Thursday, August 6, 2020

ಬೆಂಕಿಪುರ ಭದ್ರಾವತಿ ನಗರವಾಗಲು ಸರ್‌ಎಂವಿ ಕಾರಣ : ಬಿ.ಕೆ ಸಂಗಮೇಶ್ವರ್

ನಗರದ ರೈಲ್ವೆ ನಿಲ್ದಾಣ ಬಳಿ ಸರ್‌ಎಂವಿ ಪ್ರತಿಮೆ ಅನಾವರಣ 

ಭದ್ರಾವತಿ, ಆ. ೬: ವೆಂಕಿಪುರ, ಬೆಂಕಿಪುರ ಎಂಬ ಹೆಸರಿನಿಂದ ಕರೆಲ್ಪಡುತ್ತಿದ್ದ ಭದ್ರಾವತಿ ಇಂದು ನಗರವಾಗಿ ಗುರುತಿಸಿಕೊಳ್ಳಲು ಭಾರತರತ್ನ, ಸರ್.ಎಂ ವಿಶ್ವೇಶ್ವರಯ್ಯ ಕಾರಣಕರ್ತರು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ಗುರುವಾರ ನಗರದ ರೈಲ್ವೆ ನಿಲ್ದಾಣದ ಬಿ.ಎಚ್ ರಸ್ತೆಗೆ ಹೊಂದಿ ಕೊಂಡಿರುವ ದ್ವಾರಬಾಗಿಲಿನಲ್ಲಿ ನಿರ್ಮಿಸಲಾಗಿರುವ ಸರ್.ಎಂ. ವಿಶ್ವೇಶ್ವರಯ್ಯನವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. 
ನಗರದಲ್ಲಿ ವಿಶ್ವೇಶ್ವರಯ್ಯನವರು ವಿಐಎಸ್‌ಎಲ್ ಮತ್ತು ಎಂಪಿಎಂ ಈ ಎರಡು ಕಾರ್ಖಾನೆಗಳನ್ನು ಸ್ಥಾಪಿಸದಿದ್ದಲ್ಲಿ ಭದ್ರಾವತಿ ಹೆಸರು ಇತಿಹಾಸದ ಪುಟಗಳಲ್ಲಿ ದಾಖಲಾಗುತ್ತಿರಲಿಲ್ಲ. ಎರಡು ಕಾರ್ಖಾನೆಗಳ ಸ್ಥಾಪನೆಯಿಂದಾಗಿ ಸಾವಿರಾರು ಕುಟುಂಬಗಳು ನೆಲೆಕಂಡುಕೊಳ್ಳಲು ಸಾಧ್ಯವಾಗಿದೆ. ನಗರದ ಅನ್ನದಾತರಾಗಿರುವ ವಿಶ್ವೇಶ್ವರಯ್ಯನವರ ಪ್ರತಿಮೆ ಉದ್ಘಾಟನೆಗೊಳಿಸಿರುವುದು ತುಂಬಾ ಹೆಮ್ಮೆಯ ಸಂಗತಿಯಾಗಿದೆ ಎಂದರು. 
ಬಿಜೆಪಿ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ ಮಾತನಾಡಿ, ವಿಶ್ವೇಶ್ವರಯ್ಯನವರು ಕೇವಲ ಭಾರತಕ್ಕೆ ಮಾತ್ರವಲ್ಲ ಜಗತ್ತಿನಲ್ಲಿ ಅತಿಶ್ರೇಷ್ಠ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರಲ್ಲಿನ ಬುದ್ಧಿಶಕ್ತಿ, ಕ್ರಿಯಾಶೀಲತೆ, ಪ್ರಾಮಾಣಿಕಗಳಿಗೆ ಬೆಲೆಕಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದರು. 
ಯುವ ಮುಖಂಡ ಜಿ.ಆರ್ ಪ್ರವೀಣ್‌ಪಟೇಲ್ ಮಾತನಾಡಿ, ವಿಶ್ವೇಶ್ವರಯ್ಯನವರನ್ನು ನಗರದ ಅನ್ನದಾತ ಎಂದರೆ ತಪ್ಪಾಗಲಾರದು. ಅಂದಿನ ಕಾಲದಲ್ಲಿಯೇ ಹಲವಾರು ಕಾರ್ಖಾನೆಗಳು, ಜಲಾಶಯಗಳನ್ನು ನಿರ್ಮಾಣಮಾಡುವ ಜೊತೆಗೆ ತಮ್ಮ ೧೦೨ ವರ್ಷದ ಬದುಕಿನಲ್ಲಿ ಸಾರ್ಥಕತೆ ಕಂಡು ಕೊಂಡಿದ್ದರು. ಇಂತಹ ಮಹಾನ್ ವ್ಯಕ್ತಿಯನ್ನು ಪ್ರತಿ ಕ್ಷಣ ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 
ರೈಲ್ವೆ ನಿಲ್ದಾಣದ ಬಿ.ಎಚ್ ರಸ್ತೆಗೆ ಹೊಂದಿ ಕೊಂಡಿರುವ ದ್ವಾರಬಾಗಿಲಿನಲ್ಲಿ ನಿರ್ಮಿಸಲಾಗಿರುವ ಸರ್.ಎಂ. ವಿಶ್ವೇಶ್ವರಯ್ಯನವರ ಪ್ರತಿಮೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಅನಾವರಣಗೊಳಿಸಿ ಮಾತನಾಡಿದರು. 
ಪ್ರತಿಮೆ ನಿರ್ಮಾಣದ ರೂವಾರಿ ಎನ್. ವಿಶ್ವನಾಥರಾವ್ ಮಾತನಾಡಿ, ಹಲವಾರು ಕಾರಣಗಳಿಂದಾಗಿ ಸುಮಾರು ೨ ವರ್ಷಗಳಿಂದ ಪ್ರತಿಮೆ ಉದ್ಘಾಟನೆಯಾಗಲಿಲ್ಲ. ಇದೀಗ ಉದ್ಘಾಟನೆಗೊಂಡಿರುವುದು ತುಂಬಾ ಸಂತಸವನ್ನುಂಟುಮಾಡಿದೆ. ಪ್ರತಿಮೆ ನಿರ್ಮಾಣಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. 
ನಗರಸಭೆ ಪೌರಾಯುಕ್ತ ಮನೋಹರ್, ಶಿಲ್ಪಿ ಎಸ್.ಜಿ ಶಂಕರಮೂರ್ತಿ ಮುಖಂಡರಾದ ವಿ. ಕದಿರೇಶ್, ಬಾಲಕೃಷ್ಣ, ಸುಬ್ರಮಣಿ, ಗಣೇಶ್‌ರಾವ್, ಹೇಮಾವತಿ ವಿಶ್ವನಾಥ್, ಶೋಭಾ, ಅನ್ನಪೂರ್ಣಸಾವಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Wednesday, August 5, 2020

ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ

ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ  ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಕೈಗೊಳ್ಳಲಾಯಿತು.
ಭದ್ರಾವತಿ, ಆ. ೫:  ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬುಧವಾರ ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಜರುಗಿತು. 
ಬೆಳಿಗ್ಗೆ ಪಂಚಾಮೃತ ಅಭಿಷೇಕದೊಂದಿಗೆ ರಾಯರ ಬೃಂದಾವನ, ಮುಖ್ಯ ಪ್ರಾಣ ದೇವರಿಗೆ ಮತ್ತು ಶ್ರೀ ವಾದಿರಾಜರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.  
ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ  ಬೃಂದಾವನಕ್ಕೆ ಪುಷ್ಪಾಲಂಕಾರ ಕೈಗೊಳ್ಳಲಾಯಿತು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸದ ಹಿನ್ನಲೆಯಲ್ಲಿ ಮಠದಲ್ಲಿ ಚಂಡೆವಾದ್ಯ ಸೇವೆ ನಡೆಸಿ ಜೈ ಶ್ರಿರಾಮ್ ಘೋಷಣೆ ಕೂಗುವ ಮೂಲಕ ಭಕ್ತರು ಸಂಭ್ರಮಿಸಿದರು. 
ವೇದಬ್ರಹ್ಮ ಗೋಪಾಲಚಾರ್, ಮಠದ ಪ್ರಮುಖರಾದ ಮುರಳೀಧರ ತಂತ್ರಿ, ರಮಾಕಾಂತ, ಸತ್ಯನಾರಾಂiiಣಾಚಾರ್, ನಿರಂಜನ್, ಶ್ರೀಪತಿ, ಮಾಧವರಾವ್, ಚೌತಾಯ್ ಗುರುರಾಜ್, ಜಯತೀರ್ಥ, ಸುಧೀಂದ್ರರಾವ್, ಶಶಿ, ಪ್ರಮೋದ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭದ್ರಾವತಿ, ಆ. ೫: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಈ ಇಬ್ಬರು ರಾಜಕೀಯ ಪ್ರಮುಖರು ಸೇರಿದಂತೆ ಸೋಂಕಿಗೆ ಒಳಗಾಗಿರುವ ಎಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಬುಧವಾರ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಉದಯ್‌ಕುಮಾರ್, ನಿರಂಜನ್, ಮುಖಂಡರಾದ ಬಿ.ಎಸ್ ಗಣೇಶ್, ಚನ್ನಪ್ಪ, ಫ್ರಾನ್ಸಿಸ್, ಶಿವಕುಮಾರ್, ರಾಮಕೃಷ್ಣೇ ಗೌಡ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.. 

ರಾಮಮಂದಿರ ಶಿಲಾನ್ಯಾಸ : ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ

ಕರಸೇವಕರಿಗೆ ಸನ್ಮಾನ, ವಿವಿಧೆಡೆ ಸಿಹಿ ಹಂಚಿಕೆ 

ಭದ್ರಾವತಿಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಭದ್ರಾವತಿ, ಆ. ೫: ದೇಶದ ಬಹುಸಂಖ್ಯಾತರ ಬಹಳ ವರ್ಷಗಳ ಕನಸು ನನಸಾಗಿಸುವ ನಿಟ್ಟಿನಲ್ಲಿ ಶ್ರೀರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಶಿಲಾನ್ಯಾಸ ನೆರವೇರಿಸಿದ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಸಲಾಯಿತು. 
ವಿವಿಧೆಡೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ನಗರದ ಬಿಜೆಪಿ ಪಕ್ಷದ ತಾಲೂಕು ಎಸ್.ಸಿ ಮೋರ್ಚಾ ಬಜರಂಗದಳ, ಕೇಸರಿಪಡೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳಿಂದ ಸಿಹಿ ಹಂಚಲಾಯಿತು. 
ಕರ ಸೇವಕರಿಗೆ ಸನ್ಮಾನ : 
೧೯೯೨ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ನೇತೃತ್ವದಲ್ಲಿ ಸುಮಾರು ೮೮ ಕರಸೇವಕರು ಆಯೋಧ್ಯೆಗೆ ತೆರಳಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನಲೆಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಸ್ಥಾನದ ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರಮುಖರಾದ  ರಾಘವೇಂದ್ರಚಾರ್, ಎಂ. ಪ್ರಭಾಕರ್, ಶಿವರಾಜ್, ಯಶೋಧ ವೀರಭದ್ರಪ್ಪ, ಜಿ. ಆನಂದಕುಮಾರ್, ಕೆ.ಎನ್ ಶ್ರೀಹರ್ಷ, ಎಚ್.ಎಲ್ ವಿಶ್ವನಾಥ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಬಿ.ಕೆ ಶ್ರೀನಾಥ್, ಕೆ.ಆರ್ ಸತೀಶ್, ಕಾ.ರಾ ನಾಗರಾಜ್, ಟಿ. ವೆಂಕಟೇಶ್, ನರಸಿಂಹಚಾರ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಶಿಲಾನ್ಯಾಸ ವೀಕ್ಷಣೆಗೆ ವ್ಯವಸ್ಥೆ: 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಕಾರ್ಯಕ್ರಮದ ನೇತೃತ್ವವನ್ನು ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ವಹಿಸಿದ್ದರು. ಪ್ರಮುಖರಾದ ತಾ.ಪಂ. ಸದಸ್ಯ ಕೆ. ಮಂಜುನಾಥ್, ಮಣಿ ಎಎನ್‌ಎಸ್, ಮಂಗೋಟೆರುದ್ರೇಶ್, ಜಿ. ಆನಂದಕುಮಾರ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ, ಶೋಭಾ, ಲತಾ ಚಂದ್ರಶೇಖರ್, ಕೇಸರಿಪಡೆ ಗಿರೀಶ್, ಬಿ.ಎಸ್ ಶ್ರೀನಾಥ ಆಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Tuesday, August 4, 2020

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ವಿವಿಧೆಡೆ ಧಾರ್ಮಿಕ ಕಾರ್ಯಕ್ರಮ

ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಭದ್ರಾವತಿ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು. 
ಭದ್ರಾವತಿ, ಆ. ೪: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗಿ ಚೇತರಿಸಿಕೊಳ್ಳುವ ಮೂಲಕ ನಾಡಿನ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಪ್ರಾರ್ಥಿಸಿ ತಾಲೂಕಿನ ಹಲವೆಡೆ ವಿವಿಧ ಸಂಘಟನೆಗಳಿಂದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 
ಶ್ರಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಶ್ರೀ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗು ಹಣ ಹೋಮ ಮತ್ತು ವಿಶೇಷ ಪೂಜೆ ಜರುಗಿತು. 
ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಕದಿರೇಶ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ಮುಖಂಡರಾದ ವಿಶ್ವನಾಥ ಕೋಠಿ, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಿ.ಎಸ್ ಶ್ರೀನಾಥ್ ಆಚಾರ್, ಹೇಮಾವತಿ, ಸುನೀತಾ, ಮಂಜುಳಾ, ಸರಸ್ವತಿ, ಅನ್ನಪೂರ್ಣ ಸಾವಂತ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. 
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಕೂಡ್ಲಿಗೆರೆ ಗ್ರಾಮದಲ್ಲಿ ವಿಶೇಷ ಪೂಜೆ: 
ತಾಲೂಕಿನ ಕೂಡ್ಲಿಗೆರೆ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಿ.ಎಸ್ ಯಡಿಯೂರಪ್ಪ ಶ್ರೀಘವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಆರ್.ಎನ್ ರುದ್ರೇಶ್, ಪ್ರದೀಪ್, ಮಂಜುನಾಥ್, ತಿರುಮಲೈ, ರುದ್ರಮುನಿ, ಜಯಣ್ಣ, ವೆಂಕಟೇಶ್, ಬಸವರಾಜ್, ಚೇತನ್, ಮಹೇಶ್ವರಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. 
ಭದ್ರಾವತಿಯಲ್ಲಿ ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ  ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು. 
ಬಿಳಿಕಿ ಮಠದಲ್ಲಿ ರುದ್ರಾಭಿಷೇಕ: 
ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಶ್ರೀ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ, ವಿಶೇಷ ಪೂಜೆ ನೆರವೇರಿಸಲಾಯಿತು. 
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ನ್ಯಾಯವಾದಿ ಸುಕುಮಾರ್, ಲೋಕೇಶ್‌ರಾವ್, ಅರ್ಜುನ್‌ರಾವ್, ಪ್ರಕಾಶ್, ಅನಂತಸ್ವಾಮಿ, ಗುರುಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಬಂಗಾರದ ಸರ ಕಿತ್ತುಕೊಂಡು ಪರಾರಿ

ಭದ್ರಾವತಿ, ಆ. ೪: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನೌಕರನೊಬ್ಬನ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. 
ಸುಮಾರು ೨೩ ವರ್ಷದ ಶಿವಮೊಗ್ಗ ವಿನೋಬನಗರ ನಿವಾಸಿ ಕೆ.ಪಿ ಪ್ರತೀಕ್ ಮಾಚೇನಹಳ್ಳಿಯಲ್ಲಿರುವ ಶಾಂತಲ ಸ್ಟೀರೋ ಕಾಸ್ಟಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮಿಷನ್ ಆಪರೇಟರ್ ಕೆಲಸ ಮಾಡುತ್ತಿದ್ದು, ಆ.೧ರ ರಾತ್ರಿ ಎರಡನೇ ಪಾಳಿ ಅಂದರೆ ಮಧ್ಯಾಹ್ನ ೩ ಗಂಟೆಯಿಂದ ರಾತ್ರಿ ೧೧ ಗಂಟೆ ವರೆಗೆ ಕೆಲಸ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕೆಇಬಿ ಕಛೇರಿ ಬಳಿ ೪ ಮಂದಿ ಅಪರಿಚಿತ ವ್ಯಕ್ತಿಗಳು ಈತನ ಕುತ್ತಿಗೆಯಲ್ಲಿದ್ದ ಸುಮಾರು ೧೬ ಗ್ರಾಂ ತೂಕದ ಸುಮಾರು ೩೩ ಸಾವಿರ ರು. ಮೌಲ್ಯದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. 
ಈ ಸಂಬಂಧ ನ್ಯೂಟೌನ್ ಪೊಲೀಸ್  ಠಾಣೆಯಲ್ಲಿ ಆ.೩ರ ಸೋಮವಾರ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

ಸೂಕ್ತ ಅಧಿಕಾರಿ ಇಲ್ಲದೆ ಮಾಜಿ ಸೈನಿಕರಿಗೆ ಸಂಕಷ್ಟ

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘ ಆರೋಪ 

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ವಿನೋದ್‌ಪೂಜಾರಿ, ಗಿರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾವತಿ, ಆ. ೪: ಮಾಜಿ ಸೈನಿಕರ ಪುನರ್ ವಸತಿ ಇಲಾಖೆಗೆ ಸಂಬಂಧಪಟ್ಟ ಮಾಹಿತಿಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸರಿಯಾದ ಮಾಹಿತಿ ಲಭ್ಯವಾಗದೆ ಇರುವುದರಿಂದ ಮಾಜಿ ಸೈನಿಕರು ಹಾಗೂ ಸೈನಿಕರ ವಿಧವಾ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ತಾಲೂಕು ಮಾಜಿ ಸೈನಿಕರ ಸಂಘ ಆರೋಪಿಸಿದೆ. 
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸೈನಿಕರು, ಸಂಘದ ಅಡಿಯಲ್ಲಿ ತಾಲೂಕಿನಲ್ಲಿ ಸುಮಾರು ೪೦೦ ಮಂದಿ ಸೇರಿದಂತೆ ಜಿಲ್ಲೆಯಲ್ಲಿ(ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಒಳಗೊಂಡು) ಒಟ್ಟು ೨೩೨೩ ಮಂದಿ ಮಾಜಿ ಸೈನಿಕರು ಹಾಗೂ ಸೈನಿಕರ ವಿಧವಾ ಕುಟುಂಬಗಳಿವೆ. ರಾಜ್ಯದಲ್ಲಿ ಸುಮಾರು ೧ ಲಕ್ಷವಿದ್ದು, ಇವರ ಕುಂದು-ಕೊರತೆಗಳಿಗೆ ಸ್ಪಂದಿಸಲು ಯಾರು ಸಹ ಇಲ್ಲದಂತಾಗಿದೆ. ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಮಂಡಳಿಯಿಂದ ಯಾವುದೇ ಸೌಲಭ್ಯಗಳು ಲಭಿಸುತ್ತಿಲ್ಲ. ಉಪನಿರ್ದೇಶಕರ ಹುದ್ದೆಗೆ ಸೈನಿಕ ಇಲಾಖೆಗೆ ಸಂಬಂಧಪಡದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದರಿಂದಾಗಿ ಸಮಸ್ಯೆಗಳು ಸರಿಯಾಗಿ ಇತ್ಯರ್ಥವಾಗುತ್ತಿಲ್ಲ ಎಂದು ದೂರಿದರು. 
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಾರ್ಷಿಕ ಸುಮಾರು ೧೦ ರಿಂದ ೧೫ ಕೋ. ರು. ಅನುದಾನ ಬಿಡುಗಡೆಯಾಗುತ್ತಿದ್ದು, ಆದರೆ ಮಂಡಳಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗದೆ ಸರ್ಕಾರಕ್ಕೆ ಹಿಂದಿರುಗಿಸಲಾಗುತ್ತಿದೆ. ಅಲ್ಲದೆ ಸೈನಿಕರ ಶಿಷ್ಯ ವೇತನ ಸುಮಾರು ೨ ಕೋ. ರು. ಬಿಡುಗಡೆಯಾಗಿದ್ದು, ಈ ಅನುದಾನ ಸಹ ಹಿಂದಿರುಗಿಸಲಾಗಿದೆ. ಇದುವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಯಾರಿಗೂ ಬಂದಿಲ್ಲ. ಈ ಕುರಿತು ಸಂಬಂಧಪಡದ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸೂಕ್ತ ಉತ್ತರ ನೀಡುತ್ತಿಲ್ಲ. ಇದರಿಂದಾಗಿ ಮಾಜಿ ಸೈನಿಕರು, ಸೈನಿಕರ ವಿಧವಾ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದರು. 
ಸೈನಿಕ ಮಂಡಳಿಗೆ ಅನುಭವ ಹೊಂದಿರುವ ಮಾಜಿ ಸೈನಿಕ ಅಧಿಕಾರಿಯನ್ನು ನೇಮಿಸಬೇಕೆಂದು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಆದರೂ ಸಹ ಯಾವುದೇ ಕ್ರಮ ಇದುವರೆಗೂ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು. 
ಸಂಘದ ಅಧ್ಯಕ್ಷ ಅಶೋಕ್, ನಿರ್ದೇಶಕ ಗಿರಿ, ಕಲಾವತಿ, ಆಶಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.