ಗೋದಲಿ ಗಮನ ಸೆಳೆದಯಿತು.       ಭದ್ರಾವತಿ : ಜಗತ್ತಿಗೆ ತ್ಯಾಗ, ಪ್ರೀತಿ, ಐಕ್ಯತೆಯ ಸಂದೇಶ ಸಾರಿದ ಯೇಸು ಕ್ರಿಸ್ತನ ಜನ್ಮದಿನವನ್ನು ಗುರುವಾರ ತಾಲೂಕಿನಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.        ಗಾಂಧಿನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯ,  ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯ, ಕಾರೇಹಳ್ಳಿ ಸಂತ ಅಂತೋಣಿಯವರ ದೇವಾಲಯ, ಕಾಗದ ನಗರದ ಕಾರ್ಮಿಕರ ಸಂತ ಜೋಸೆಫರ ದೇವಾಲಯ, ಮಾವಿನಕೆರೆ ಸಂತ ತೆರೆಸಮ್ಮನವರ ದೇವಾಲಯ, ನ್ಯೂಟೌನ್ ವೇನ್ಸ್ ಚರ್ಚ್, ಬೈಪಾಸ್ ರಸ್ತೆ, ಬುಳ್ಳಾಪುರ ತೆಲುಗು ಚರ್ಚ್ ಸೇರಿದಂತೆ ತಾಲೂಕಿನ ಹಲವು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು .      ಚರ್ಚ್‌ಗಳಲ್ಲಿ ನಿರ್ಮಿಸಲಾಗಿದ್ದ ಕ್ರಿಸ್‌ಮಸ್ ಟ್ರೀ , ವಿವಿಧ ರೀತಿಯ ನಕ್ಷತ್ರಗಳು, ಯೇಸುವಿನ ಜನನ ವೃತ್ತಾಂತ ನೆನಪಿಸುವ ಗೋದಲಿಗಳು, ದೀಪ ಅಲಂಕಾರದೊಂದಿಗೆ ಗಮನ ಸೆಳೆದವು. ಬುಧವಾರ ಮಧ್ಯರಾತ್ರಿ ಹಾಗೂ ಬುಧವಾರ ಮುಂಜಾನೆ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಕ್ರೈಸ್ತರು ಸಮುದಾಯದವರು ಪಾಲ್ಗೊಂಡಿದ್ದರು.       "ಕ್ರಿಸ್ಮಸ್ " ಯೇಸುಕ್ರಿಸ್ತರ ಜನನದ ಶುಭಗಳಿಗೆಯ ಸ್ಮರಣೆ ಇದರ ಸಂಕೇತವಾಗಿ ಬಿಳಿ ಮ...

೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವಕ್ಕೆ ಚಾಲನೆ : ಡಿ.೨೭ರಂದು ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಮೆರವಣೆಗೆ

ಇಮೇಜ್
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ೩ ದಿನಗಳವರೆಗೆ ಡಿ.೨೭ರವರೆಗೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.       ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ೫೪ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ೩ ದಿನಗಳವರೆಗೆ ಡಿ.೨೭ರವರೆಗೆ ಹಮ್ಮಿಕೊಳ್ಳಲಾಗಿದೆ.       ಗುರುವಾರ ನಿರ್ಮಾಲ್ಯದರ್ಶನಂ, ಮಹಾಗಣಪತಿ ಹಾಗು ಸುದರ್ಶನ ಹೋಮ, ಉಷ ಪೂಜೆ, ಅಷ್ಟಾಭಿಷೇಕ, ಕಳಸ ಪೂಜೆ, ಕಳಸಾಭಿಷೇಕ ನಂತರ ಧ್ವಜಾರೋಹಣದೊಂದಿಗೆ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಮಧ್ಯಾಹ್ನದ ಪೂಜೆ, ಮಹಾಮಂಗಳಾರತಿ ನೆರವೇರಿತು. ಹೋಮ-ಹವನಗಳು ಶಿವಮೊಗ್ಗ ವೇದಬ್ರಹ್ಮ ಶ್ರೀ ಚಂದ್ರಶೇಖರ ಉಡುಪ ಮತ್ತು ಸಂಗಡಿಗರ ನೇತೃತ್ವದಲ್ಲಿ ಜರುಗಿದವು. ಸಂಜೆ ಅಲಂಕಾರ ದೀಪಾರಾಧನೆ, ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು.       ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಗೌರವಾಧ್ಯಕ್ಷ ಎಸ್. ಜಯಕೃಷ್ಣ, ಜೀರ್ಣೋದ್ದಾರ ಸಮಿತಿಯ ಛೇರ್ಮನ್ ವಿ. ಬಾಬು, ಅಧ್ಯಕ್ಷ ಟಿ.ಪಿ ಸುಬ್ರಮಣ್ಯನ್, ಉಪಾಧ್ಯಕ್ಷ ಆರ್. ರಾಧಕೃಷ್ಣನ್, ಕಾರ್ಯದರ್ಶಿ ಎಂ. ಅನಿಲ್‌ಕುಮಾರ್, ಸಹ ಕಾರ್ಯದರ್ಶಿ ರಾಮ ಮ...

ಪ್ರೇಕ್ಷಕರ ಮನಸೂರೆಗೊಂಡ `ಕೊಡಲ್ಲ ಅಂದ್ರ ಕೊಡಲ್ಲ...' ನಾಟಕ ಪ್ರದರ್ಶನ

ಇಮೇಜ್
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಸಹಯೋಗದೊಂದಿಗೆ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಭದ್ರಾವತಿ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಿರ್ದಿಗಂತ ಮೈಸೂರು ಕಲಾವಿದರು ಅಭಿನಯಿಸಿದ ಶಕೀಲ್ ಅಹಮದ್ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದ `ಕೊಡಲ್ಲ ಅಂದ್ರ ಕೊಡಲ್ಲ...' ನಾಟಕ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.      ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಸಹಯೋಗದೊಂದಿಗೆ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಿರ್ದಿಗಂತ ಮೈಸೂರು ಕಲಾವಿದರು ಅಭಿನಯಿಸಿದ ಶಕೀಲ್ ಅಹಮದ್ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದ `ಕೊಡಲ್ಲ ಅಂದ್ರ ಕೊಡಲ್ಲ...' ನಾಟಕ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.      ನಿರ್ದಿಗಂತ ಮೈಸೂರು ಕಲಾವಿದರಾದ ಜಿ. ದಿನೇಶನಾಯ್ಕ, ಸಲ್ಮಾ ದಂಡಿನ್, ಚರಿತ್ ಸುವರ್ಣ, ಮಂಜುನಾಥ ಮಂಡಲಗೇರಿ, ಚರಿತ ಶಾರದ, ಆಸೀಫ್ ಹೂವಿನ ಹಡಗಲಿ ಮತ್ತು ಕಲ್ಲಪ್ಪ ಪೂಜೇರ್‌ರವರ ಅಭಿನಯ ಮೆಚ್ಚುಗೆಗೆ ಪಾತ್ರವಾಯಿತು.  ಆರಂಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಪ್ರಧಾನ ಕಾರ್ಯ...

ಸಂವಿಧಾನ ವಿರೋಧಿ ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಜಾರಿಗೊಳಿಸದಿರಿ

ಇಮೇಜ್
ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ  ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ರಾಜ್ಯಪಾಲರಿಗೆ ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ತಹಸೀಲ್ದಾರ್ ಮೂಲಕ ಬುಧವಾರ ಮನವಿ ಸಲ್ಲಿಸಿದ್ದಾರೆ.       ಭದ್ರಾವತಿ : ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ರಾಜ್ಯಪಾಲರಿಗೆ ಬಿಜೆಪಿ ಮುಖಂಡರು ತಹಸೀಲ್ದಾರ್ ಮೂಲಕ ಬುಧವಾರ ಮನವಿ ಸಲ್ಲಿಸಿದ್ದಾರೆ.    ತಾಲೂಕು ಕಛೇರಿ ಮುಂಭಾಗ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಪ್ರಮುಖರಾದ ಬಿಜೆಪಿ ಮಹಿಳಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ, ಮಾಜಿ ಶಾಸಕ ಕೆ.ಬಿ ಅಶೋಕ್ ನಾಯ್ಕ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶ್ ಸೇರಿದಂತೆ ಇನ್ನಿತರರು, ಪ್ರಸ್ತುತ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ವಿಧೇಯಕ ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ ೧೯(೧) ಪರಿಚ್ಛೇದ, (೨) ಪರಿಚ್ಛೇದದಡಿ ವಾಕ್ ಅಥವಾ ಅಭಿವೃತ್ತಿ ಸ್ವಾತಂತ್ರ...

ನಗರಸಭೆ ಉಳಿದ ಅವಧಿಗೆ ಉಪಾಧ್ಯಕ್ಷರಾಗಿ ಬಷೀರ್ ಅಹಮದ್ ಅವಿರೋಧ ಆಯ್ಕೆ

ಇಮೇಜ್
ಭದ್ರಾವತಿ ನಗರಸಭೆ ಮೀಸಲಾತಿ ೨ನೇ ಅವಧಿಯ ಉಳಿದ ಅವಧಿಗೆ ಉಪಾಧ್ಯಕ್ಷರಾಗಿ ೮ನೇ ವಾರ್ಡ್ ಸದಸ್ಯ ಬಷೀರ್ ಅಹಮದ್ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಸೇರಿದಂತೆ ಇನ್ನಿತರರು ಅಭಿನಂದಿಸಿದರು.        ಭದ್ರಾವತಿ : ನಗರಸಭೆ ಮೀಸಲಾತಿ ೨ನೇ ಅವಧಿಯ ಉಳಿದ ಅವಧಿಗೆ ಉಪಾಧ್ಯಕ್ಷರಾಗಿ ೮ನೇ ವಾರ್ಡ್ ಸದಸ್ಯ ಬಷೀರ್ ಅಹಮದ್ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ೩೫ ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಅತಿ ಹೆಚ್ಚು ೧೮ ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮೀಸಲಾತಿಗೆ ಅನುಗುಣವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗು ಸ್ಥಾಯಿ ಸಮಿತಿ ಸ್ಥಾನಗಳಿಗೆ ಅಧಿಕಾರ ಹಂಚಿಕೆ ಸೂತ್ರ ರೂಪಿಸಿಕೊಂಡಿದೆ. ಮೀಸಲಾತಿ ೨ನೇ ಅವಧಿಯಲ್ಲಿ ಸಾಮಾನ್ಯ ಮೀಸಲಾತಿ ಹೊಂದಿರುವ ಉಪಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ವಾರ್ಡ್ ನಂ.೧೧ರ ಸದಸ್ಯ ಎಂ. ಮಣಿ ಎಎನ್‌ಎಸ್ ಆಯ್ಕೆಯಾಗಿ ೧೬ ತಿಂಗಳು ಅಧಿಕಾರ ನಿರ್ವಹಿಸಿದ್ದಾರೆ. ಇದೀಗ ಉಳಿದ ಅವಧಿಗೆ ಬಷೀರ್ ಅಹಮದ್ ಆಯ್ಕೆಯಾಗಿದ್ದಾರೆ.     ...

ಜಮೀನು ವಿವಾದ ವೃದ್ಧನ ಮೇಲೆ ಹಲ್ಲೆ : ಸಾವು

ಇಮೇಜ್
ಕುಟುಂಬಸ್ಥರ ದೂರಿನ ಮೇರೆಗೆ ೩ ಜನರ ಬಂಧನ  ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣದಲ್ಲಿ ಸುಬ್ರಹ್ಮಣ್ಯ ಎಂಬ ವೃದ್ಧನೋರ್ವನ ಮೃತಪಟ್ಟಿರುವುದು.         ಭದ್ರಾವತಿ : ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನೋರ್ವನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿದ್ದಾರೆಂಬ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ.       ಸುಬ್ರಹ್ಮಣ್ಯ(೬೮) ಸಾವನ್ನಪ್ಪಿದ ವೃದ್ಧ ಎಂದು ತಿಳಿದು ಬಂದಿದೆ. ಇವರ ಸಹೋದರಿಯ ಮಕ್ಕಳೊಂದಿಗೆ ಜಮೀನು ಸಂಬಂಧ ವಿವಾದವಿದ್ದು, ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಹಾಗು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯರವರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.       ಈ ನಡುವೆ ಗ್ರಾಮಾಂತರ ಪೊಲೀಸರಿಗೆ ಕುಟುಂಬಸ್ಥರು ಸುಬ್ರಹ್ಮಣ್ಯರನ್ನು ಕೊಲೆ ಮಾಡಲಾಗಿದೆ ಎಂದು ದೂರಿದ್ದು, ಇದರನ್ವಯ ೩ ಜನರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.       ಸುಬ್ರಹ್ಮಣ್ಯರ ಮೃತದೇಹದ ಮರಣೋತ್ತರ ಪರೀಕ್ಷೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ನಂತರ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ. 

ಬೊಲೆರೋ ವಾಹನ ಪಲ್ಟಿ : ಕೂಲಿಯಾಳು ಮಹಿಳೆ ಸಾವು

ಇಮೇಜ್
ಕೂಲಿಯಾಳುಗಳನ್ನು ಕರೆದೊಯ್ಯುತ್ತಿದ್ದ ಬೊಲೆರೊ ಪಿಕ್-ಅಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದ ಪರಿಣಾಮ ಕೂಲಿಯಾಳು ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಭದ್ರಾವತಿ ತಾಲೂಕಿನ ದೊಡ್ಡೇರಿ ರಸ್ತೆ ರಂಗನಾಥಪುರ ದೊಡ್ಡ ಚಾನಲ್ ಹತ್ತಿರ ನಡೆದಿದೆ.       ಭದ್ರಾವತಿ: ಕೂಲಿಯಾಳುಗಳನ್ನು ಕರೆದೊಯ್ಯುತ್ತಿದ್ದ ಬೊಲೆರೊ ಪಿಕ್-ಅಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದ ಪರಿಣಾಮ ಕೂಲಿಯಾಳು ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ತಾಲೂಕಿನ ದೊಡ್ಡೇರಿ ರಸ್ತೆ ರಂಗನಾಥಪುರ ದೊಡ್ಡ ಚಾನಲ್ ಹತ್ತಿರ ನಡೆದಿದೆ.       ಶಿವಮೊಗ್ಗ ಗಾಜುನೂರು ಸಮೀಪದ ದೇವರಾಜ್ ಎಂಬುವವರ ನರ್ಸರಿಯಲ್ಲಿ ಕೆಲಸ ಮುಗಿಸಿಕೊಂಡು ಸುಮಾರು ೧೪ ಜನ ಕೂಲಿಯಾಳುಗಳು ಬೊಲೆರೊ ಪಿಕ್-ಅಪ್ ವಾಹನದಲ್ಲಿ ತಾಲೂಕಿನ ಅರಣ್ಯ ವ್ಯಾಪ್ತಿಯ ಬಂಡಿಗುಡ್ಡ, ನೆಟ್ಟಕಲ್ಲಹಟ್ಟಿ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಲಕ್ಷ್ಮೀ(೪೫) ಎಂಬ ಕೂಲಿಯಾಳು ಮಹಿಳೆ ಸ್ಥಳದಲ್ಲಿಯೇ ಪಟ್ಟಿದ್ದಾರೆ. ಉಳಿದಂತೆ ೧೩ ಜನ ಕೂಲಿಯಾಳುಗಳು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.       ಘಟನಾ ಸ್ಥಳಕ್ಕೆ ಗ್ರಾ...

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ರೈತ ದಿನಾಚರಣೆ

ಇಮೇಜ್
ಕರ್ನಾಟಕ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರೈತ ದಿನಾಚರಣೆ ಆಚರಿಸಲಾಯಿತು.  ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ : ಕರ್ನಾಟಕ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರೈತ ದಿನಾಚರಣೆ ಆಚರಿಸಲಾಯಿತು.        ವಿಶೇಷತೆ ಎಂದರೆ ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಉದ್ಯೋಗ ತೊರೆದು ಸುಮಾರು ೭ ಎಕರೆ ಜಮೀನಿನಲ್ಲಿ ಅಡಕೆ, ತೆಂಗು, ಕಾಳು ಮೆಣಸು ಸೇರಿದಂತೆ ಇನ್ನಿತರ ವಾಣಿಜ್ಯ ಬೆಳೆಗಳು ಹಾಗು ಗುಲಾಬಿ, ಚೆಂಡು ಹೂವಿನ ತೋಟದ ಬೆಳೆ ಹಾಗು ಮಿಶ್ರ ಬೆಳೆಗಳನ್ನು ಬೆಳೆದು ಪ್ರಗತಿ ಸಾಧಿಸಿರುವ, ವಾರ್ಷಿಕ ೨೫ ರಿಂದ ೩೦ ಲಕ್ಷ ಆದಾಯ ಸಂಪಾದಿಸುತ್ತಿರುವ ತಾಲೂಕಿನ ಅರಳಿಹಳ್ಳಿ ಗ್ರಾಮದ ರೈತ ಎಸ್. ಬಸವರಾಜ್ ಹಾಗು ಬೊಮ್ಮನಹಳ್ಳಿ ರೈತ ಚಂದ್ರೇಶ್ ಮತ್ತು ತಿಪ್ಪೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ರೈತ ಎಸ್. ಬಸವರಾಜ್, ಭೂಮಿ ಮೇಲೆ ರೈತ ಪದದ ಪರಿಕಲ್ಪನೆ, ರೈತರ ಬದುಕು, ಎದುರಾಗುವ ಸಂಕಷ್ಟಗಳು, ಸಮಾಜದಲ್ಲಿ ರೈತರನ್ನು ನೋಡುವ ದೃಷ್ಟಿಕೋನ ಸೇರಿದಂತೆ ಇನ್ನಿತರ ವಿಚಾರಗಳನ್ನು ಮ...

ಎಂ.ಪಿ ಸತ್ಯನಾರಾಯಣ ನಿಧನ

ಇಮೇಜ್
ಎಂ.ಪಿ ಸತ್ಯನಾರಾಯಣ       ಭದ್ರಾವತಿ : ನಗರಸಭೆ ವ್ಯಾಪ್ತಿಯ ಡಾ. ರಾಜಕುಮಾರ್ ರಸ್ತೆ, ಚಾಮೇಗೌಡ ಏರಿಯಾ ನಿವಾಸಿ, ನ್ಯಾಯಬೆಲೆ ಅಂಗಡಿ ಸಹಾಯಕ ಎಂ.ಪಿ ಸತ್ಯನಾರಾಯಣ(೬೭) ಮಂಗಳವಾರ ಬೆಳಿಗ್ಗೆ ನಿಧನ ಹೊಂದಿದರು.       ೭ ಮಂದಿ ಸಹೋದರರು, ಓರ್ವ ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಸತ್ಯನಾರಾಯಣ ನಗರದ ಹೊಸಮನೆ ಶಿವಾಜಿ ವೃತ್ತ ಸಮೀಪದ ಸುಪ್ರೀಂ ನ್ಯಾಯಬೆಲೆ ಅಂಗಡಿ ಹಾಗು ಡಾ. ರಾಜಕುಮಾರ್ ರಸ್ತೆ, ಶಂಕರ್ ಚಿತ್ರಮಂದಿರ ಬಳಿ ಇರುವ ನ್ಯಾಯಬೆಲೆ ಅಂಗಡಿಯಲ್ಲಿ ಸುಮಾರು ೪೦ ವರ್ಷಗಳಿಂದ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.       ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಹಾಗು ತಾಲೂಕು ಅಧ್ಯಕ್ಷರು, ಮತ್ತು ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಸ್ಥಳೀಯ ಮುಖಂಡರು, ಗಣ್ಯರು ಸತ್ಯನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.   

ಮಾವಿನಕೆರೆ ಗ್ರಾಮದಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ : ಸಿಹಿ ಹಂಚಿಕೆ

ಇಮೇಜ್
ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ನಡೆಸಿ ಹಬ್ಬದ ಸಂದೇಶ ಸಾರುವ ಮೂಲಕ ಸಿಹಿ ಹಂಚಲಾಯಿತು.       ಭದ್ರಾವತಿ :  ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ನಡೆಸಿ ಹಬ್ಬದ ಸಂದೇಶ ಸಾರುವ ಮೂಲಕ ಸಿಹಿ ಹಂಚಲಾಯಿತು.       ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂತ ಕ್ಲಾಸ್‌ರ ವೇಷ ಧರಿಸಿದ ಭಕ್ತರು ಸಂಗೀತ ವಾದ್ಯಗಳೊಂದಿಗೆ ಕ್ರಿಸ್‌ಮಸ್ ಗಾಯನ ನಡೆಸಿದರು. ಅಲ್ಲದೆ ಏಸುಕ್ರಿಸ್ತರ ತ್ಯಾಗ, ಪ್ರೀತಿ, ಐಕ್ಯತೆಯ ಸಂದೇಶ ಸಾರಲಾಯಿತು.      ಧರ್ಮಕೇಂದ್ರದ ಗುರು ಫಾದರ್ ಪೌಲ್ ಕ್ರಾಸ್ತ ಮತ್ತು ಗ್ರಾಮದ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು. 

ವಿಶ್ವೇಶತೀರ್ಥ ಶ್ರೀಗಳು, ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನೆ ಮಹೋತ್ಸವ

ಇಮೇಜ್
ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಸೋಮವಾರ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹಾಗೂ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನೆ ಮೊಹೋತ್ಸವ ಜರಗಿತು.       ಭದ್ರಾವತಿ : ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಸೋಮವಾರ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹಾಗೂ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನೆ ಮೊಹೋತ್ಸವ ಜರಗಿತು.       ಬೆಳಗಿನ ಜಾವ ೪.೩೦ಕ್ಕೆ ಪುರುಷ ಸೂಕ್ತ, ಶ್ರೀ ಸೂಕ್ತ ಹೋಮ, ತದನಂತರ ೭೫ ಕಳಸದೊಂದಿಗೆ ಶ್ರೀ ವೀರಾಂಜನೇಯ, ಶ್ರೀ ಜಯತೀರ್ಥರು, ಶ್ರೀ ವಾದಿರಾಜರು, ಶ್ರೀ ರಾಘವೇಂದ್ರ ಸ್ವಾಮಿ ಮತ್ತು ಶ್ರೀ ಭೂತರಾಜರಿಗೆ ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್‌ರವರ ನೇತೃತ್ವದಲ್ಲಿ ಅಭಿಷೇಕ ಜರುಗಿತು.       ಮಂಗಳವಾದ್ಯ ಹಾಗು ಭಜನಾಮಂಡಳಿಗಳೊಂದಿಗೆ ವಿಶ್ವೇಶತೀರ್ಥ ಶ್ರೀಗಳು ಹಾಗೂ ಶ್ರೀ ವಿದ್ಯಾಮಾನ್ಯ ತೀರ್ಥರ ಭಾವಚಿತ್ರ ಹಾಗು ಪಾದುಕೆಯನ್ನು ರಾಘವೇಂದ್ರ ಸ್ವಾಮಿಗಳವರ ಮಠದಿಂದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.       ಪಂಡಿತರಾದ ಮೃಥಿಕ ಗುರುರಾಜ ಆಚಾರ್, ವಿಶ್ವೇಶತೀರ್ಥ ಶ್ರೀಗಳು ಹಾಗೂ ಶ್ರೀ ವಿದ್ಯಾಮಾನ್ಯ ತೀರ್ಥರ ಕುರಿತು ಪ್ರವಚನ ನಡೆಸಿಕೊಟ್ಟರು. ಹನುಮಂತ ರಾವ್...

ಡಿ.೨೮ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಚುನಾವಣೆ : ೧೫ ಸ್ಥಾನಗಳಿಗೆ ೩೨ ಮಂದಿ ಸ್ಪರ್ಧೆ

ಇಮೇಜ್
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ.       ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ೫ ವರ್ಷಗಳ ಅವಧಿಗೆ ಡಿ೨೮ರ ಭಾನುವಾರ ಸಿಲ್ವರ್ ಜ್ಯೂಬಿಲಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ.        ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ೧೫ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು ೩೨ ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಲಿ ಅಧ್ಯಕ್ಷ ಬಿ.ಜೆ ರಾಮಲಿಂಗಯ್ಯ ನೇತೃತ್ವದಲ್ಲಿ ಹಾಲಿ ನಿರ್ದೇಶಕರಾದ ಅಡವೀಶಯ್ಯ, ಕೆಂಪಯ್ಯ, ಎಸ್. ಗಜೇಂದ್ರ, ಎಲ್. ಬಸವರಾಜಪ್ಪ, ಎಸ್.ಎಸ್ ಭೈರಪ್ಪ, ಬಿ. ಮಂಜುನಾಥ್, ಮಹೇಶ್ವರಪ್ಪ, ಬಿ.ಕೆ ರವೀಂದ್ರ ರೆಡ್ಡಿ, ಬಿ.ಜೆ ರಾಮಲಿಂಗಯ್ಯ, ಲಾಜರ್, ಜಿ. ಶಂಕರ್ ಮತ್ತು ಎಸ್.ಎಚ್ ಹನುಮಂತರಾವ್ ಹಾಗು ಹೊಸದಾಗಿ ರಾಮಪ್ಪ ವಿ. ಮುನೇನಕೊಪ್ಪ, ಎನ್.ಆರ್ ಜಯರಾಜ್ ಮತ್ತು ಪಿ. ಮಂಜುನಾಥ ರಾವ್ ಸೇರಿ ಒಟ್ಟು ೧೫ ಮಂದಿ ಕಣಕ್ಕಿಳಿದಿದ್ದು, ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಒಕ್ಕೂಟದ ಹೆಸರಿನಲ್ಲಿ ಎ. ಈಶ್ವರಪ್ಪ, ಕರೀಂ ಫಿರಾನ್, ಕೆ.ಎನ್ ಗಂಗಾಧರ ಸ್ವಾಮಿ, ಚಂದ್ರಮೋಹನ್, ಎಸ್. ನರಸಿಂಹಚಾರ್, ನಾಗರಾಜ, ಎಸ್.ಈ ನಂಜುಂಡೇಗೌಡ, ಎಸ್. ನಾಗರಾಜ, ಕೆ. ಮುರಳಿಧರ, ರಾಜ, ಕೆ....

ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ 

ಇಮೇಜ್
ಭದ್ರಾವತಿ ನಗರಸಭೆ ವ್ಯಾಪ್ತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ವಿಶ್ವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ವಿಶ್ವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.      ನಗರಸಭೆ ಸದಸ್ಯೆ ಮಂಜುಳಾ ಸುಬ್ಬಣ್ಣ  ಮಕ್ಕಳಿಗೆ ಲಸಿಕೆ ಹಾಕಿ ಮಹಿಳೆಯರು ತಪ್ಪದೇ ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.      ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ಹಾಗೂ ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ಎಸ್. ರಾಜಶೇಖರ್ ಉಪ್ಪಾರ, ರಾಮಮೂರ್ತಿ ಹಾಗೂ ಹರೀಶ್ ಕುಮಾರ್ ಸೇರಿದಂತೆ ಸ್ಥಳೀಯ ಪ್ರಮುಖರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ಜನ್ನಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ 

ಇಮೇಜ್
ಭದ್ರಾವತಿ ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.       ಭದ್ರಾವತಿ: ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.      ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ತಾಯಂದಿರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಅಭಿಯಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಸ್ಥಳೀಯ ತಾಯಂದಿರು ಉಪಸ್ಥಿತರಿದ್ದರು.   

ನಿರ್ಗತಿಕರ, ದೀನದಲಿತರ ನೋವುಗಳಿಗೆ ಸ್ಪಂದಿಸಿ ನೆರವಾಗುವುದೇ ಕ್ರಿಸ್‌ಮಸ್ ಆಚರಣೆ : ಪಾಸ್ಟರ್ ರೇಮಂಡ್ 

ಇಮೇಜ್
ಭದ್ರಾವತಿ ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ಭಾನುವಾರ ಬಡವರ ಕ್ರಿಸ್‌ಮಸ್ ಏರ್ಪಡಿಸಲಾಗಿತ್ತು.       ಭದ್ರಾವತಿ: ಯೇಸುವಿನ ಜನನದ ವೃತ್ತಾಂತವೇ ಜಗತ್ತಿಗೆ ಹಲವು ಸಂದೇಶಗಳನ್ನು ಸಾರುತ್ತದೆ. ನಿರ್ಗತಿಕರ, ದೀನದಲಿತರ ನೋವುಗಳಿಗೆ ಸ್ಪಂದಿಸಿ ನೆರವಾಗುವುದೇ ಕ್ರಿಸ್‌ಮಸ್ ಆಚರಣೆಯಾಗಿದೆ. ಆಡಂಬರದ ಬದುಕು ಶಾಶ್ವತವಲ್ಲ, ನಾವು ಮಾಡುವ ಒಳ್ಳೆಯ ಕಾರ್ಯಗಳು ಮಾತ್ರ ಶಾಶ್ವತ ಎಂದು ಪಾಸ್ಟರ್ ರೇಮಂಡ್ ಹೇಳಿದರು.      ಅವರು ಭಾನುವಾರ ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಬಡವರ ಕ್ರಿಸ್‌ಮಸ್ ಆಚರಣೆ ಕಾರ್ಯಕ್ರಮದಲ್ಲಿ ಕ್ರಿಸ್‌ಮಸ್ ಸಂದೇಶ ನೀಡಿದರು.      ಜಗತ್ತಿಗೆ ಏಸು ಕ್ರಿಸ್ತನ ಸಂದೇಶಗಳನ್ನು ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಕರುಣೆ, ಮಮತೆ, ವಾತ್ಸಲ್ಯದೊಂದಿಗೆ ನಿಸ್ವಾರ್ಥ ಸೇವೆಯಲ್ಲಿ ತೊಡಗಬೇಕು. ಆಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ದಯಾಸಾಗರ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದು, ನಿರಂತರವಾಗಿ ಸೇವೆಯಲ್ಲಿ ಮುಂದುವರೆಯುವ ಕೃಪೆ ಏಸು ಕ್ರಿಸ್ತ ಕರುಣಿಸಲಿ ಎಂದು ಪ್ರಾರ್ಥಿಸಿದರು.  ಭದ್ರಾವತಿ ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬಡವರ ಕ್ರಿಸ್‌ಮಸ್ ಆಚರಣೆಯಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.      ತಾಲೂಕು ಮಾಜಿ ಸೈನಿಕರ ಸಂಘದ ಕ...

ವಿದ್ಯಾ ನಿಧನ

ಇಮೇಜ್
ಭದ್ರಾವತಿ: ಹಳೇನಗರದ ಡಿ. ದೇವರಾಜ ಅರಸು ಬಡಾವಣೆ ನಿವಾಸಿ, ನ್ಯಾಯವಾದಿ ರಮೇಶ್ ಬಾಬುರವರ ಪತ್ನಿ ವಿದ್ಯಾ(೫೫) ಶನಿವಾರ ಅನಾರೋಗ್ಯ ದಿಂದ ನಿಧನ ಹೊಂದಿದರು.       ಪತಿ ರಮೇಶ್ ಬಾಬು ಹಾಗು ಪುತ್ರಿ ಇದ್ದಾರೆ. ಇವರ ಅಂತ್ಯಸಂಸ್ಕಾರ ಭಾನುವಾರ ಬೆಳಿಗ್ಗೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.     ವಿದ್ಯಾರವರು ಹಳೇನಗರದ ಮಾಡೆಲ್ ಹೌಸಿಂಗ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದರು. ಇವರ ನಿಧನಕ್ಕೆ ಮಾಡೆಲ್ ಹೌಸಿಂಗ್ ಕೋ-ಅಪರೇಟಿವ್ ಸೊಸೈಟಿ, ನ್ಯಾಯವಾದಿಗಳು ಹಾಗು ಸ್ಥಳೀಯ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.   ಡಿ೨೧-ಬಿಡಿವಿಟಿ೧ ವಿದ್ಯಾ  Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(Dis) Mob: 9738801478 : 9482007466

ಕಾನೂನು ರೂಪಿಸಿದ್ದರೂ ಆದೇಶವಿಲ್ಲದೆ ಪೊಲೀಸರು ಅಧಿಕಾರ ಮೀರಿ ಏನು ಮಾಡಲು ಸಾಧ್ಯವಿಲ್ಲ : ಪ್ರಕಾಶ್ ರಾಥೋಡ್ 

ಇಮೇಜ್
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಭೆಯಲ್ಲಿ ಸೂಕ್ತ ಮಾಹಿತಿ ಹೊಂದಲು ಮನವಿ  ಭದ್ರಾವತಿ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಪವಿಭಾಗ ವ್ಯಾಪ್ತಿಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಭೆಯ ನೇತೃತ್ವವಹಿಸಿ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿದರು.       ಭದ್ರಾವತಿ: ಕಾನೂನು ರೂಪಿಸಿಲಾಗಿದೆ ಎಂದು ಪೊಲೀಸರು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಏನು ಮಾಡಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಸಿವಿಲ್ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನದ್ದನ್ನು ಇಲಾಖೆಯಿಂದ ನಿರೀಕ್ಷಿಸುವುದು ತಪ್ಪು ಎಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮನವರಿಕೆ ಮಾಡಿದರು.      ಅವರು ಭಾನುವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಪವಿಭಾಗ ವ್ಯಾಪ್ತಿಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಭೆಯ ನೇತೃತ್ವವಹಿಸಿ ಮಾತನಾಡಿದರು.      ಜಮೀನು ವಿವಾದ ಪ್ರಕರಣಗಳಲ್ಲಿ ತಾಲೂಕು ದಂಡಾಧಿಕಾರಿ ಅಥವಾ ನ್ಯಾಯಾಲಯ ನೀಡುವ ಆದೇಶದಂತೆ ಇಲಾಖೆ ನಡೆದುಕೊಳ್ಳಬೇಕಾಗುತ್ತದೆ. ಇಲಾಖೆಗೆ ಭೂಮಿ ಗುರುತಿಸುವ ಅಥವಾ ಯಾವುದೇ ಹೆಚ್ಚಿನ ಅಧಿಕಾರವಿಲ್ಲ. ಪ್ರಕರಣಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಶಾಂತಿ ಸುವ್ಯವಸ್ಥೆ ...