Thursday, November 5, 2020

ಗೃಹರಕ್ಷಕ ಅಧಿಕಾರಿಗಳ ತರಬೇತಿ ಜೆ. ಹೇಮಂತರಾಮನ್‌ಗೆ ಚಿನ್ನದ ಪದಕ

ಪ್ರಶಸ್ತಿ ಪತ್ರ, ಪದಕದೊಂದಿಗೆ ಜೆ. ಹೇಮಂತರಾಮನ್
ಭದ್ರಾವತಿ, ನ. ೫: ಬೆಂಗಳೂರಿನ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ಅ.೧೦ರಿಂದ ನ.೪ರವರೆಗೆ ನಡೆದ "ಗೃಹರಕ್ಷಕರ ಅಧಿಕಾರಿಗಳ ತರಬೇತಿ"ಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರತಿನಿಧಿಸಿದ್ದ ಭದ್ರಾವತಿ ಘಟಕದ ಗೃಹರಕ್ಷಕ ಜೆ. ಹೇಮಂತರಾಮನ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
      ಹೇಮಂತರಾಮನ್ ಈ ಹಿಂದೆ ಸಹ ಹಲವಾರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟ ಎಸ್. ಶಿವಕುಮಾರ್, ಜಿಲ್ಲಾ ಸಹಾಯಕ ಬೋಧಕ ಎಚ್. ದಿನೇಶ್, ಭದ್ರಾವತಿ ಪ್ರಭಾರ ಘಟಕಾಧಿಕಾರಿ ಜಗದೀಶ್, ಎನ್.ಸಿ.ಓ ಅಧಿಕಾರಿಗಳು, ಘಟಕದ ಎಲ್ಲಾ ಗೃಹರಕ್ಷಕ ಸದಸ್ಯರುಗಳು ಅಭಿನಂದಿಸಿದ್ದಾರೆ.

Wednesday, November 4, 2020

ಸಮುದಾಯ ಭವನ ನಿರ್ಮಾನಕ್ಕೆ ಭೂಮಿ ಪೂಜೆ


ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಭದ್ರಾವತಿ ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
ಭದ್ರಾವತಿ, ನ. ೪:  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ  ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
      ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಉಪಾಧ್ಯಕ್ಷ ಶಿವಾನಂದ ಮೂರ್ತಿ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಪ್ಪ, ತಾಲೂಕು ರೈತ ಮೋರ್ಚಾ  ಉಪಾಧ್ಯಕ್ಷ ಪರಮೇಶ್ವರಪ್ಪ, ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮುಖಂಡ ಎಚ್.ಆರ್ ಪರಶುರಾಮ್, ತಾಲೂಕು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಮ್ರಾನ್ ನವಾಬ್,  ಯುವ ಮೋರ್ಚಾ ಅಧ್ಯಕ್ಷ ವಿಜಯ್ ಹಾಗೂ ಪಕ್ಷದ ಕಾರ್ಯಕರ್ತರು, ದೇವಸ್ಥಾನದ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಡಿಎಸ್‌ಎಸ್ ತಾಲೂಕು ಸಂಘಟನಾ ಸಂಚಾಲಕರಾಗಿ ಆರ್. ರವಿನಾಯ್ಕ

ಆರ್. ರವಿನಾಯ್ಕ
ಭದ್ರಾವತಿ, ನ. ೪: ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಘಟನಾ ಸಂಚಾಲಕರಾಗಿ ಹಳೇನಗರದ ನಿವಾಸಿ ಆರ್. ರವಿನಾಯ್ಕ ನೇಮಕಗೊಂಡಿದ್ದಾರೆ.
    ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೇಮಕ ಆದೇಶ ಹೊರಡಿಸಲಾಗಿದ್ದು, ಜಿಲ್ಲಾ ಸಂಚಾಲಕ ಎ. ಅರ್ಜುನ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಬಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ನೂತನ ತಾಲೂಕು ಸಂಘಟನಾ ಸಂಚಾಲಕರಾದ  ಆರ್. ರವಿನಾಯ್ಕರವರು ಎಂ. ಗುರುಮೂರ್ತಿ ಸೇರಿದಂತೆ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನ.೮ರಂದು ಮೊದಲ ವಾರ್ಷಿಕೋತ್ಸವ, ನೂತನ ಮಹಿಳಾ ಸಂಘ ಉದ್ಘಾಟನೆ

ಭದ್ರಾವತಿ, ನ. ೪: ತಾಲೂಕು ಮಾಜಿ ಸೈನಿಕರ ಸಂಘದ ಮೊದಲ ವಾರ್ಷಿಕೋತ್ಸವ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನ.೮ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನ್ಯೂಟೌನ್ ಬಂಟರ ಭವನದಲ್ಲಿ ನಡೆಯಲಿದೆ.
     ದೇಶದಲ್ಲಿ ಮೊದಲ ಬಾರಿಗೆ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದು ಮಾಜಿ ಸೈನಿಕರ ಹೆಮ್ಮೆಯ ವಿಚಾರವಾಗಿದೆ. ಸಮಾರಂಭದ ಅಂಗವಾಗಿ ರಕ್ತ ಗುಂಪು ತಪಾಸಣೆ ಹಾಗು ರಕ್ತದಾನ ಶಿಬಿರ ಸಹ ಆಯೋಜಿಸಲಾಗಿದೆ. ಮಾಜಿ ಸೈನಿಕರು, ಕುಟುಂಬ ವರ್ಗದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಂಘದ ಕಾರ್ಯದರ್ಶಿ ವಿನೋದ್ ಪೂಜಾರಿ ಕೋರಿದ್ದಾರೆ.

Tuesday, November 3, 2020

ರೋಟರಿ ಕ್ಲಬ್‌ನಿಂದ ೬೫ನೇ ಕನ್ನಡ ರಾಜ್ಯೋತ್ಸವ

ಭದ್ರಾವತಿಯಲ್ಲಿ ರೋಟರಿ ಕ್ಲಬ್ ವತಿಯಿಂದ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ನ. ೩: ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ರೋಟರಿ ಕ್ಲಬ್ ವತಿಯಿಂದ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಕೋವಿಡ್-೧೯ ಹಿನ್ನೆಲೆಯಲ್ಲಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸರಳವಾಗಿ ಆಚರಿಸುವ ಮೂಲಕ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ವೈವಿಧ್ಯತೆಯೊಂದಿಗೆ ನಾಡಿನ ಭವ್ಯ ಪರಂಪರೆ ಸ್ಮರಿಸುವ ಮೂಲಕ ತಾಯಿ ರಾಜರಾಜೇಶ್ವರಿಗೆ ನಮನ ಸಲ್ಲಿಸಲಾಯಿತು.
   ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು.  ಜೋನಲ್ ಲೆಫ್ಟಿನೆಂಟ್ ಕೆ. ನಾಗರಾಜ್ ಮಾತನಾಡಿದರು. ಕಾರ್ಯದರ್ಶಿ ಗಿರೀಶ್, ಹಿರಿಯ ಸದಸ್ಯರಾದ ಅಡವೀಶಯ್ಯ, ವಾದಿರಾಜ ಅಡಿಗ, ಸುಂದರ್‌ಬಾಬು, ಪಿ.ಸಿ ಜೈನ್, ಸುರೇಶ್, ಡಾ. ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೋಲಾರ್ ಲ್ಯಾಬ್ ಆರಂಭ


ಭದ್ರಾವತಿ ಉಜ್ಜನೀಪುರದಲ್ಲಿರುವ ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ಮಾರ್ಟ್ ಸೋಲಾರ್ ಲ್ಯಾಬ್ ಆರಂಭಿಸಲಾಗಿದ್ದು, ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ಫ್ರಾನ್ಸಿಸ್ ಸೆರಾವೋ ತರಬೇತಿಗೆ ಚಾಲನೆ ನೀಡಿದರು.
ಭದ್ರಾವತಿ, ನ. ೩: ನಗರದ ಉಜ್ಜನೀಪುರದಲ್ಲಿರುವ  ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ಮಾರ್ಟ್ ಸೋಲಾರ್ ಲ್ಯಾಬ್ ಆರಂಭಿಸಲಾಗಿದೆ.
ಸೆಲ್ಕೋ ಕಂಪನಿ ಸಹಯೋಗದೊಂದಿಗೆ ಲ್ಯಾಬ್ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಸೋಲಾರ್ ತರಬೇತಿ ನೀಡಲಾಗುತ್ತಿದೆ. ಶಿವಮೊಗ್ಗ ಧರ್ಮಕ್ಷೇತ್ರದ  ಧರ್ಮಗುರು ಫ್ರಾನ್ಸಿಸ್ ಸೆರಾವೊ ತರಬೇತಿಗೆ ಚಾಲನೆ ನೀಡಿದರು. ಕುಲಪತಿ ಸ್ಟ್ಯಾನಿ ಡಿಸೋಜ, ಸಲಹೆಗಾರ ಲಾರೆನ್ಸ್, ಎಂಪಿಎಂ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ಶ್ರೀನಿವಾಸ್, ಸೆಲ್ಕೋ ಕಂಪನಿ ಶಿವಮೊಗ್ಗ ವಿಭಾಗದ ವ್ಯವಸ್ಥಾಪಕ ನವೀನ್ ಶೆಟ್ಟಿ, ಬೆಂಗಳೂರಿನ ಸ್ಕಿಪ್ ಕಾರ್ಯದರ್ಶಿ ಜೋಸೆಫ್ ಸ್ಟಾನ್ಲಿ, ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ಆರೋಗ್ಯರಾಜ್ ಇತರರು ಉಪಸ್ಥಿತರಿದ್ದರು. 
ಈಗಾಗಲೇ ತರಬೇತಿ ಸಂಸ್ಥೆಯಲ್ಲಿ ಯಮಹಾ ಕಂಪನಿ ಸಹಯೋಗದೊಂದಿಗೆ ತರಬೇತಿ ನೀಡಲಾಗುತ್ತಿದ್ದು, ೬ನೇ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೆಲ್ಕೋ ಕಂಪನಿ ಸೋಲಾರ್ ಲ್ಯಾಬ್ ಆರಂಭಿಸಿದ್ದು, ಭವಿಷ್ಯದಲ್ಲಿ ಸೋಲಾರ್ ಉತ್ಪನ್ನಗಳ ತಯಾರಿಕೆಗೆ ಹೆಚ್ಚಿನ ಬೇಡಿಕೆಗಳು ಕಂಡು ಬರುವ ಸಾಧ್ಯತೆಗಳು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ತರಬೇತಿ ಆರಂಭಗೊಂಡಿರುವುದು ಈ ಭಾಗದ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಸಹಕಾರಿಯಾಗಿದೆ. ಉಳಿದಂತೆ ಸಂಸ್ಥೆಯಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. 

ಟೌನ್ ಭಾವಸಾರ ಕ್ಷತ್ರೀಯ ಕೋ ಆಪರೇಟಿವ್ ಸೊಸೈಟಿ ೮೮ನೇ ಮಹಾ ವಾರ್ಷಿಕ ಸಭೆ

ಭದ್ರಾವತಿ ಟೌನ್ ಭಾವಸಾರ ಕ್ಷತ್ರೀಯ ಕೋ ಆಪರೇಟಿವ್ ಸೊಸೈಟಿ ೮೮ನೇ ಮಹಾ ವಾರ್ಷಿಕ ಸಭೆ ಮಂಗಳವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಪಾಂಡುರಂಗ ಕಲ್ಯಾಣ ಮಂದಿರದಲ್ಲಿ ನಡೆಯಿತು.    
ಭದ್ರಾವತಿ, ನ. ೩: ಟೌನ್ ಭಾವಸಾರ ಕ್ಷತ್ರೀಯ ಕೋ ಆಪರೇಟಿವ್ ಸೊಸೈಟಿ ೮೮ನೇ ಮಹಾ ವಾರ್ಷಿಕ ಸಭೆ ಮಂಗಳವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಪಾಂಡುರಂಗ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷ ಟಿ.ಎಸ್  ದುಗ್ಗೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಚ್.ಎನ್ ಯೋಗೇಶ್ ಕುಮಾರ್, ನಿರ್ದೇಶಕರಾದ ನಾಗಭೂಷಣ, ಪಿ. ಹರೀಶ್, ಯು.ಎನ್ ಮುರಳೀಧರ್, ಜಿ.ಎಂ ಅಮಿತ್ ಕುಮಾರ್, ಉಮೇಶ್‌ರಾವ್, ಎಂ.ಆರ್ ಸತೀಶ್, ಪೂರ್ಣಿಮಾ, ಎಂ. ಮಂಜುಳಾ, ಎ.ಎಸ್ ಧನಲಕ್ಷ್ಮಿ, ಕಾರ್ಯದರ್ಶಿಗಳಾದ ಎ.ಎಸ್ ಜಗದೀಶ್ ಕುಮಾರ್, ಜಿ.ಪಿ ರಾಘವೇಂದ್ರ, ಪುಂಡಲಿಕ ರಾವ್ ಮತ್ತು ಕೆ.ಎನ್ ರವೀಂದ್ರನಾಥ್(ಬ್ರದರ‍್ಸ್) ಸೇರಿದಂತೆ ಇತರರು ಪಾಲ್ಗೊಂಡಿದ್ದರು.