ಪ್ರಮುಖ ಸಂಘಟನೆಗಳಿಂದ ಮಾತ್ರ ಮೂರ್ತಿ ಪ್ರತಿಷ್ಠಾಪನೆ
ಭದ್ರಾವತಿ ಹೊಸಮನೆಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.
ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ ಮಾಧವಚಾರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಭದ್ರಾವತಿ ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.
ಭದ್ರಾವತಿ ಕಾಗದನಗರದ ೬ನೇ ವಾರ್ಡಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಘಂಟೆ ಗಣಪತಿ ಆಕರ್ಷಕವಾಗಿ ಕಂಡು ಬಂದಿತು.
ಭದ್ರಾವತಿ ಎನ್ಎಂಸಿ ಸಂತೆ ಮೈದಾನದ ಬಳಿ ಯುವಕರ ಸಂಘಟನೆಯೊಂದು ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿ.
ಭದ್ರಾವತಿ ಹೊಸಮನೆ ಮುಖ್ಯರಸ್ತೆಯಲ್ಲಿ ಭೋವಿ ಕಾಲೋನಿ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಭಾರಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.
ಭದ್ರಾವತಿ ಹಳೇನಗರದ ಶ್ರೀ ಕೋಟೆ ಬಸವಣ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಮ್ಮ ಭಕ್ತರ ಗಮನ ಸೆಳೆಯಿತು.
ಭದ್ರಾವತಿ ಜೆಪಿಎಸ್ ಕಾಲೋನಿಯಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.
ಭದ್ರಾವತಿ: ಕೊರೋನಾ ಭೀತಿ ನಡುವೆಯೂ ಈ ಬಾರಿ ನಗರದಲ್ಲಿ ಗೌರಿ-ಗಣೇಶ ಹಬ್ಬ ಯಶಸ್ವಿಯಾಗಿ ಜರುಗಿತು.
ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ದಿನ ದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೆಡೆ ಆತಂಕದ ವಾತಾರಣ ನಿರ್ಮಾಣಗೊಂಡಿದ್ದು, ಮತ್ತೊಂದೆಡೆ ದೈನಂದಿನ ಬದುಕು ಯಥಾಸ್ಥಿತಿಗೆ ಬಾರದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಹಬ್ಬ ಹರಿದಿನಗಳು ಆಡಂಬರವಿಲ್ಲದೆ ಬಂದು ಹೋಗುತ್ತಿವೆ.
ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶ ಹಬ್ಬ ಈ ಬಾರಿ ಸದ್ದು-ಗದ್ದಲವಿಲ್ಲದೆ ನಡೆದು ಹೋಗಿದೆ. ರಾಜ್ಯ ಸರ್ಕಾರ ಹಬ್ಬ ಆಚರಣೆಗೆ ಅನುಮತಿ ನೀಡಿದ ನಂತರ ಅದರಲ್ಲೂ ಸಾರ್ವಜನಿಕ .,ಳಗಳಲ್ಲಿ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ನಂತರ ತರಾತುರಿಯಲ್ಲಿ ಪ್ರತಿಷ್ಠಾಪನೆ ನಡೆದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಹಲವು ಮಾರ್ಗಸೂಚಿಗಳೊಂದಿಗೆ ಗೌರಿ-ಗಣೇಶ ಹಬ್ಬಕ್ಕೆ ಸರ್ಕಾರ ಕೊನೆ ಘಳಿಗೆಯಲ್ಲಿ ಅನುಮತಿ ನೀಡಿದ ಹಿನ್ನಲೆಯಲ್ಲಿ ಬಹಳಷ್ಟು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡದೆ ಈ ಬಾರಿ ಆಚರಣೆಯಿಂದ ಹಿಂದೆ ಸರಿದಿರುವುದು ಕಂಡು ಬಂದಿತು. ಕೆಲವು ಪ್ರತಿಷ್ಠಿತ ಸಂಘಟನೆಗಳು ಮಾತ್ರ ಮೂರ್ತಿ ಪ್ರತಿಷ್ಠಾಪನೆ ಮಾಡಿ ರಾತ್ರಿ ವೇಳೆಗೆ ವಿಸರ್ಜನೆಯೊಂದಿಗೆ ಆಚರಣೆ ಮುಕ್ತಾಯಗೊಳಿಸಿದವು. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅತಿ ಕಡಿಮೆ ಸಂಖ್ಯೆಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಹೊಸಮನೆ ಭಾಗದಲ್ಲಿ ಬಹುಮುಖ್ಯ ಸಂಘಟನೆಗಳಾದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ, ಬೋವಿಕಾಲೋನಿ ವಿನಾಯಕ ಸೇವಾ ಸಮಿತಿ, ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
ಉಳಿದಂತೆ ಮಾಧವಚಾರ್ ವೃತ್ತದಲ್ಲಿ ವಿನಾಯಕ ಸೇವಾ ಸಮಿತಿ, ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ, ಜನ್ನಾಪುರ ಭಾಗದಲ್ಲಿ ರಾಮರಾಜ್ಯ ಸಂಘಟನೆ ಹಾಗು ವಿದ್ಯಾಮಂದಿರ ಬಳಿ ಶ್ರೀರಾಮ ಹಿಂದೂ ವಿನಾಯಕ ಸೇವಾ ಸಮಿತಿ, ಎಸ್ಎವಿ ವಿದ್ಯಾಸಂಸ್ಥೆ ಬಳಿ ಶ್ರೀರಾಮ ವಿನಾಯಕ ಸೇವಾ ಸಮಿತಿ, ಜೆಪಿಎಸ್ ಕಾಲೋನಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ, ಕಾಗದನಗರದ ೬ನೇ ವಾರ್ಡ್ ಮತ್ತು ಶ್ರೀರಾಮ ದೇವಾಲಯದ ಮುಂಭಾಗದಲ್ಲಿ ವಿನಾಯಕ ಸೇವಾ ಸಮಿತಿವತಿಯಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
ಮನೆ ಮನೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಮಾರುಕಟ್ಟೆಗಳಿಗೆ ಬಂದು ಖರೀದಿಸಿ ಕೊಂಡ್ಯೊಯ್ದರು. ಆಯಾಕಟ್ಟಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.