೧ ಲಕ್ಷ ರು. ಲಂಚ ಪಡೆಯುವಾಗ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ
ಎ.ಕೆ ನಾಗೇಂದ್ರಪ್ಪ ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ೧ ಲಕ್ಷ ರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತರು ನಡೆಸಿದ ದಾಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹಾಗು ಪತ್ರಕರ್ತ ಮಂಜುನಾಥ್ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ ೨೦೧೧ನೇ ಸಾಲಿನಿಂದ ೨೦೨೩ನೇ ಸಾಲಿನ ಅವಧಿಯಲ್ಲಿ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರೆ ಭತ್ಯೆಗಳು ಸೇರಿ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡಲು ೪ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಈ ಪೈಕಿ ೧ ಲಕ್ಷ ರು. ಹಣ ಪಡೆಯುವಾಗ ದಾಳಿ ನಡೆಸಲಾಗಿದೆ. ಲಿಂಗರಾಜು ಅವರು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗು ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ಮೇಲಾಧಿಕರಿಗಳಿಗೆ ಮನವಿ ಸಲ್ಲಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪತ್ರಕರ್ತ ಮಂಜುನಾಥ್ ನೆರವಿನೊಂದಿಗೆ ಒಟ್ಟು ೪ ಲಕ್ಷ ರು. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಸಂಜೆ ೭ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕೊಠಡಿಯಲ್ಲಿ ಎ.ಕೆ ನಾಗೇಂದ್ರದಪ್ಪ. ಮತ್ತು...