ಬ್ಯಾಂಕ್ ಆಫ್ ಬರೋಡ ಶಾಖಾ ಕಛೇರಿ ವ್ಯವಸ್ಥಾಪಕರಿಗೆ ಮನವಿ
![](https://blogger.googleusercontent.com/img/b/R29vZ2xl/AVvXsEgcQaPQvFTra_MFMYmmrJSYNaFTl6eZc-xLJDfwMhNmWSC_xvpkSDUbDrKU7AoDZdB1SNWQ9IKQeVGz8nmKOGi7qjOW2LGwPWmEwOVWKSi4we_E1ns8R5mwi9z1zKugi4B9c8SW8h7TCetG/s320-rw/D24-BDVT3-703402.jpg)
ಭದ್ರಾವತಿ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವ ಮೂಲಕ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೪: ನಗರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವ ಮೂಲಕ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಬ್ಯಾಂಕಿನ ನಾಮಫಲಕ ಹಾಗು ಎಲ್ಲಾ ವ್ಯವಹಾರಗಳು ಕನ್ನಡ ಭಾಷೆಯಲ್ಲಿ ನಡೆಯಬೇಕು. ಠೇವಣಿ ತೆರೆಯುವ ಅರ್ಜಿ, ಎಟಿಎಂ ಯಂತ್ರದಲ್ಲಿ ಹಾಗು ಇನ್ನಿತರೆ ಅರ್ಜಿ ನಮೂನೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳು ನಮೂದಾಗಿದ್ದು, ಈ ಎಲ್ಲಾ ನಮೂನೆ ಹಾಗು ಹಣ ತೆಗೆಯುವ ಯಂತ್ರದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಬ್ಯಾಂಕಿನಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಲಾಗಿದೆ.
ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಗ್ರಾಹಕರು ಹಾಗು ಇನ್ನಿತರೆ ವ್ಯವಹಾರಗಳನ್ನು ನಡೆಸಲು ಬ್ಯಾಂಕಿಗೆ ಬರುವವರಿಗೆ ಹಿಂದಿ ಹಾಗು ಆಂಗ್ಲ ಭಾಷೆಗಳು ಸರಿಯಾಗಿ ಅರ್ಥವಾಗದೆ ವ್ಯವಹಾರ ನಡೆಸಲು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅರ್ಜಿ ನಮೂನೆಗಳು, ಎಲ್ಲಾ ವ್ಯವಹಾರಗಳು ಕನ್ನಡದಲ್ಲಿ ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
ಕರಾವೇ ತಾಲೂಕು ಶಾಖೆ ಅಧ್ಯಕ್ಷ ಬಿ.ವಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಜಿ. ಮಂಜುನಾಥ್, ಕಾರ್ಯದರ್ಶಿ ಎ. ಸಂದೇಶ್ಕುಮಾರ್, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.