![](https://blogger.googleusercontent.com/img/b/R29vZ2xl/AVvXsEi8lnV17m_5Vbz0PG3-yixcqiVTMk1Avu7lO9XUKOs_5QmFtfi8e-8TbuUxmA_ilKxXQNBq80KC9zuxCbVyufMZYoK2YGvc-wgzp0Rbs-RDFi6sJI_OhT8pzNsw_NvN_1ZCsT75Va5YykpJ/w500-h316-rw/D18-BDVT-794468.jpg)
ಬೆಳಗಾವಿ ಜಿಲ್ಲೆಯ ಪೀರನವಾಡಿ (ಚನ್ನಪಟ್ಟಣ) ಗ್ರಾಮದಲ್ಲಿ ಆ.೧೫ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಹಾಗು ತೆರವುಗೊಳಿಸಿರುವ ಸ್ಥಳದಲ್ಲಿಯೇ ಸರ್ಕಾರವೇ ಪುನಃ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ತಾಲೂಕು ಕುರುಬರ ಸಂಘ, ಕನಕ ಯುವಪಡೆವತಿಯಿಂದ ಮಂಗಳವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಷ್ಠಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ
ಭದ್ರಾವತಿ, ಆ. ೧೮: ಬೆಳಗಾವಿ ಜಿಲ್ಲೆಯ ಪೀರನವಾಡಿ (ಚನ್ನಪಟ್ಟಣ) ಗ್ರಾಮದಲ್ಲಿ ಆ.೧೫ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಹಾಗು ತೆರವುಗೊಳಿಸಿರುವ ಸ್ಥಳದಲ್ಲಿಯೇ ಸರ್ಕಾರವೇ ಪುನಃ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘ, ಕನಕ ಯುವಪಡೆವತಿಯಿಂದ ಮಂಗಳವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ವೀರ ಮರಣ ಹೊಂದಿದ ಅಪ್ರತಿಮ ನಾಯಕನಾಗಿದ್ದು, ಸಮಾಜದ ಎಲ್ಲರನ್ನು ಸಂಘಟಿಸಿ ಜಾತ್ಯಾತೀತವಾಗಿ ಹೋರಾಟ ನಡೆಸುವ ಮೂಲಕ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಇಂತಹ ಮಹಾನ್ ಆದರ್ಶ ವ್ಯಕ್ತಿ ಆ.೧೫ರಂದು ಜನ್ಮತಾಳಿರುವುದು ಈ ನಾಡಿನ ಸೌಭಾಗ್ಯವಾಗಿದೆ. ಅವರ ಹುಟ್ಟುಹಬ್ಬದ ದಿನದಂದು ಪ್ರತಿಮೆ ಸ್ಥಳಾಂತರ ಮಾಡಿರುವುದು ಕೇವಲ ಕುರುಬ ಸಮಾಜಕ್ಕೆ ಮಾಡಿರುವ ಅವಮಾನವಲ್ಲ. ಇಡೀ ದೇಶದ ಜನರಿಗೆ ಮಾಡಿರುವ ಅವಮಾನವಾಗಿದೆ. ಈ ದುರ್ಘಟನೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ತಕ್ಷಣ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ಸರ್ಕಾರವೇ ಪ್ರತಿಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ಅಲ್ಲಿನ ಜಿಲ್ಲಾಡಳಿತಕ್ಕೆ ಸೂಚಿಸಬೇಕು. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಶಾಲಾ ಪಠ್ಯ ಪುಸ್ತಕಗಳಲ್ಲಿ ಸಂಗೊಳ್ಳಿ ರಾಯಣ್ಣರವರ ಹೆಸರು ತೆಗೆದು ಹಾಕುವ ಹುನ್ನಾರಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಹೆಸರನ್ನು ಕೈಬಿಡಬಾರದು ಶಾಶ್ವತವಾಗಿ ಹೆಸರನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ತಾಲೂಕು ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸಂತೋಷ್, ಉಪಾಧ್ಯಕ್ಷ ಸಣ್ಣಯ್ಯ, ಕಾರ್ಯದರ್ಶಿ ರಾಜೇಶ್, ಖಜಾಂಚಿ ವಸಂತ, ನಿರ್ದೇಶಕರಾದ ಮಂಜುನಾಥ್, ಯೋಗಾನಂದ, ರಾಜಪ್ಪ, ಸತ್ಯ(ಕೋಡಿಹಳ್ಳಿ), ಕನಕ ಯುವಪಡೆ ಅಧ್ಯಕ್ಷ ಜೆ. ಕುಮಾರ, ಜಿ. ವಿನೋದ್ಕುಮಾರ್, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಕೇಸರಿ ಪಡೆ ಗಿರೀಶ್, ಮಂಜುನಾಥ್ ಕೊಯ್ಲಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.