ಭದ್ರಾವತಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಸಿಆರ್ಪಿ)ಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಎ.ಜಿ ರಾಜಶೇಖರ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕಛೇರಿ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಜು. ೫: ಕೆಇಎಸ್ ಗ್ರೇಡ್-೨ರ ಶ್ರೇಣಿಯ ಎ.ಜಿ ರಾಜಶೇಖರ್ ನಗರದಲ್ಲಿ ಸುಮಾರು ೪ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಸಿಆರ್ಪಿ)ಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿದ್ದಾರೆ.
ಎ.ಜಿ ರಾಜಶೇಖರ್ ಸಂಪನ್ಮೂಲ ಅಧಿಕಾರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಇದಕ್ಕೂ ಮೊದಲು ಬೆಳ್ತಂಗಡಿಯಲ್ಲಿ ಸುಮಾರು ೩ ವರ್ಷ, ನಂತರ ಚಿಕ್ಕಮಗಳೂರು ಉಪನಿರ್ದೇಶಕರ ಕಛೇರಿಯಲ್ಲಿ ಸೇವೆ ಸಲ್ಲಿಸಿದ್ದರು. ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು, ಕಲಿಕಾ ಸಾಮಗ್ರಿಗಳನ್ನು ಒದಗಿಸುವಲ್ಲಿ ಹಾಗೂ ಶಿಕ್ಷಕರ ಕುಂದು-ಕೊರತೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದೀಗ ಕಡೂರು ಜಿಗಣೆಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಂಡಿದ್ದಾರೆ. ಇವರ ಸೇವೆಯನ್ನು ಸ್ಮರಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕಛೇರಿ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.