Saturday, October 10, 2020

ಅಂಗಡಿ ಮುಂಗಟ್ಟು ಜಲಾವೃತ : ಸೂಕ್ತ ಕ್ರಮಕ್ಕೆ ಮನವಿ

ಭದ್ರಾವತಿನಗರಸಭೆ ವ್ಯಾಪ್ತಿಯ ಭೂತನಗುಡಿ ಮತ್ತು ಎನ್‌ಎಸ್‌ಟಿ ಭಾಗದ ರಸ್ತೆಗಳಚರಂಡಿಗಳಲ್ಲಿ ನೀರು ತುಂಬಿಕೊಂಡು ಮನೆಹಾಗು ಅಂಗಡಿ ಮುಂಗಟ್ಟುಗಳು ಸಹಜಲಾವೃತಗೊಳ್ಳುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆಆಗ್ರಹಿಸಿ ರಾಮ್ ಸೇನಾ ಕರ್ನಾಟಕವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿಸಲ್ಲಿಸಲಾಯಿತು.
ಭದ್ರಾವತಿ: ಕಳೆದ ಕೆಲವುದಿನಗಳಿಂದ ಸಂಜೆ ವೇಳೆ ಸುರಿಯುತ್ತಿರುವಮಳೆಯಿಂದಾಗಿ ನಗರಸಭೆ ವ್ಯಾಪ್ತಿಯ ಭೂತನಗುಡಿಮತ್ತು ಎನ್‌ಎಸ್‌ಟಿಭಾಗದ ರಸ್ತೆಗಳ ಚರಂಡಿಗಳಲ್ಲಿ ನೀರುತುಂಬಿಕೊಂಡು ಮನೆ ಹಾಗು ಅಂಗಡಿಮುಂಗಟ್ಟುಗಳು ಸಹ ಜಲಾವೃತಗೊಳ್ಳುತ್ತಿದ್ದು, ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಮ್ ಸೇನಾ ಕರ್ನಾಟಕವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿಸಲ್ಲಿಸಲಾಯಿತು.
   ಕಳೆದ ೩-೪ವರ್ಷಗಳಿಂದ ಇದೆ ರೀತಿ ಸಮಸ್ಯೆಎದುರಾಗುತ್ತಿದ್ದು, ಮಳೆಗಾಲದಲ್ಲಿ ನೀರು ಚರಂಡಿಗಳಲ್ಲಿ ಸರಾಗವಾಗಿಹರಿಯದೆ ನಿಂತುಕೊಳ್ಳುತ್ತಿದೆ. ಇದರಿಂದಾಗಿ ಮನೆಗಳು ಜಲಾವೃತ್ತಗೊಂಡು ನಿವಾಸಿಗಳುಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ರಾಮ್ಸೇನಾ ಕರ್ನಾಟಕ ವತಿಯಿಂದ ಸ್ಥಳಪರಿಶೀಲನೆ ನಡೆಸಿ ನಿವಾಸಿಗಳ ಸಮಸ್ಯೆಗಳನ್ನುಆಲಿಸುವ ಜೊತೆಗೆ ಸಹಿ ಸಂಗ್ರಹಿಸಲಾಗಿದೆ. ತಕ್ಷಣ ಸಮಸ್ಯೆ ಬಗೆಹರಿಸುವಂತೆ ಕೋರಲಾಗಿದೆ.
   ರಾಮ್ ಸೇನಾ ಕರ್ನಾಟಕಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್, ತಾಲೂಕು ಅಧ್ಯಕ್ಷಎಂ. ಸಚಿನ್ ವರ್ಣೇಕರ್, ಎಸ್.ಎನ್ ಶ್ರೀನಿವಾಸ್, ರಾಜುಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಛಾಯಾಗ್ರಾಹಕರಿಂದ ಮನವಿ


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘದವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ತಾಲೂಕು ಛಾಯಾಗ್ರಾಹಕರ ಸಂಘದವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
      ಕೋವಿಡ್-೧೯ರ ಹಿನ್ನಲೆಯಲ್ಲಿಸಂಕಷ್ಟಕ್ಕೆ ಒಳಗಾಗಿರುವ ವೃತ್ತಿ ಬಾಂಧವರಿಗೆ ವಿಶೇಷಪ್ಯಾಕೇಜ್ ಘೋಷಿಸಬೇಕು. ಕಾರ್ಮಿಕ ಇಲಾಖೆಯ ವಿವಿಧಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಸ್ಮಾರ್ಟ್‌ಕಾರ್ಡ್ನೀಡುವುದು. ಛಾಯಾಗ್ರಾಹಕರ ಆಕಾಡೆಮಿ ಸ್ಥಾಪಿಸುವುದು. ಕೆ.ಪಿ.ಎ ಛಾಯಾಭವನಕ್ಕೆ ನಿವೇಶನ ಒದಗಿಸುವುದು. ಸರ್ಕಾರದವಿವಿಧ ಇಲಾಖೆಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಛಾಯಾಚಿತ್ರತೆಗೆಯುವುದನ್ನು ತಕ್ಷಣ ನಿಷೇಧಿಸುವುದು. ವೃತ್ತಿಭದ್ರತೆ, ಜೀವನ ಭದ್ರತೆ ಒದಗಿಸುವುದುಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಮನವಿಯಲ್ಲಿ ಒತ್ತಾಯಿಸಲಾಗಿದೆ.
   ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಒತ್ತಾಯಿಸಿ ಅ.೩೧ರಂದು ರಾಜ್ಯಾದ್ಯಂತಕೇಂದ್ರ ಹಾಗು ರಾಜ್ಯ ಸರ್ಕಾರದವಿರುದ್ಧ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆಯನ್ನುಬೆಂಗಳೂರಿನ ಫ್ರೀಡಂ ಪಾರ್ಕ್ ಉದ್ಯಾನವನದಲ್ಲಿಹಮ್ಮಿಕೊಳ್ಳಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
  ಸಂಘದ ಅಧ್ಯಕ್ಷ ಎಚ್. ರಾಮೃಕೃಷ್ಣ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಉಪಾಧ್ಯಕ್ಷಎಸ್.ಡಿ ಪ್ರಕಾಶ್, ಕಾರ್ಯದರ್ಶಿಎಸ್.ಜಿ ಸಿದ್ದಪ್ಪ, ಖಜಾಂಚಿರೇಣುಕಯ್ಯ, ನಿರ್ದೇಶಕರಾದ ಜೆ. ಕುಮಾರ್, ಎಚ್.ಆರ್ ಸುರೇಶ್, ವಡಿವೇಲು, ಪಾಪಣ್ಣ, ಶಿವಾನಂದ ಸೇರಿದಂತೆ ಇನ್ನಿತರರುಉಪಸ್ಥಿತರಿದ್ದರು.

ದಲಿತ ಯುವತಿ ಮೇಲೆ ಅತ್ಯಾಚಾರಘಟನೆ : ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಆಗ್ರಹ


ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ೧೯ ವರ್ಷದ ದಲಿತ ಯುವತಿಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಘಟನೆಯನ್ನುಖಂಡಿಸಿ ಕರ್ನಾಟಕ ದಲಿತ ಸಂಘರ್ಷಸಮಿತಿ ವತಿಯಿಂದ ರಾಜ್ಯ ಸಂಚಾಲಕಎಂ. ಗುರುಮೂರ್ತಿ ನೇತೃತ್ವದಲ್ಲಿ ಶುಕ್ರವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ: ಉತ್ತರ ಪ್ರದೇಶದಹತ್ರಾಸ್‌ನಲ್ಲಿ ೧೯ ವರ್ಷದದಲಿತ ಯುವತಿ ಮೇಲೆ ನಡೆದಿರುವಸಾಮೂಹಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತಸಂಘರ್ಷ ಸಮಿತಿ ವತಿಯಿಂದ ರಾಜ್ಯಸಂಚಾಲಕ ಎಂ. ಗುರುಮೂರ್ತಿ ನೇತೃತ್ವದಲ್ಲಿಶುಕ್ರವಾರ ತಾಲೂಕು ಕಛೇರಿ ಮುಂಭಾಗಪ್ರತಿಭಟನೆ ನಡೆಸಲಾಯಿತು.
       ಎಂ. ಗುರುಮೂರ್ತಿ ಮಾತನಾಡಿ, ದೇಶದಲ್ಲಿ ಮೇಲ್ವರ್ಗದವರ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗುತ್ತಿದೆ. ಅದರಲ್ಲೂ ದಲಿತರನ್ನು ಶೋಷಿಸಲಾಗುತ್ತಿದ್ದು, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಪ್ರಕರಣಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶದಲ್ಲಿ ದಲಿತರುಅತಿ ಹೆಚ್ಚು ಶೋಷಣೆಗೆ ಒಳಾಗುತ್ತಿದ್ದು, ಯುವತಿಯ ಮೇಲೆ ನಡೆದಿರುವ ಅತ್ಯಾಚಾರಘಟನೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ತಕ್ಷಣತಪ್ಪಿತಸ್ಥ ಅತ್ಯಾಚಾರಿಗಳ ನಾಲಿಗೆ ಕತ್ತರಿಸಿ ಮತ್ತುಬೆನ್ನುಮೂಳೆ ಮುರಿದು ಗಲ್ಲು ಶಿಕ್ಷೆವಿಧಿಸಬೇಕೆಂದು ಆಗ್ರಹಿಸಲಾಯಿತು.
         ಪ್ರತಿಭಟನೆಯಲ್ಲಿ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷಶಿವಬಸಪ್ಪ, ಡಿಎಸ್‌ಎಸ್ ತಾಲೂಕುಸಂಚಾಲಕ ವಿ. ವಿನೋದ್, ಜಿಲ್ಲಾಸಂಚಾಲಕರಾದ ಎ. ಅರ್ಜಿನ್, ಎಂ. ಏಳುಕೋಟಿ, ಏಳುಮಲೈ, ಸುವರ್ಣಮ್ಮ, ಬಿ. ಕೃಷ್ಣಪ್ಪ, ಯು. ಮಹಾದೇವಪ್ಪ, ಸಿ. ಚನ್ನಪ್ಪ, ಆರ್. ತಮ್ಮಯ್ಯ ಸೇರಿದಂತೆಇನ್ನಿತರರು ಪಾಲ್ಗೊಂಡಿದ್ದರು.

Thursday, October 8, 2020

ಎಸ್‌ಬಿಐ ನವೀಕೃತಗೊಂಡ ಶಾಖಾ ಕಛೇರಿ ಉದ್ಘಾಟನೆ


ದೇಶದ ಬಹುದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಗರದ ಪ್ರಧಾನ ಶಾಖಾ ಕಛೇರಿಯ ನವೀಕೃತಗೊಂಡ ಕಟ್ಟಡ ಉದ್ಘಾಟನೆ ಗುರುವಾರ ನಡೆಯಿತು.
ಭದ್ರಾವತಿ, ಅ. ೮:  ದೇಶದ ಬಹುದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಗರದ ಪ್ರಧಾನ ಶಾಖಾ ಕಛೇರಿಯ ನವೀಕೃತಗೊಂಡ ಕಟ್ಟಡ ಉದ್ಘಾಟನೆ ಗುರುವಾರ ನಡೆಯಿತು.
     ನಗರದ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಶಾಖಾ ಕಛೇರಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಸ್ಟೇಟ್ ಬ್ಯಾಂಕ್ ಮೈಸೂರು ಕೆಲವು ವರ್ಷಗಳ ಹಿಂದೆ ಸ್ಟೇಟ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನಗೊಂಡ ಹಿನ್ನಲೆಯಲ್ಲಿ ಶಿಥಿಲಗೊಂಡ ಕಟ್ಟಡವನ್ನು ನವೀಕರಣಗೊಳಿಸುವ ಕಾರ್ಯ ಕೈಗೊಳ್ಳಲಾಗಿತ್ತು.
     ನವೀಕೃತಗೊಂಡ ಕಟ್ಟಡವನ್ನು ಆರ್.ಬಿ.ಓ-೪, ಎ.ಓ-೬, ಶಿವಮೊಗ್ಗ ವಲಯ ವ್ಯವಸ್ಥಾಪಕ ಟಿ. ರಾಮರಾವ್ ಉದ್ಘಾಟಿಸಿದರು. ನವೀಕೃತಗೊಂಡ ಕಚೇರಿಯಲ್ಲಿ ಗ್ರಾಹಕರಿಗೆ ಅಗತ್ಯವಿರುವ ಎಲ್ಲಾ ಸೇವೆಗಳನ್ನು ಒದಗಿಸುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಬ್ಯಾಂಕಿನ ಸಿಬ್ಬಂದಿಗಳು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು, ಗ್ರಾಹಕರು ಸೇರಿದಂತೆ ಎಲ್ಲರೂ ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಬೇಕೆಂದು ರಾಮರಾವ್ ಮನವಿ ಮಾಡಿದರು.
      ವಿಐಎಸ್‌ಎಲ್ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್, ಬ್ಯಾಂಕಿನ ಉಪ ವ್ಯವಸ್ಥಾಪಕ ನಾಗರಾಜ್, ಸಿಬ್ಬಂದಿಗಳಾದ ಹೇಮಂತ್, ಸೂರಜ್, ಸರಸ, ಗೀತಾಂಜಲಿ, ರಾಘವೇಂದ್ರ ಗಡ್ಕರ್, ರಮೇಶ್, ಉಮೇಶ್‌ನಾಯ್ಕ್, ಸುಶ್ಮಿತಾ ಭಟ್, ಸುರೇಶ್‌ಕುಮಾರ್, ಭದ್ರತಾ ಸಿಬ್ಬಂದಿಗಳಾದ ಸಂಪತ್, ಗುರುರಾಜ್, ವಿನೋದ್, ಗ್ರಾಹಕರಾದ ದಾಮೋದರ ಬಾಳಿಗ, ಕೆ.ಸಿ ವೀರಭದ್ರಪ್ಪ, ತೀರ್ಥಪ್ಪ ಸೇರಿದಂತೆ ಉಪಸ್ಥಿತರಿದ್ದರು.

ಹತ್ರಾಸ್ ಅತ್ಯಾಚಾರ ಘಟನೆಗೆ ಎಸ್‌ಡಿಪಿಐ ಖಂಡನೆ :

ಉತ್ತರ ಪ್ರದೇಶ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಘಟನೆಯನ್ನು ಖಂಡಿಸಿ ಗುರುವಾರ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮುಂಭಾಗ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೮: ಕೇಂದ್ರ ಹಾಗು ಉತ್ತರ ಪ್ರದೇಶ ಸರ್ಕಾರಗಳು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿವೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಮುಖಂಡರು ಆರೋಪಿಸಿದರು.
     ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಘಟನೆಯನ್ನು ಖಂಡಿಸಿ ಗುರುವಾರ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವ ನೆಪದಲ್ಲಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯ ರಕ್ಷಣೆ ನೀಡದಿರುವುದು ವಿಪರ್ಯಾಸದ ಸಂಗತಿಯಾಗಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ರಕ್ಷಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ದೇಶದಲ್ಲಿ ಒಂದು ಕೆಟ್ಟ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
        ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯದರ್ಶಿ ಮಹಮ್ಮದ್ ಗೌಸ್, ಸದಸ್ಯರಾದ ಇಮ್ರಾನ್ ಖಾನ್, ಫೈರೋಜ್, ಮುಸ್ವೀರ್ ಬಾಷಾ, ಮತೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Wednesday, October 7, 2020

ಡೇ ನಲ್ಮ್ ಯೋಜನೆ ಸದುಪಯೋಗ ಪಡೆದುಕೊಳ್ಳಲು ಕರೆ

2019-2020ನೇ ಸಾಲಿನ ತರಬೇತಿ ಉದ್ಘಾಟನೆ

ಭದ್ರಾವತಿ ನ್ಯೂಟೌನ್ ಜೆಟಿಎಸ್ ಶಾಲೆ ಸಮೀಪದಲ್ಲಿರುವ ಶುಗರ್‌ಟೌನ್ ಲಯನ್ಸ್ ಕ್ಲಬ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಡೇ ನಲ್ಮ್ ವಿಭಾಗದ ವತಿಯಿಂದ ಫೇಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ 2019-2020ನೇ ಸಾಲಿನ ಡೇ ನಲ್ಮ್ ಯೋಜನೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಭದ್ರಾವತಿ, ಅ. ೭: ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಧ್ಯಮ ಹಾಗು ಕಡು ಬಡ ಕುಟುಂಬದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನೆರವಾಗುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಡೇ ನಲ್ಮ್ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಮೂಲಕ ಕೌಶಲ್ಯ ತರಬೇತಿ, ಸಮುದಾಯ ಸಂಘಟನೆಗಳ ಬಲವರ್ಧನೆಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಈಶ್ವರಪ್ಪ ತಿಳಿಸಿದರು.
     ಅವರು ನ್ಯೂಟೌನ್ ಜೆಟಿಎಸ್ ಶಾಲೆ ಸಮೀಪದಲ್ಲಿರುವ ಶುಗರ್‌ಟೌನ್ ಲಯನ್ಸ್ ಕ್ಲಬ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಡೇ ನಲ್ಮ್ ವಿಭಾಗದ ವತಿಯಿಂದ ಫೇಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ 2019-2020ನೇ ಸಾಲಿನ ಡೇ ನಲ್ಮ್ ಯೋಜನೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
       ಈ ಹಿಂದೆ ಗ್ರಾಮೀಣ ಭಾಗದಲ್ಲಿ ಹಲವು ಸಮಸ್ಯೆಗಳ ಪರಿಣಾಮ ನಿರುದ್ಯೋಗ ಹೆಚ್ಚಾಗಿ ಕಂಡು ಬರುತ್ತಿತ್ತು. ಈ ಹಿನ್ನಲೆಯಲ್ಲಿ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಿ ಹಲವು ಯೋಜನೆಗಳನ್ನು ಜಾರಿಗೆತರಲಾಗಿತ್ತು. ನಂತರದ ದಿನಗಳಲ್ಲಿ ನಗರ ವ್ಯಾಪ್ತಿಯಲ್ಲೂ ಉದ್ಯೋಗ ಸಮಸ್ಯೆಗಳು ಹೆಚ್ಚಾದ ಹಿನ್ನಲೆಯಲ್ಲಿ ನಲ್ಮ್ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲ ಉದ್ದೇಶವನ್ನು ಅರಿತುಕೊಂಡು ಇದರ ಸದುಪಯೋಗಪಡೆದುಕೊಂಡವರು ಇತರರಿಗೂ ತಿಳಿಸಬೇಕೆಂದು ಮನವಿ ಮಾಡಿದರು.
      ಹಿರಿಯ ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಮಾತನಾಡಿ, ಪ್ರಸ್ತುತ ಪ್ರತಿಯೊಬ್ಬರಿಗೂ ಉದ್ಯೋಗದ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ನಮ್ಮಲ್ಲಿನ ಕೌಶಲ್ಯಗಳನ್ನು ಅರಿತುಕೊಂಡು ಮುನ್ನಡೆಯಬೇಕು. ಈ ನಿಟ್ಟಿನಲ್ಲಿ ನೆರವಾಗಲು ಈ ರೀತಿಯ ಯೋಜನೆಗಳು ಸಹಕಾರಿಯಾಗಿವೆ. ಮಧ್ಯಮ ಹಾಗು ಬಡ ವರ್ಗದ ಕುಟುಂಬದ ನಿರುದ್ಯೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
     ಫೇಸ್ ಕಂಪ್ಯೂಟರ್ ಮುಖ್ಯಸ್ಥ ಅಬಿದಾಲಿ ಮಾತನಾಡಿ, ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ. ಕಂಪ್ಯೂಟರ್ ತರಬೇತಿ ಪಡೆದವರು ಯಾವುದೇ ಕೆಲಸವನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ. ಈ ಹಿನ್ನಲೆಯಲ್ಲಿ ಕಂಪ್ಯೂಟರ್ ತರಬೇತಿಯನ್ನು ಪ್ರತಿಯೊಬ್ಬರು ಪಡೆಯಬೇಕೆಂದರು.
     ವೇದಿಕೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿ ಸುಮಿತ್ರ ಎಚ್. ಹರಪನಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹೃದಯ ಶ್ರೀಮಂತಿಕೆ ವ್ಯಕ್ತಿಗಳಿಂದ ಯಾವುದೇ ಕಾರ್ಯ ಯಶಸ್ವಿ : ಅಪೇಕ್ಷ ಮಂಜುನಾಥ್

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಎಸ್. ಶ್ರೀನಿವಾಸ್ ದತ್ತಿ ದಾನಿಗಳ ಸಹಕಾರದೊಂದಿಗೆ ಮನೋಜ್ ದತ್ತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಂಧ ಮಕ್ಕಳಿಂದ ಸುಗಮ ಸಂಗೀತ ಹಾಗು ಗಾನಗಾರುಡಿಗ ಡಾ. ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ನುಡಿ ನಮನವನ್ನು ಉದ್ಯಮಿ ಎನ್. ಪ್ರಕಾಶ್‌ಕುಮಾರ್ ಉದ್ಘಾಟಿಸಿದರು.
ಭದ್ರಾವತಿ, ಅ. ೭: ಹೃದಯ ಶ್ರೀಮಂತಿಕೆ ವ್ಯಕ್ತಿಗಳಿಂದ ಮಾತ್ರ ಯಾವುದೇ ಕಾರ್ಯ ಯಶಸ್ವಿಯಾಗಿ ನಡೆಯುತ್ತದೆ. ಈ ಹಿನ್ನಲೆಯಲ್ಲಿ ಅಂತಹ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಹೇಳಿದರು.
       ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಎಸ್. ಶ್ರೀನಿವಾಸ್ ದತ್ತಿ ದಾನಿಗಳ ಸಹಕಾರದೊಂದಿಗೆ ಮನೋಜ್ ದತ್ತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಂಧ ಮಕ್ಕಳಿಂದ ಸುಗಮ ಸಂಗೀತ ಹಾಗು ಗಾನಗಾರುಡಿಗ ಡಾ. ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ನುಡಿ ನಮನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಪರಿಷತ್ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಪ್ರತಿಯೊಂದು ಕಾರ್ಯಕ್ರಮ ಸಹ ಒಂದೊಂದು ವಿಶೇಷತೆಯಿಂದ ಕೂಡಿವೆ. ಅಂಧ ವಿಕಲಚೇತನರೊಂದಿಗೆ ಕಾರ್ಯಕ್ರಮ ಆಯೋಜಿಸಿರುವುದು ತುಂಬ ಸಂತೋಷವನ್ನುಂಟು ಮಾಡಿದೆ.  ಕಾರ್ಯಕ್ರಮ ಆಯೋಜನೆ ಮಾಡುವಲ್ಲಿ ಉದ್ಯಮಿ ಎನ್, ಪ್ರಕಾಶ್‌ಕುಮಾರ್‌ರವರ ಸಹಕಾರ ಹೆಚ್ಚಿನದ್ದಾಗಿದೆ.  ಹೃದಯ ಶ್ರೀಮಂತಿಕೆಗೆ ಹೆಚ್ಚಿನ ಮಹತ್ವ ನೀಡುವ ಅವರ ಗುಣ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳಿಂದ ವಿಕಲಚೇತನರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
      ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಮಾತನಾಡಿ, ಪರಿಷತ್ ವತಿಯಿಂದ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತಷ್ಟು ಪ್ರಜ್ವಲಗೊಳಿಸುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಅಂಧರ ಕೇಂದ್ರದಲ್ಲೂ ಹಲವಾರು ಕಾರ್ಯಕ್ರಮಗಳನ್ನು ಪರಿಷತ್ ಆಯೋಜಿಸಿಕೊಂಡು ಬರುತ್ತಿದೆ. ಇಂದಿನ ಕಾರ್ಯಕ್ರಮ ಅಂಧರ ಕೇಂದ್ರಕ್ಕೆ ಮತ್ತಷ್ಟು ಸ್ಪೂರ್ತಿಯನ್ನುಂಟು ಮಾಡಿದೆ ಎಂದರು.
      ಆಡಳಿತಾಧಿಕಾರಿ ಶಾರದ ಶಿವಬಸಪ್ಪ, ಕಸಾಪ ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿಗಳಾದ ಚನ್ನಪ್ಪ, ವೈ.ಕೆ ಹನುಮಂತಯ್ಯ ಹಾಗು ಸಂಚಾಲಕ ಚಂದ್ರಶೇಖರಪ್ಪ ಚಕ್ರಸಾಲಿ, ಗೌರಿ ಗ್ಯಾಸ್‌ನ ಸೆಲ್ವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.