ನೂತನ ಶ್ರೀ ಮೈಲಾರೇಶ್ವರ ಸಮುದಾಯ ಭವನ ಲೋಕಾರ್ಪಣೆ
ಭದ್ರಾವತಿ ಹಳೇನಗರ ಕಂಚಿಬಾಗಿಲು ವೃತ್ತದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಧಾರ್ಮಿಕ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮೈಲಾರೇಶ್ವರ ಸಮುದಾಯ ಭವನ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು. ಭದ್ರಾವತಿ : ಹಳೇನಗರ ಕಂಚಿಬಾಗಿಲು ವೃತ್ತದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಧಾರ್ಮಿಕ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮೈಲಾರೇಶ್ವರ ಸಮುದಾಯ ಭವನ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು. ಭರತ ಹುಣ್ಣಿಮೆ ಜಾತ್ರಾ ಮಹೋತ್ಸವ ಆಚರಣೆಯೊಂದಿಗೆ ಸಮುದಾಯ ಭವನ ಲೋಕಾರ್ಪಣೆಗೊಳಿಸಲಾಗಿದ್ದು, ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ಗಂಗೆ ಪೂಜೆ, ಪೂರ್ಣ ಕುಂಭಗಳ ಅವಾಹನೆಯೊಂದಿಗೆ ಗಣಪತಿ ಹೋಮ, ನವಗ್ರಹ ಹೋಮ, ರುದ್ರಹೋಮ ಹಾಗು ಶ್ರೀ ಮೈಲಾರಲಿಂಗೇಶ್ವರ ಮೂಲ ಮಂತ್ರ ಹೋಮಗಳನ್ನು ಅರ್ಚಕರಾದ ಎಸ್.ಸಿ ನೀಲಕಂಠ ಜೋಯ್ಸ್ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ರುದ್ರಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಜ್ಜಿಗೆ, ಪಾನಕ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಹಳೇನಗರ, ಸಿದ್ದಾರೂಢನಗರ, ಭೂತನಗುಡಿ, ಹೊಸಮನೆ ಸೇರಿದಂತೆ ವಿವಿಧೆಡೆಗಳಿ...